ಬ್ರೇಕಿಂಗ್ ನ್ಯೂಸ್
29-06-22 10:25 pm HK News Desk ದೇಶ - ವಿದೇಶ
ಮುಂಬೈ, ಜೂನ್ 29: ಅಂತೂ ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರಕಾರ ಪತನಗೊಂಡಿದೆ. ವಿಶ್ವಾಸ ಮತ ಸಾಬೀತು ಪಡಿಸುವ ರಾಜ್ಯಪಾಲರ ಸೂಚನೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸುತ್ತಿದ್ದಂತೆಯೇ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಜೂನ್ 30ರಂದು ವಿಶ್ವಾಸ ಮತ ಸಾಬೀತು ಮಾಡುವಂತೆ ರಾಜ್ಯಪಾಲರು ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಸೂಚಿಸಿದ್ದರು. ಆದರೆ, ರಾಜ್ಯಪಾಲರ ಈ ನಡೆಗೆ ಶಿವಸೇನೆ ಮುಖಂಡ ಸಂಜಯ ರಾವುತ್, ಸಿಎಂ ಠಾಕ್ರೆ ಸೇರಿದಂತೆ ಹಲವರು ವಿರೋಧ ವ್ಯಕ್ತಪಡಿಸಿದ್ದರು. ಸುಪ್ರೀಂ ಕೋರ್ಟ್ನಲ್ಲಿ ಈ ಬಗ್ಗೆ ಪ್ರಶ್ನಿಸುವುದಾಗಿ ಹೇಳಿದ್ದರು. ಅದರಂತೆ, ಇಂದು ಇಡೀ ದಿನ ಸುಪ್ರೀಂ ಕೋರ್ಟಿನಲ್ಲಿ ಹಿರಿಯ ವಕೀಲರಿಂದ ಜಟಾಪಟಿ ನಡೆದಿತ್ತು. ರಾತ್ರಿಯೇ ತೀರ್ಪು ನೀಡುವುದಾಗಿ ಸುಪ್ರೀ ಕೋರ್ಟ್ ಹೇಳಿದ್ದರಿಂದ ಕುತೂಹಲ ಉಂಟಾಗಿತ್ತು.
ಇದೀಗ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಪರ- ವಿರೋಧ ವಕೀಲರ ವಾದ ಆಲಿಸಿದ ಬಳಿಕ ರಾಜ್ಯಪಾಲರ ನಡೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿದ್ದಾರೆ. ಶಿವಸೇನೆಯ 40ಕ್ಕೂ ಹೆಚ್ಚು ಶಾಸಕರು ಏಕನಾಥ ಶಿಂಧೆ ನೇತೃತ್ವದಲ್ಲಿ ಬಂಡಾಯ ಎದ್ದಿರುವುದರಿಂದ ಠಾಕ್ರೆ ಸರಕಾರ ಬಹುಮತ ಕಳಕೊಂಡಿತ್ತು. ವಾರ ಕಾಲ ಗುವಾಹಟಿಯಲ್ಲಿ ಬಂಡಾಯ ಶಾಸಕರು ಬೀಡು ಬಿಟ್ಟಿದ್ದರು. ಕಾಂಗ್ರೆಸ್, ಎನ್ ಸಿಪಿ ಜೊತೆಗಿನ ಮೈತ್ರಿಯಿಂದ ಹಿಂದೆ ಸರಿಯುವ ಸೂಚನೆ ನೀಡಿದ್ದರು. ಇದೀಗ ಠಾಕ್ರೆ ರಾಜಿನಾಮೆ ನೀಡಿರುವುದರಿಂದ
ಶಿವಸೇನೆಯ ಬಂಡಾಯ ಶಾಸಕರು ಬಿಜೆಪಿ ಜೊತೆ ಸೇರಿ ಹೊಸ ಸರಕಾರ ಸ್ಥಾಪನೆ ಮಾಡಲಿದ್ದಾರೆ. ಬಂಡಾಯ ಶಾಸಕರ ಜೊತೆ ಶಿವಸೇನೆಯ ಎಂಟು ಮಂದಿ ಸಚಿವರೂ ಸೇರಿಕೊಂಡಿದ್ದರು. ಉದ್ಧವ್ ಠಾಕ್ರೆ ಮತ್ತು ಅವರ ಮಗ ಆದಿತ್ಯ ಠಾಕ್ರೆ ಮಾತ್ರ ಉಳಿದುಕೊಂಡಿದ್ದರು. ಏನೇ ಮನವಿ ಮಾಡಿಕೊಂಡರೂ, ಬಂಡಾಯ ಶಾಸಕರು ಪಟ್ಟು ಸಡಿಲ ಮಾಡದೇ ಇದ್ದುದರಿಂದ ಸರಕಾರ ಅಂತೂ ಪತನಗೊಂಡಿದೆ.
Uddhav Thackeray resigned as Maharashtra Chief Minister on Wednesday, June 29. Uddhav Thackeray’s announcement followed soon after the Supreme Court rejected MVA government’s plea seeking a stay on floor test in the Maharashtra Assembly.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
05-05-25 11:22 am
Mangalore Correspondent
Sharan Pumpwell, Mangalore, threat: ಶರಣ್ ಪಂಪ್...
04-05-25 11:26 pm
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm