ಬ್ರೇಕಿಂಗ್ ನ್ಯೂಸ್
30-09-20 09:55 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 30: ಕೇಂದ್ರ ಸರ್ಕಾರ ಅನ್ಲಾಕ್ 5ರ ಮಾರ್ಗಸೂಚಿ ಪ್ರಕಟಿಸಿದ್ದು, ಚಿತ್ರಮಂದಿರ ಮತ್ತು ಈಜುಕೊಳ ತೆರೆಯಲು ಷರತ್ತುಬದ್ಧ ಅನುಮತಿಯನ್ನು ನೀಡಿದೆ. ಬಹುತೇಕ ಚಟುವಟಿಕೆಗಳಿಗೆ ಅಕ್ಟೋಬರ್ 15ರ ನಂತ್ರವೇ ಗ್ರೀನ್ ಸಿಗ್ನಲ್ ನೀಡಿದೆ.
ಈ ಕುರಿತು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಮಾರ್ಗಸೂಚಿ ಬಿಡುಗಡೆ ಮಾಡಲಿದೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ಸಿನಿಮಾ ಮಂದಿರ, ಮಲ್ಟಿಪ್ಲೆಕ್ಸ್ಗಳು ಕಾರ್ಯರಂಭಕ್ಕೆ ಅವಕಾಶ ನೀಡಲಾಗಿದೆ. ಸಿನಿಮಾ ಮಂದಿರಗಳಲ್ಲಿ ಶೇ 50 ರಷ್ಟು ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ಕಲ್ಪಿಸಬೇಕು ಎಂದು ಪ್ರಕಟಣೆ ತಿಳಿಸಿದೆ. ಅಕ್ಟೋಬರ್ 15ರಿಂದ ಕಂಟೈನ್ಮೆಟ್ ಪ್ರದೇಶ ಹೊರತು ಪಡಿಸಿ ಬೇರೆ ಎಲ್ಲಾಕಡೆ ಇವುಗಳ ಕಾರ್ಯಚಾರಣೆಗೆ ಅವಕಾಶ ಕಲ್ಪಿಸಲಾಗಿದೆ.
ಇದೇ ವೇಳೆ ಶಾಲೆಗಳ ಪುನರಾರಂಭದ ಕುರಿತು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ತೆಗೆದುಕೊಳ್ಳಲು ನಿಯಮಗಳನ್ನು ಸರಳಗೊಳಿಸಲಾಗಿದೆ. ಪೋಷಕರ ಲಿಖಿತ ಒಪ್ಪಂದದೊಂದಿಗೆ ವಿದ್ಯಾರ್ಥಿಗಳು ಹಾಜರಾಬಹುದು ಎಂದು ತಿಳಿಸಿದೆ. ಈ ವೇಳೆ ಹಾಜರಾತಿ ಕಡ್ಡಾಯವಲ್ಲ. ಬೇಕಾದಲ್ಲಿ ಆನ್ಲೈನ್ ಕ್ಲಾಸ್ಗಳನ್ನು ಮುಂದುವರೆಸಬಹುದು ಎಂದು ತಿಳಿಸಿದೆ. ಈ ಕುರಿತು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಸುರಕ್ಷತಾ ಮಾರ್ಗಸೂಚಿಗಳನ್ನು ಅನುಸರಿಸಬೇಕು. ಈ ಕುರಿತು ಶಿಕ್ಷಣ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬಹುದು ಎಂದು ಸೂಚಿಸಿದೆ.
ಜೊತೆಗೆ ವ್ಯವಹಾರದಿಂದ ವ್ಯವಹಾರದ ಉದ್ದೇಶಕ್ಕಾಗಿ ನಡೆಯುವ ಪ್ರದರ್ಶನಕ್ಕೂ ಅವಕಾಶ ಕಲ್ಪಿಸಿದ್ದು, ಇವೆಲ್ಲಾ ಮಾರ್ಗಸೂಚಿಗಳ ಪಾಲನೆ ಮಾಡುವುದು ಅಗತ್ಯ ಎಂದು ತಿಳಿಸಿದೆ. ಈ ಕುರಿತು ವಾಣಿಜ್ಯ ಇಲಾಖೆ ನಿರ್ದೇಶನ ನೀಡಲಿದೆ.
ಕ್ರೀಡಾಪಟುಗಳ ತರಬೇತಿಗಾಗಿ ಬಳಸುವ ಈಜುಕೊಳಗಳನ್ನು ತೆರೆಯಲು ಅನುಮತಿ ನೀಡಲಾಗಿದ್ದು, ಇದಕ್ಕಾಗಿ ಕ್ರೀಡಾ ಸಚಿವಾಲಯದ ಮಾರ್ಗದರ್ಶನದಂತೆ ಕಾರ್ಯಚರಣೆ ನಡೆಸಬೇಕು ಎಂದು ತಿಳಿಸಿದೆ.
ಇದೇ ವೇಳೆ ಸಭೆ ಸಮಾರಂಭಗಳಲ್ಲಿ 100 ಜನರಿಗಿಂತ ಹೆಚ್ಚಿನ ಜನ ಭಾಗಿಯಾಗಲು ಅನುಮತಿ ನೀಡಲಾಗಿದೆ. ಇನ್ನು ಕಂಟೈನ್ಮೆಟ್ ಪ್ರದೇಶದಲ್ಲಿ ಅಕ್ಟೋಬರ್ 15ರ ಬಳಿಕ ಪರಿಸ್ಥಿತಿ ಅವಲೋಕಿಸಿ ನಿರ್ಧಾರ ಕೈಗೊಳ್ಳುವ ಬಗ್ಗೆ ಚಿಂತಿಸಲಾಗುವುದು.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm