ಬ್ರೇಕಿಂಗ್ ನ್ಯೂಸ್
30-09-20 09:55 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 30: ಕೇಂದ್ರ ಸರ್ಕಾರ ಅನ್ಲಾಕ್ 5ರ ಮಾರ್ಗಸೂಚಿ ಪ್ರಕಟಿಸಿದ್ದು, ಚಿತ್ರಮಂದಿರ ಮತ್ತು ಈಜುಕೊಳ ತೆರೆಯಲು ಷರತ್ತುಬದ್ಧ ಅನುಮತಿಯನ್ನು ನೀಡಿದೆ. ಬಹುತೇಕ ಚಟುವಟಿಕೆಗಳಿಗೆ ಅಕ್ಟೋಬರ್ 15ರ ನಂತ್ರವೇ ಗ್ರೀನ್ ಸಿಗ್ನಲ್ ನೀಡಿದೆ.
ಈ ಕುರಿತು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಮಾರ್ಗಸೂಚಿ ಬಿಡುಗಡೆ ಮಾಡಲಿದೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ಸಿನಿಮಾ ಮಂದಿರ, ಮಲ್ಟಿಪ್ಲೆಕ್ಸ್ಗಳು ಕಾರ್ಯರಂಭಕ್ಕೆ ಅವಕಾಶ ನೀಡಲಾಗಿದೆ. ಸಿನಿಮಾ ಮಂದಿರಗಳಲ್ಲಿ ಶೇ 50 ರಷ್ಟು ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ಕಲ್ಪಿಸಬೇಕು ಎಂದು ಪ್ರಕಟಣೆ ತಿಳಿಸಿದೆ. ಅಕ್ಟೋಬರ್ 15ರಿಂದ ಕಂಟೈನ್ಮೆಟ್ ಪ್ರದೇಶ ಹೊರತು ಪಡಿಸಿ ಬೇರೆ ಎಲ್ಲಾಕಡೆ ಇವುಗಳ ಕಾರ್ಯಚಾರಣೆಗೆ ಅವಕಾಶ ಕಲ್ಪಿಸಲಾಗಿದೆ.

ಇದೇ ವೇಳೆ ಶಾಲೆಗಳ ಪುನರಾರಂಭದ ಕುರಿತು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ತೆಗೆದುಕೊಳ್ಳಲು ನಿಯಮಗಳನ್ನು ಸರಳಗೊಳಿಸಲಾಗಿದೆ. ಪೋಷಕರ ಲಿಖಿತ ಒಪ್ಪಂದದೊಂದಿಗೆ ವಿದ್ಯಾರ್ಥಿಗಳು ಹಾಜರಾಬಹುದು ಎಂದು ತಿಳಿಸಿದೆ. ಈ ವೇಳೆ ಹಾಜರಾತಿ ಕಡ್ಡಾಯವಲ್ಲ. ಬೇಕಾದಲ್ಲಿ ಆನ್ಲೈನ್ ಕ್ಲಾಸ್ಗಳನ್ನು ಮುಂದುವರೆಸಬಹುದು ಎಂದು ತಿಳಿಸಿದೆ. ಈ ಕುರಿತು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಸುರಕ್ಷತಾ ಮಾರ್ಗಸೂಚಿಗಳನ್ನು ಅನುಸರಿಸಬೇಕು. ಈ ಕುರಿತು ಶಿಕ್ಷಣ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬಹುದು ಎಂದು ಸೂಚಿಸಿದೆ.
ಜೊತೆಗೆ ವ್ಯವಹಾರದಿಂದ ವ್ಯವಹಾರದ ಉದ್ದೇಶಕ್ಕಾಗಿ ನಡೆಯುವ ಪ್ರದರ್ಶನಕ್ಕೂ ಅವಕಾಶ ಕಲ್ಪಿಸಿದ್ದು, ಇವೆಲ್ಲಾ ಮಾರ್ಗಸೂಚಿಗಳ ಪಾಲನೆ ಮಾಡುವುದು ಅಗತ್ಯ ಎಂದು ತಿಳಿಸಿದೆ. ಈ ಕುರಿತು ವಾಣಿಜ್ಯ ಇಲಾಖೆ ನಿರ್ದೇಶನ ನೀಡಲಿದೆ.

ಕ್ರೀಡಾಪಟುಗಳ ತರಬೇತಿಗಾಗಿ ಬಳಸುವ ಈಜುಕೊಳಗಳನ್ನು ತೆರೆಯಲು ಅನುಮತಿ ನೀಡಲಾಗಿದ್ದು, ಇದಕ್ಕಾಗಿ ಕ್ರೀಡಾ ಸಚಿವಾಲಯದ ಮಾರ್ಗದರ್ಶನದಂತೆ ಕಾರ್ಯಚರಣೆ ನಡೆಸಬೇಕು ಎಂದು ತಿಳಿಸಿದೆ.
ಇದೇ ವೇಳೆ ಸಭೆ ಸಮಾರಂಭಗಳಲ್ಲಿ 100 ಜನರಿಗಿಂತ ಹೆಚ್ಚಿನ ಜನ ಭಾಗಿಯಾಗಲು ಅನುಮತಿ ನೀಡಲಾಗಿದೆ. ಇನ್ನು ಕಂಟೈನ್ಮೆಟ್ ಪ್ರದೇಶದಲ್ಲಿ ಅಕ್ಟೋಬರ್ 15ರ ಬಳಿಕ ಪರಿಸ್ಥಿತಿ ಅವಲೋಕಿಸಿ ನಿರ್ಧಾರ ಕೈಗೊಳ್ಳುವ ಬಗ್ಗೆ ಚಿಂತಿಸಲಾಗುವುದು.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm