ಬ್ರೇಕಿಂಗ್ ನ್ಯೂಸ್
30-09-20 09:55 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 30: ಕೇಂದ್ರ ಸರ್ಕಾರ ಅನ್ಲಾಕ್ 5ರ ಮಾರ್ಗಸೂಚಿ ಪ್ರಕಟಿಸಿದ್ದು, ಚಿತ್ರಮಂದಿರ ಮತ್ತು ಈಜುಕೊಳ ತೆರೆಯಲು ಷರತ್ತುಬದ್ಧ ಅನುಮತಿಯನ್ನು ನೀಡಿದೆ. ಬಹುತೇಕ ಚಟುವಟಿಕೆಗಳಿಗೆ ಅಕ್ಟೋಬರ್ 15ರ ನಂತ್ರವೇ ಗ್ರೀನ್ ಸಿಗ್ನಲ್ ನೀಡಿದೆ.
ಈ ಕುರಿತು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಮಾರ್ಗಸೂಚಿ ಬಿಡುಗಡೆ ಮಾಡಲಿದೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ಸಿನಿಮಾ ಮಂದಿರ, ಮಲ್ಟಿಪ್ಲೆಕ್ಸ್ಗಳು ಕಾರ್ಯರಂಭಕ್ಕೆ ಅವಕಾಶ ನೀಡಲಾಗಿದೆ. ಸಿನಿಮಾ ಮಂದಿರಗಳಲ್ಲಿ ಶೇ 50 ರಷ್ಟು ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ಕಲ್ಪಿಸಬೇಕು ಎಂದು ಪ್ರಕಟಣೆ ತಿಳಿಸಿದೆ. ಅಕ್ಟೋಬರ್ 15ರಿಂದ ಕಂಟೈನ್ಮೆಟ್ ಪ್ರದೇಶ ಹೊರತು ಪಡಿಸಿ ಬೇರೆ ಎಲ್ಲಾಕಡೆ ಇವುಗಳ ಕಾರ್ಯಚಾರಣೆಗೆ ಅವಕಾಶ ಕಲ್ಪಿಸಲಾಗಿದೆ.

ಇದೇ ವೇಳೆ ಶಾಲೆಗಳ ಪುನರಾರಂಭದ ಕುರಿತು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ತೆಗೆದುಕೊಳ್ಳಲು ನಿಯಮಗಳನ್ನು ಸರಳಗೊಳಿಸಲಾಗಿದೆ. ಪೋಷಕರ ಲಿಖಿತ ಒಪ್ಪಂದದೊಂದಿಗೆ ವಿದ್ಯಾರ್ಥಿಗಳು ಹಾಜರಾಬಹುದು ಎಂದು ತಿಳಿಸಿದೆ. ಈ ವೇಳೆ ಹಾಜರಾತಿ ಕಡ್ಡಾಯವಲ್ಲ. ಬೇಕಾದಲ್ಲಿ ಆನ್ಲೈನ್ ಕ್ಲಾಸ್ಗಳನ್ನು ಮುಂದುವರೆಸಬಹುದು ಎಂದು ತಿಳಿಸಿದೆ. ಈ ಕುರಿತು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಸುರಕ್ಷತಾ ಮಾರ್ಗಸೂಚಿಗಳನ್ನು ಅನುಸರಿಸಬೇಕು. ಈ ಕುರಿತು ಶಿಕ್ಷಣ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬಹುದು ಎಂದು ಸೂಚಿಸಿದೆ.
ಜೊತೆಗೆ ವ್ಯವಹಾರದಿಂದ ವ್ಯವಹಾರದ ಉದ್ದೇಶಕ್ಕಾಗಿ ನಡೆಯುವ ಪ್ರದರ್ಶನಕ್ಕೂ ಅವಕಾಶ ಕಲ್ಪಿಸಿದ್ದು, ಇವೆಲ್ಲಾ ಮಾರ್ಗಸೂಚಿಗಳ ಪಾಲನೆ ಮಾಡುವುದು ಅಗತ್ಯ ಎಂದು ತಿಳಿಸಿದೆ. ಈ ಕುರಿತು ವಾಣಿಜ್ಯ ಇಲಾಖೆ ನಿರ್ದೇಶನ ನೀಡಲಿದೆ.

ಕ್ರೀಡಾಪಟುಗಳ ತರಬೇತಿಗಾಗಿ ಬಳಸುವ ಈಜುಕೊಳಗಳನ್ನು ತೆರೆಯಲು ಅನುಮತಿ ನೀಡಲಾಗಿದ್ದು, ಇದಕ್ಕಾಗಿ ಕ್ರೀಡಾ ಸಚಿವಾಲಯದ ಮಾರ್ಗದರ್ಶನದಂತೆ ಕಾರ್ಯಚರಣೆ ನಡೆಸಬೇಕು ಎಂದು ತಿಳಿಸಿದೆ.
ಇದೇ ವೇಳೆ ಸಭೆ ಸಮಾರಂಭಗಳಲ್ಲಿ 100 ಜನರಿಗಿಂತ ಹೆಚ್ಚಿನ ಜನ ಭಾಗಿಯಾಗಲು ಅನುಮತಿ ನೀಡಲಾಗಿದೆ. ಇನ್ನು ಕಂಟೈನ್ಮೆಟ್ ಪ್ರದೇಶದಲ್ಲಿ ಅಕ್ಟೋಬರ್ 15ರ ಬಳಿಕ ಪರಿಸ್ಥಿತಿ ಅವಲೋಕಿಸಿ ನಿರ್ಧಾರ ಕೈಗೊಳ್ಳುವ ಬಗ್ಗೆ ಚಿಂತಿಸಲಾಗುವುದು.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm