ಬ್ರೇಕಿಂಗ್ ನ್ಯೂಸ್
28-06-22 09:14 pm HK News Desk ದೇಶ - ವಿದೇಶ
ಉದಯಪುರ, ಜೂನ್ 28: ಬಿಜೆಪಿ ನಾಯಕಿ ನೂಪುರ್ ಶರ್ಮಾ ಪರವಾಗಿ ಪೋಸ್ಟ್ ಮಾಡಿದ್ದಕ್ಕಾಗಿ ಯುವಕನೊಬ್ಬನನ್ನು ಹಾಡಹಗಲೇ ಕತ್ತು ಕೊಯ್ದು ಕೊಲೆಗೈದಿದ್ದಲ್ಲದೆ, ಕೊಲೆಯ ಕೃತ್ಯವನ್ನು ಮೊಬೈಲಿನಲ್ಲಿ ಚಿತ್ರೀಕರಿಸಿ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಘಟನೆ ರಾಜಸ್ಥಾನದ ಉದಯಪುರದಲ್ಲಿ ನಡೆದಿದೆ. ದುಷ್ಕೃತ್ಯದ ಬೆನ್ನಲ್ಲೇ ಉದಯಪುರದಲ್ಲಿ ಪ್ರತಿಭಟನೆ, ಹಿಂಸಾಚಾರ ಭುಗಿಲೆದ್ದಿದೆ.
ಟೈಲರ್ ಕೆಲಸ ಮಾಡುತ್ತಿದ್ದ ಕನ್ನಯ್ಯ ಲಾಲ್ ಕೊಲೆಯಾದ ಯುವಕ. ಉದಯಪುರ್ ನಗರದ ಧನ್ ಮಂಡಿ ಏರಿಯಾದಲ್ಲಿ ಘಟನೆ ನಡೆದಿದೆ. ಮಧ್ಯಾಹ್ನ ಅಂಗಿ ಹೊಲಿಸುವುದಕ್ಕೆ ಅಳತೆ ನೀಡುವುದಕ್ಕಾಗಿ ಇಬ್ಬರು ಅಪರಿಚಿತರು ಟೈಲರ್ ಅಂಗಡಿಗೆ ಬಂದಿದ್ದರು. ಅಳತೆ ತೆಗೆಯಲು ಮುಂದಾಗುತ್ತಿದ್ದಂತೆ ಒಬ್ಬಾತ ಕತ್ತಿ ತೆಗೆದು ತಲೆಯನ್ನು ಕಡಿದಿದ್ದಾನೆ. ಇದನ್ನು ಆತನ ಜೊತೆಗೆ ಬಂದಿದ್ದ ಇನ್ನೊಬ್ಬ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾನೆ.

ಕೊಲೆ ಕೃತ್ಯ ನಡೆಸಿದವನನ್ನು ರಿಯಾಜ್ ಅಖ್ತರ್ ಎಂದು ಪೊಲೀಸರು ಗುರುತಿಸಿದ್ದು, ವಿಡಿಯೋ ಚಿತ್ರೀಕರಿಸಿದ ವ್ಯಕ್ತಿಯನ್ನು ಗೋಸ್ ಮಹಮ್ಮದ್ ಎಂದು ಗುರುತಿಸಿದ್ದಾರೆ. ಕೊಲೆ ಕೃತ್ಯ ನಡೆಸಿದ್ದಲ್ಲದೆ, ಅದರ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ಅಲ್ಲದೆ, ಇದೇ ರೀತಿ ಪ್ರಧಾನಿ ಮೋದಿಗೂ ಗತಿಯಾಗಲಿದೆ. ಇದೇ ರೀತಿಯ ಶಿಕ್ಷೆಯನ್ನು ಕೊಡದೆ ಬಿಡಲಾರೆವು ಎಂದು ಬೆದರಿಕೆ ಒಡ್ಡಿದ್ದಾರೆ. ಘಟನೆ ನಡೆದ ಒಂದು ಗಂಟೆಯ ಅಂತರದಲ್ಲಿ ಇಬ್ಬರು ಹಂತಕರನ್ನೂ ಪೊಲೀಸರು ಬಂಧಿಸಿದ್ದಾರೆ.

ಘಟನೆ ಬಗ್ಗೆ ಆಕ್ರೋಶಿತರ ಗುಂಪು ಪ್ರತಿಭಟನೆ ನಡೆಸಿದ್ದು ರಸ್ತೆಯಲ್ಲಿ ಟೈರ್ ಸುಟ್ಟು ಹಿಂಸಾಚಾರ ನಡೆಸಿದೆ. ಅಲ್ಲದೆ, ಆರೋಪಿಗಳನ್ನು ಬಂಧಿಸಿ ಗಲ್ಲು ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದೆ. ಉದಯಪುರ್ ನಗರದ ಹಲವೆಡೆ ಉದ್ರಿಕ್ತ ಸ್ಥಿತಿ ನೆಲೆಸಿದ್ದು, 144 ಸೆಕ್ಷನ್ ಮತ್ತು ಕರ್ಫ್ಯೂ ಹೇರಲಾಗಿದೆ. ಅಲ್ಲದೆ, ಉದಯಪುರ್ ನಗರದಲ್ಲಿ 24 ಗಂಟೆ ಕಾಲ ಇಂಟರ್ನೆಟ್ ಸ್ಥಗಿತ ಮಾಡಲಾಗಿದೆ. ಉದಯಪುರ್ ನಗರದಲ್ಲಿ ಭಾರೀ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಅಲ್ಲದೆ. ಇಡೀ ರಾಜಸ್ಥಾನದಾದ್ಯಂತ ಅಲರ್ಟ್ ಘೋಷಣೆ ಮಾಡಲಾಗಿದೆ.
![]()
ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಘಟನೆಯನ್ನು ಖಂಡಿಸಿದ್ದು, ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ಆರೋಪಿಗಳಿಗೆ ಶಿಕ್ಷೆ ವಿಧಿಸದೆ ಬಿಡುವುದಿಲ್ಲ. ಇದು ಸಾಮಾನ್ಯ ರೀತಿಯ ಕೃತ್ಯ ಅಲ್ಲ. ಅತ್ಯಂತ ಅಮಾನುಷ ಕೃತ್ಯ. ಆದರೆ ಜನರು ಶಾಂತಿ ಕಾಪಾಡಬೇಕು. ವಿಡಿಯೋವನ್ನು ಷೇರ್ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.
A man was allegedly beheaded by two men in broad daylight in Udaipur's Maldas area on Tuesday. Soon after, the men posted a video on social media boasting about the beheading and threatened PM Modi’s life as well, said the police. The two accused were arrested within hours of the incident.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm