ಬ್ರೇಕಿಂಗ್ ನ್ಯೂಸ್
28-06-22 05:34 pm HK News Desk ದೇಶ - ವಿದೇಶ
ಕೊಲಂಬೋ, ಜೂ 27: ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಹೊಸ ಸಮಸ್ಯೆ ಉಂಟಾಗಿದೆ.
ತೈಲ ಸಂಗ್ರಹ ಖಾಲಿಯಾಗಿದೆ, ವಾಹನ ಸಂಚಾರಕ್ಕೆ ಸರ್ಕಾರ ಹೊಸ ನಿಯಮಗಳನ್ನು ಘೋಷಣೆ ಮಾಡಿದೆ.
ಶ್ರೀಲಂಕಾದ ಆಡಳಿತ ಜುಲೈ 10ರ ತನಕ ತುರ್ತು ವಾಹನಗಳ ಸಂಚಾರಕ್ಕೆ ಮಾತ್ರ ಅನುಮತಿ ನೀಡಿದೆ. ಸೋಮವಾರ ಮಧ್ಯರಾತ್ರಿಯಿಂದಲೇ ಈ ನಿಯಮ ಜಾರಿಗೆ ಬರಲಿದೆ. ದೇಶದಲ್ಲಿನ ತೈಲ ಸಂಗ್ರಹ ಸಂಪೂರ್ಣ ಖಾಲಿಯಾಗಿದ್ದು, ದೇಶದ 22 ಮಿಲಿಯನ್ ಜನರಿಗೆ ಹೊಸ ಸಂಕಷ್ಟ ಎದುರಾಗಿದೆ.
ಸರ್ಕಾರದ ಆದೇಶದ ಪ್ರಕಾರ ತುರ್ತು ವಾಹನಗಳ ಪಟ್ಟಿಯಲ್ಲಿ ಆರೋಗ್ಯ, ಕಾನೂನು & ಸುವ್ಯವಸ್ಥೆ, ಬಂದರು, ವಿಮಾನ ನಿಲ್ದಾಣ, ಆಹಾರ ಸರಬರಾಜು ಮತ್ತು ಕೃಷಿ ಸಂಬಂಧಿತ ವಾಹನಗಳು ಮಾತ್ರ ಸೇರಿವೆ. ಈ ವಾಹನಗಳು ಮಾತ್ರ ಸಂಚಾರ ನಡೆಸಬಹುದಾಗಿದೆ.
ಸೋಮವಾರ ಮಧ್ಯರಾತ್ರಿಯಿಂದ ಜುಲೈ 10ರ ತನಕ ತುರ್ತು ವಾಹನಗಳನ್ನು ಬಿಟ್ಟು ಇತರ ಎಲ್ಲಾ ವಾಹನಗಳ ಸಂಚಾರವನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಈ ಮೂಲಕ ದ್ವೀಪ ರಾಷ್ಟ್ರದ ಆರ್ಥಿಕ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ.
ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿರುವ ಕಾರಣ ಶಾಲೆಗಳನ್ನು ಮುಚ್ಚಲಾಗಿದೆ. ಖಾಸಗಿ ಕಂಪನಿಗಳ ಸಿಬ್ಭಂದಿಗಳು ಮನೆಯಿಂದ ಕಾರ್ಯ ನಿರ್ವಹಣೆ ಮಾಡುವಂತೆ ಸೂಚನೆ ನೀಡಲಾಗಿದೆ.
ಇದೇ ಮೊದಲ ಬಾರಿಗೆ ದ್ವೀಪ ರಾಷ್ಟ್ರ ತೈಲ ಸಂಗ್ರಹ ಕೊರತೆ ಎದುರಿಸುತ್ತಿದೆ. ಸರ್ಕಾರಿ ಕಚೇರಿಗಳ ಸಿಬ್ಬಂದಿಗಳಿಗೆ ಸಹ ಮನೆಯಿಂದಲೇ ಕೆಲಸ ಮಾಡುವ ಅವಕಾಶ ಉಪಯೋಗಿಸಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ.
ಶ್ರೀಲಂಕಾ ಕ್ರೆಡಿಟ್ ಲೈನ್ ಆಧಾರದಲ್ಲಿ ಭಾರತದಿಂದ ಹೊಸದಾಗಿ ಪೆಟ್ರೋಲ್ ಪೂರೈಕೆಗಾಗಿ ಎದುರು ನೋಡುತ್ತಿದೆ. ಮೂರು ದಿನಗಳಲ್ಲಿ ಪೆಟ್ರೋಲ್ ಲಭ್ಯವಾಗಲಿದೆ ಎಂದು ದೇಶದ ಜನರಿಗೆ ಭರವಸೆ ನೀಡಲಾಗಿತ್ತು.
ಮಿತಿ ಮೀರಿ ಬಾಕಿ ಉಳಿಸಿಕೊಂಡಿರುವ ಪರಿಣಾಮ ತೈಲ ಪೂರೈಕೆದಾರರು ಶ್ರೀಲಂಕಾಕ್ಕೆ ತೈಲ ಸರಬರಾಜು ಮಾಡಲು ಮುಂದೆ ಬರುತ್ತಿಲ್ಲ. ಆದ ಕಾರಣ ದೇಶದಲ್ಲಿ ಸಂಗ್ರಹವಿದ್ದ ಎಲ್ಲಾ ತೈಲ ಖಾಲಿಯಾಗಿದೆ.
ಭಾರತ ಸರ್ಕಾರ ಕ್ರೆಡಿಟ್ ಲೈನ್ ಆಧಾರದಲ್ಲಿ ಇದುವರೆಗೂ ಎರಡು ಬಾರಿ ಶ್ರೀಲಂಕಾಗೆ ತೈಲ ಸರಬರಾಜು ಮಾಡಿದೆ. ಆದರೂ ಸಹ ಶ್ರೀಲಂಕಾಗೆ ಅಗತ್ಯವಿರುಷ್ಟು ತೈಲ ಹೊಂದಿಕೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ.
Cash-strapped Sri Lanka suspended nationwide fuel sales, except for essential services, for nearly a fortnight as the island faces a rapidly worsening economic crisis.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 07:31 pm
HK News Desk
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm