ಬ್ರೇಕಿಂಗ್ ನ್ಯೂಸ್
20-06-22 08:45 pm HK News Desk ದೇಶ - ವಿದೇಶ
ಮುಂಬೈ, ಜೂನ್ 20: ಇಬ್ಬರು ಸೋದರರಿಗೆ ಸೇರಿದ ಎರಡು ಕುಟುಂಬಗಳ ಒಂಬತ್ತು ಮಂದಿ ವಿಷ ಸೇವಿಸಿ ಒಂದೇ ದಿನ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ನಡೆದಿದ್ದು ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ.
ಕರ್ನಾಟಕ ಗಡಿ ಜಿಲ್ಲೆ ಸಾಂಗ್ಲಿಯ ಮೀರಜ್ ತಾಲೂಕಿನ ಮೈಸಾಲ್ ಎನ್ನುವ ಗ್ರಾಮದಲ್ಲಿ ಇಬ್ಬರು ಸೋದರರ ಎರಡು ಮನೆಗಳಲ್ಲಿ ಘಟನೆ ನಡೆದಿದೆ. ವೃತ್ತಿಯಲ್ಲಿ ಪಶು ವೈದ್ಯರಾಗಿದ್ದ ಪೋಪಟ್ ಯಲ್ಲಪ್ಪ ವಾನ್ಮೋರ್(52) ಅವರ ಅಂಬಿಕಾನಗರದ ಮನೆಯಲ್ಲಿ ಆರು ಮಂದಿಯ ಶವ ಕಂಡುಬಂದಿದ್ದರೆ, ಇನ್ನೊಂದು ಸೋದರನ ಮನೆಯಲ್ಲಿ ಮತ್ತೆ ಮೂವರ ಶವ ಪತ್ತೆಯಾಗಿದೆ. ಸಂಗೀತಾ ಪೋಪಟ್ ವಾನ್ಮೋರ್ (48), ಅರ್ಚನಾ ಪೋಪಟ್ ವಾನ್ಮೋರ್(30), ಶುಭಮ್ ಪೋಪಟ್ ವಾನ್ಮೋರ್ (28), ಮಾನಿಕ್ ಯಲ್ಲಪ್ಪ ವಾನ್ಮೋರ್ (49), ರೇಖಾ ಮಾನಿಕ್ ವಾನ್ಮೋರ್(45), ಆದಿತ್ಯ ಮಾನಿಕ್ ವಾನ್ಮೋರ್ (15), ಅನಿತಾ ಮಾಣಿಕ್ ವಾನ್ಮೋರ್(28), ಅಕ್ಕತಾಯಿ ವಾನ್ಮೋರ್(72) ಮೃತರು ಎಂದು ಪೊಲೀಸರು ಗುರುತಿಸಿದ್ದಾರೆ.
ಬ್ಯಾಂಕ್ ಸಾಲ ಹೊಂದಿದ್ದರಿಂದ ಎರಡು ಕುಟುಂಬಗಳು ಧೃತಿಗೆಟ್ಟು ಸಾವಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಅಂಬಿಕಾ ನಗರದ ಮನೆಯಲ್ಲಿ ಬೆಳಗ್ಗಿನಿಂದಲೂ ಓಪನ್ ಆಗಿರಲಿಲ್ಲ. ಸ್ಥಳೀಯರು ಸಂಶಯದಿಂದ ಬಾಗಿಲು ಬಡಿದು ನೋಡಿದ್ದಾರೆ. ಯಾರೂ ಸ್ಪಂದಿಸದೇ ಇದ್ದಾಗ, ಬಾಗಿಲು ಮುರಿದು ನೋಡಿದ್ದು ಮನೆಮಂದಿ ಸಾವು ಕಂಡಿದ್ದರು. ಆನಂತರ ಇನ್ನೊಬ್ಬ ಸೋದರನ ರಾಜಧಾನಿ ಕಾರ್ನರ್ ಎನ್ನುವ ಜಾಗದ ಮನೆಯಲ್ಲಿ ಮೂರು ಶವಗಳು ಪತ್ತೆಯಾಗಿವೆ. ಎರಡೂ ಕಡೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಶವಗಳನ್ನು ಪೋಸ್ಟ್ ಮಾರ್ಟಂ ಕಳಿಸಿದ್ದು, ವೈದ್ಯಕೀಯ ಪರೀಕ್ಷೆಯ ಬಳಿಕವೇ ಸಾವಿನ ಕಾರಣ ತಿಳಿಯಬೇಕಷ್ಟೆ ಎಂದಿದ್ದಾರೆ.
In a tragic incident reported from Mhaisal under Miraj taluka in the Sangli district of Maharashtra, nine members of two brothers' families died after allegedly consuming poison at their houses in separate places on Monday.While six of the family members were found dead in their house at Ambikanagar, the bodies of the other three were recovered from another house in Rajdhani Corner.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm