ಬ್ರೇಕಿಂಗ್ ನ್ಯೂಸ್
29-06-22 10:25 pm HK News Desk ದೇಶ - ವಿದೇಶ
ಮುಂಬೈ, ಜೂನ್ 29: ಅಂತೂ ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರಕಾರ ಪತನಗೊಂಡಿದೆ. ವಿಶ್ವಾಸ ಮತ ಸಾಬೀತು ಪಡಿಸುವ ರಾಜ್ಯಪಾಲರ ಸೂಚನೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸುತ್ತಿದ್ದಂತೆಯೇ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಜೂನ್ 30ರಂದು ವಿಶ್ವಾಸ ಮತ ಸಾಬೀತು ಮಾಡುವಂತೆ ರಾಜ್ಯಪಾಲರು ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಸೂಚಿಸಿದ್ದರು. ಆದರೆ, ರಾಜ್ಯಪಾಲರ ಈ ನಡೆಗೆ ಶಿವಸೇನೆ ಮುಖಂಡ ಸಂಜಯ ರಾವುತ್, ಸಿಎಂ ಠಾಕ್ರೆ ಸೇರಿದಂತೆ ಹಲವರು ವಿರೋಧ ವ್ಯಕ್ತಪಡಿಸಿದ್ದರು. ಸುಪ್ರೀಂ ಕೋರ್ಟ್ನಲ್ಲಿ ಈ ಬಗ್ಗೆ ಪ್ರಶ್ನಿಸುವುದಾಗಿ ಹೇಳಿದ್ದರು. ಅದರಂತೆ, ಇಂದು ಇಡೀ ದಿನ ಸುಪ್ರೀಂ ಕೋರ್ಟಿನಲ್ಲಿ ಹಿರಿಯ ವಕೀಲರಿಂದ ಜಟಾಪಟಿ ನಡೆದಿತ್ತು. ರಾತ್ರಿಯೇ ತೀರ್ಪು ನೀಡುವುದಾಗಿ ಸುಪ್ರೀ ಕೋರ್ಟ್ ಹೇಳಿದ್ದರಿಂದ ಕುತೂಹಲ ಉಂಟಾಗಿತ್ತು.
ಇದೀಗ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಪರ- ವಿರೋಧ ವಕೀಲರ ವಾದ ಆಲಿಸಿದ ಬಳಿಕ ರಾಜ್ಯಪಾಲರ ನಡೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿದ್ದಾರೆ. ಶಿವಸೇನೆಯ 40ಕ್ಕೂ ಹೆಚ್ಚು ಶಾಸಕರು ಏಕನಾಥ ಶಿಂಧೆ ನೇತೃತ್ವದಲ್ಲಿ ಬಂಡಾಯ ಎದ್ದಿರುವುದರಿಂದ ಠಾಕ್ರೆ ಸರಕಾರ ಬಹುಮತ ಕಳಕೊಂಡಿತ್ತು. ವಾರ ಕಾಲ ಗುವಾಹಟಿಯಲ್ಲಿ ಬಂಡಾಯ ಶಾಸಕರು ಬೀಡು ಬಿಟ್ಟಿದ್ದರು. ಕಾಂಗ್ರೆಸ್, ಎನ್ ಸಿಪಿ ಜೊತೆಗಿನ ಮೈತ್ರಿಯಿಂದ ಹಿಂದೆ ಸರಿಯುವ ಸೂಚನೆ ನೀಡಿದ್ದರು. ಇದೀಗ ಠಾಕ್ರೆ ರಾಜಿನಾಮೆ ನೀಡಿರುವುದರಿಂದ
ಶಿವಸೇನೆಯ ಬಂಡಾಯ ಶಾಸಕರು ಬಿಜೆಪಿ ಜೊತೆ ಸೇರಿ ಹೊಸ ಸರಕಾರ ಸ್ಥಾಪನೆ ಮಾಡಲಿದ್ದಾರೆ. ಬಂಡಾಯ ಶಾಸಕರ ಜೊತೆ ಶಿವಸೇನೆಯ ಎಂಟು ಮಂದಿ ಸಚಿವರೂ ಸೇರಿಕೊಂಡಿದ್ದರು. ಉದ್ಧವ್ ಠಾಕ್ರೆ ಮತ್ತು ಅವರ ಮಗ ಆದಿತ್ಯ ಠಾಕ್ರೆ ಮಾತ್ರ ಉಳಿದುಕೊಂಡಿದ್ದರು. ಏನೇ ಮನವಿ ಮಾಡಿಕೊಂಡರೂ, ಬಂಡಾಯ ಶಾಸಕರು ಪಟ್ಟು ಸಡಿಲ ಮಾಡದೇ ಇದ್ದುದರಿಂದ ಸರಕಾರ ಅಂತೂ ಪತನಗೊಂಡಿದೆ.
Uddhav Thackeray resigned as Maharashtra Chief Minister on Wednesday, June 29. Uddhav Thackeray’s announcement followed soon after the Supreme Court rejected MVA government’s plea seeking a stay on floor test in the Maharashtra Assembly.
22-05-25 11:09 pm
HK News Desk
Ramanagara, Bangalore South: ರಾಮನಗರ ಜಿಲ್ಲೆಯನ್...
22-05-25 09:07 pm
Alok Kumar IPS, DGP, Phone Tapping: ರಫ್ ಅಂಡ್...
22-05-25 07:36 pm
BJP Chalavadi Narayanaswamy, Congress, Priyan...
22-05-25 06:31 pm
Hassan, Bangalore, Heart Attack: ಪ್ರತ್ಯೇಕ ಪ್ರ...
22-05-25 01:09 pm
22-05-25 05:53 pm
HK News Desk
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
Operation Sindhoor, Rahul Gandhi,.Pakistan: ಆ...
20-05-25 01:42 pm
22-05-25 10:29 pm
Mangalore Correspondent
Thokottu Auto Driver Fight, Mangalore: ಅಡ್ಡ ಇ...
22-05-25 10:19 pm
Kishor Kumar Puttur; ಸರ್ಕಾರಿ ಆಸ್ಪತ್ರೆ ಬಳಿಯ ಜನ...
21-05-25 11:09 pm
Mangalore Beltangady, Akanksha Suicide, Updat...
21-05-25 10:45 pm
MP Kota Srinivas Poojary, Mangalore: ಇಂದಿರಾ ಗ...
21-05-25 09:30 pm
22-05-25 02:22 pm
HK News Desk
Mangalore Fraud, Currency trading scam: ಕರೆನ್...
19-05-25 09:38 pm
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm