ಬ್ರೇಕಿಂಗ್ ನ್ಯೂಸ್
20-06-22 03:37 pm HK News Desk ದೇಶ - ವಿದೇಶ
ಚಂಡೀಗಢ, ಜೂನ್ 20: 16 ವರ್ಷದ ಅಪ್ರಾಪ್ತ ಮುಸ್ಲಿಂ ಯುವತಿಯನ್ನು ಮದುವೆಯಾದ ಪ್ರಕರಣದಲ್ಲಿ ಪಂಜಾಬ್- ಹರ್ಯಾಣ ಹೈಕೋರ್ಟ್, ಮುಸ್ಲಿಂ ಪರ್ಸನಲ್ ಕಾನೂನು ಪ್ರಕಾರ ಯುವತಿಗೆ ಮದುವೆಯಾಗಲು 16 ವರ್ಷ ಪೂರ್ತಿಯಾದರೆ ಕಾನೂನು ಸಮ್ಮತ ಎಂದು ತೀರ್ಪು ನೀಡಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ.
ಪಂಜಾಬ್ ರಾಜ್ಯದ ಪಠಾಣ್ ಕೋಟ್ ಮೂಲದ 16 ವರ್ಷದ ಯುವತಿ ಮತ್ತು 21 ವರ್ಷದ ಹುಡುಗ ಹೆತ್ತವರ ವಿರೋಧ ಇದ್ದರೂ ಮದುವೆಯಾಗಿದ್ದರು. ಮದುವೆಯ ಬಳಿಕ ಯುವತಿ ಮನೆಯವರು ಬೆದರಿಕೆ ಹಾಕಿದ್ದರಿಂದ ತಮಗೆ ರಕ್ಷಣೆ ನೀಡಬೇಕೆಂದು ಯುವ ಜೋಡಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿತ್ತು.
ವಿಚಾರಣೆ ನಡೆಸಿದ ಜಸ್ ಜಿತ್ ಸಿಂಗ್ ಬೇಡಿ ಅವರಿದ್ದ ಏಕಸದಸ್ಯ ಪೀಠವು, ವಕೀಲರು ಮುಂದಿಟ್ಟ ವಾದವನ್ನು ಪುರಸ್ಕರಿಸಿದ್ದು ಮುಸ್ಲಿಂ ಯುವತಿಯರ ಮದುವೆ ನಿರ್ಣಯವನ್ನು ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ನಿಯಮದ ಪ್ರಕಾರ ಅನುಸರಿಸಲಾಗುವುದು. ಸರ್ ದಿನ್ಶಾ ಫರ್ದುಂಜಿ ಮುಲ್ಲಾ ಅವರು ಬರೆದಿರುವ ‘ಪ್ರಿನ್ಸಿಪಲ್ ಆಫ್ ಮೊಹಮ್ಮಡನ್ ಲಾ’ ಎನ್ನುವ ಪುಸ್ತಕದಲ್ಲಿ ಉಲ್ಲೇಖಿತ 195 ಆರ್ಟಿಕಲ್ ಪ್ರಕಾರ, ಮುಸ್ಲಿಮ್ ಯುವತಿಯರು ತನ್ನ ಸಂಗಾತಿಯನ್ನು ಆಯ್ದುಕೊಳ್ಳಲು 16 ವರ್ಷ ಆಗಿರಬೇಕು. ಆದರೆ ಹುಡುಗ ಮಾತ್ರ 21 ವರ್ಷ ಪೂರ್ತಿಗೊಳಿಸಿರಬೇಕು. ಇದರ ಪ್ರಕಾರ, ಈ ಮದುವೆ ಮುಸ್ಲಿಂ ಲಾ ಬೋರ್ಡ್ ಪ್ರಕಾರ ಕಾನೂನು ಸಮ್ಮತ ಎಂದು ತೀರ್ಪು ನೀಡಿದ್ದಾರೆ.
ಇತ್ತೀಚೆಗೆ ಜೂನ್ 8ರಂದು ಯುವಕ ಮತ್ತು ಯುವತಿ ಮುಸ್ಲಿಂ ಸಂಪ್ರದಾಯದಂತೆ ಮದುವೆಯಾಗಿದ್ದರು. ಆದರೆ, ಹುಡುಗಿ ಹೆತ್ತವರ ವಿರೋಧ ಇದ್ದುದರಿಂದ ಹುಡುಗನಿಗೆ ಬೆದರಿಕೆ ಹಾಕಿದ್ದರು. ಆನಂತರ, ಯುವ ಜೋಡಿ ಮುಸ್ಲಿಂ ಲಾ ಬೋರ್ಡನ್ನು ಮುಂದಿಟ್ಟು ಹೈಕೋರ್ಟಿಗೆ ಅಪೀಲು ಮಾಡಿತ್ತು. ಮುಸ್ಲಿಂ ಲಾ ಬೋರ್ಡ್ ಪ್ರಕಾರ, ಯುವತಿಯರ ಪ್ರೌಢಾವಸ್ಥೆ ಬಗ್ಗೆ ಉಲ್ಲೇಖ ಇದೆ, ಅದರಂತೆ ನಮಗೆ ರಕ್ಷಣೆ ನೀಡಬೇಕೆಂದು ಮನವಿ ಮಾಡಿದ್ದರು.
ಆದರೆ ಕೋರ್ಟ್ ಈ ತೀರ್ಪು ನೀಡಿದ ಬಳಿಕ ದೇಶದ ವಿವಿಧೆಡೆ ಇದಕ್ಕೆ ವ್ಯತಿರಿಕ್ತ ಅಭಿಪ್ರಾಯಗಳು ಕೇಳಿಬಂದಿವೆ. 16 ವರ್ಷದ ಅಪ್ರಾಪ್ತ ವಯಸ್ಕರಿಗೆ ಮದುವೆಗೆ ಕಾನೂನು ಸಮ್ಮತಿ ನೀಡುವುದರಿಂದ ಮುಸ್ಲಿಂ ಹೆಣ್ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಾರೆ. ಹೀಗಾಗಿ ಈ ರೀತಿಯ ತೀರ್ಪು ನೀಡಬಾರದಿತ್ತು ಎಂದು ಮುಸ್ಲಿಂ ನಾಯಕರೇ ಅಭಿಪ್ರಾಯ ಪಟ್ಟಿದ್ದಾರೆ. ಅಲ್ಲದೆ, ಸಾರ್ವಜನಿಕರಿಂದಲೂ ಭಾರತೀಯ ಕಾನೂನು ಹೊರತುಪಡಿಸಿ ಅಪ್ರಾಪ್ತ ವಯಸ್ಸನ್ನು ನಿರ್ಧರಿಸುವುದು ತಪ್ಪು ಎನ್ನುವ ಅಭಿಪ್ರಾಯ ಕೇಳಿಬಂದಿದೆ.
While giving protection to a Muslim couple aged 16 and 21 years from their family members, the Punjab and Haryana High Court ruled on Monday that a Muslim girl over 16 years of age is competent to enter into a contract of marriage with a person of her choice.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 09:31 pm
HK News Staffer
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 10:06 pm
HK News Staffer
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm