ಬ್ರೇಕಿಂಗ್ ನ್ಯೂಸ್
01-07-22 08:50 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 1: ದೇಶದಲ್ಲಿ ಆಗಿರುವ ಇಷ್ಟೆಲ್ಲಾ ಅನಾಹುತಗಳಿಗೆ ಬಿಜೆಪಿ ನಾಯಕಿ ನೂಪುರ್ ಶರ್ಮಾ ಕಾರಣ. ಎಲ್ಲದಕ್ಕೂ ಆಕೆಯ ಹೊಣೆಗಾರರಾಗುತ್ತಾರೆ. ದೇಶದ ಜನರ ಭಾವನೆಗಳನ್ನು ಕೆದಕುವ ಹೇಳಿಕೆ ನೀಡಿದ್ದು ಅಕ್ಷಮ್ಯ. ಇದಕ್ಕಾಗಿ ಆಕೆ ಬಹಿರಂಗವಾಗಿ ದೇಶದ ಜನರ ಮುಂದೆ ಕ್ಷಮೆ ಕೇಳಬೇಕು ಎಂಬುದಾಗಿ ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿದೆ.
ದೇಶದ ವಿವಿಧೆಡೆ ಆಕೆಯ ವಿರುದ್ಧ ದಾಖಲಾಗಿರುವ ಎಫ್ಐಆರ್ ಗಳನ್ನು ಜೊತೆಯಾಗಿಸಿ, ದೆಹಲಿ ಪೊಲೀಸರು ತನಿಖೆ ನಡೆಸುವಂತೆ ಆದೇಶ ನೀಡಬೇಕು ಎಂದು ಕೋರಿ ನೂಪುರ್ ಶರ್ಮಾ ಪರ ವಕೀಲ ಮನೀಂದರ್ ಸಿಂಗ್ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಪರಿಗಣಿಸಲು ನಿರಾಕರಿಸಿದ ಸೂರ್ಯಕಾಂತ್ ಮತ್ತು ಜೆಬಿ ಪಾರ್ದಿವಾಲಾ ಅವರಿದ್ದ ಪೀಠವು, ದೇಶದಲ್ಲಿ ಈಗ ಏನಾಗುತ್ತಿದೆ ಅದಕ್ಕೆಲ್ಲ ಆ ಲೇಡಿಯೇ ಕಾರಣ ಎಂದು ಅಭಿಪ್ರಾಯ ಪಟ್ಟಿತು. ಅಲ್ಲದೆ, ವಕೀಲರ ವಾದ ಆಲಿಸಿದ ಬಳಿಕ ಪ್ರತಿಕ್ರಿಯಿಸಿದ ನ್ಯಾಯಾಧೀಶ ಸೂರ್ಯಕಾಂತ್, ಇಷ್ಟೆಲ್ಲ ಅನಾಹುತಗಳಿಗೆ ಆಕೆಯ ಲೂಸ್ ಟಾಕ್ ಕಾರಣ. ಭಾವನೆಗಳನ್ನು ಕೆದಕುವುದು ಆಕೆಯ ಕೆಲಸವೇ ಎಂದು ಪ್ರಶ್ನಿಸಿ ಗರಂ ಆದರು.
ಆಕೆ ಈಗಾಗಲೇ ಕ್ಷಮೆ ಕೇಳಿದ್ದಾರೆ ಎಂದು ವಕೀಲರು ಹೇಳಿದ್ದಕ್ಕೆ, ಅದು ಕ್ಷಮೆಯಲ್ಲ. ಆಕೆ ಬಹಿರಂಗವಾಗಿ ಟಿವಿ ಮುಂದೆ ಬಂದು ತನ್ನ ಹೇಳಿಕೆಯ ಬಗ್ಗೆ ಕ್ಷಮೆ ಕೇಳಬೇಕು. ದೇಶದ ಜನರ ಮುಂದೆ ಕ್ಷಮೆ ಕೇಳಬೇಕು. ಅದು ದೇಶಾದ್ಯಂತ ಪ್ರಸಾರ ಆಗಬೇಕು ಎಂದು ಹೇಳಿದರು. ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಇರಲಿ ಎಂದು ಹೇಳೋದು ಕ್ಷಮೆ ಕೇಳಿದಂತಾಗುವುದಿಲ್ಲ. ಬೇಷರತ್ ಕ್ಷಮೆ ಯಾಚನೆ ಮಾಡಬೇಕು ಎಂದು ನ್ಯಾಯಾಧೀಶರು ಅಭಿಪ್ರಾಯ ಪಟ್ಟಿದ್ದಾರೆ.
ಈ ಹಿಂದೆ ಬೇರೆ ಪ್ರಕರಣಗಳಲ್ಲಿ ವಿವಿಧೆಡೆ ಕೇಸು ದಾಖಲಾಗಿದ್ದರೆ, ಅವನ್ನು ಒಂದೇ ಕಡೆ ಕ್ಲಬ್ ಮಾಡಿ ತನಿಖೆಗೆ ಅವಕಾಶ ಕೊಟ್ಟ ಉದಾಹರಣೆ ಇದೆ ಎಂದು ವಕೀಲರು ಕೇಳಿದ್ದಕ್ಕೆ, ಅದು ಬೇರೆ ಬೇರೆ ರೀತಿಯ ಪ್ರಕರಣ ಇರಬಹುದು. ಇದು ಆ ರೀತಿಯ ಕೇಸ್ ಅಲ್ಲ. ಇಲ್ಲಿ ದಾಖಲಾಗಿರುವ ಪ್ರಕರಣಗಳು ಬೇರೆ ಬೇರೆ ಇವೆ. ಅರ್ನಾಬ್ ಗೋಸ್ವಾಮಿ ಪ್ರಕರಣದಲ್ಲಿ ಟಿವಿ ಡಿಬೇಟ್ ನಲ್ಲಿ ಚರ್ಚೆಯಾಗಿದ್ದ ವಿಚಾರಕ್ಕೆ ಕೇಸ್ ಆಗಿದ್ದನ್ನು ಒಂದೇ ಕಡೆ ಕ್ಲಬ್ ಮಾಡಲು ಅವಕಾಶ ನೀಡಲಾಗಿತ್ತು. ನಾವು ಕಾನೂನು ಏನಿದೆಯೋ ಅದರಂತೆ ನಡೆದುಕೊಳ್ಳಬೇಕಾಗುತ್ತದೆ. ಈ ಪ್ರಕರಣದಲ್ಲಿ ನಮಗೆ ಆ ರೀತಿಯ ಏಕಪ್ರಕಾರದ ಅಂಶಗಳು ಕಂಡುಬರುತ್ತಿಲ್ಲ ಎಂದು ಅರ್ಜಿಯನ್ನು ನಿರಾಕರಿಸಿದ್ದಾರೆ.
The Supreme Court today blamed former BJP spokesperson Nupur Sharma for igniting tension with her comments on Prophet Muhammad and said "she and her loose tongue have set the country on fire". In unusually strong comments, the court said she must apologise to the country. "The way she has ignited emotions across the country. This lady is single-handedly responsible for what is happening in the country," said the judges.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 07:31 pm
HK News Desk
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm