ಬ್ರೇಕಿಂಗ್ ನ್ಯೂಸ್
15-06-22 01:13 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 15: ನ್ಯಾಶನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿ ಸತತ ಮೂರನೇ ದಿನವೂ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಸೋದರಿ ಪ್ರಿಯಾಂಕ ಗಾಂಧಿ ಜೊತೆಗೆ ಇಡಿ ಕಚೇರಿಗೆ ಆಗಮಿಸಿದ ರಾಹುಲ್, ವಿಚಾರಣಾ ಕೊಠಡಿಗೆ ತೆರಳಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ, ವಿರೋಧದ ನಡುವೆಯೇ ಇಡಿ ಅಧಿಕಾರಿಗಳು ವಿಚಾರಣೆ ಮುಂದುವರಿಸಿದ್ದಾರೆ.
ಮಂಗಳವಾರ ರಾಹುಲ್ ಗಾಂಧಿಯನ್ನು ಸತತ ಹತ್ತು ಗಂಟೆಗಳ ಕಾಲ ಕುಳ್ಳಿರಿಸಿ, ಇಡಿ ಅಧಿಕಾರಿಗಳು ಪ್ರಶ್ನಿಸಿದ್ದಾರೆ. ವಿವಿಧ ಪ್ರಶ್ನೆಗಳನ್ನು ಮುಂದಿಟ್ಟು ಹೇಳಿಕೆ ದಾಖಲು ಮಾಡಿದ್ದಾರೆ. ಇದೇ ವೇಳೆ, ದೆಹಲಿಯ ಕಾಂಗ್ರೆಸ್ ಕಚೇರಿ ಸೇರಿದಂತೆ ಹಲವು ಕಡೆ ದೇಶದ ವಿವಿಧ ರಾಜ್ಯಗಳ ಕಾಂಗ್ರೆಸ್ ನಾಯಕರು ಆಗಮಿಸಿ ಪ್ರತಿಭಟನೆಗೆ ಮುಂದಾಗಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಎಐಸಿಸಿ ಕಚೇರಿ ಆವರಣದಲ್ಲಿ ಸೆಕ್ಷನ್ 144 ಹೇರಲಾಗಿದ್ದು ಕಾರ್ಯಕರ್ತರು ಪ್ರತಿಭಟನೆ ನಡೆಸುವುದಕ್ಕೆ ಅವಕಾಶ ನೀಡಿಲ್ಲ. ಹೀಗಾಗಿ ಅಲ್ಲಿಗೆ ವಿವಿಧ ರಾಜ್ಯಗಳಿಂದ ಆಗಮಿಸುತ್ತಿರುವ ಸಂಸದರನ್ನು ಪೊಲೀಸರು ಅರ್ಧ ದಾರಿಯಲ್ಲೇ ತಡೆದು ಹಿಂದಕ್ಕೆ ಕಳಿಸುತ್ತಿದ್ದಾರೆ. ಇದೇ ವೇಳೆ, ಅಕ್ಬರ್ ರೋಡ್ ನಿಂದ ಇಡಿ ಕಚೇರಿಗೆ ಪ್ರತಿಭಟನಾ ಧರಣಿ ನಡೆಸಲು ತಯಾರಿ ನಡೆಸಿದ್ದ ಮಹಿಳಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಹಿಳಾ ಪೊಲೀಸರು ಸುತ್ತವರಿದು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದು ಬಸ್ಸಿನಲ್ಲಿ ತುಂಬಿಸಿ ಒಯ್ದಿದ್ದಾರೆ.
ರಾಹುಲ್ ಗಾಂಧಿಯನ್ನು ಇಡಿ ಅಧಿಕಾರಿಗಳು ವಿಚಾರಣೆಗೆ ಕರೆದು ಕಿರುಕುಳ ನೀಡುತ್ತಿರುವುದಕ್ಕೆ ಮುಂದೆ ಬೆಲೆ ತೆರಬೇಕಾಗಬಹುದು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ನಾವು ನಮ್ಮ ಪಕ್ಷದ ಕಚೇರಿಗೆ ತೆರಳುವುದಕ್ಕೂ ಪೊಲೀಸರು ಅನುಮತಿ ನೀಡುತ್ತಿಲ್ಲ. ನಾವು ಇಬ್ಬರು ಮುಖ್ಯಮಂತ್ರಿಗಳಿದ್ದೇವೆ, ಪಕ್ಷದ ಕಚೇರಿಗೆ ತೆರಳಲು ಬಿಡಿ ಎಂದರೂ ಪೊಲೀಸರು ಕೇಳುತ್ತಿಲ್ಲ ಎಂದು ಛತ್ತೀಸ್ ಗಢ ಸಿಎಂ ಭೂಪೇಶ್ ಬಾಘೇಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಹುಲ್ ವಿಚಾರಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಹೈಡ್ರಾಮಾ ನಡೆಸಿದ್ದಾರೆ.
After over 20 hours of grilling, Rahul Gandhi is back at the Enforcement Directorate (ED) office for the 3rd straight day of questioning.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
20-04-26 09:35 pm
HK News Staffer
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm