ಬ್ರೇಕಿಂಗ್ ನ್ಯೂಸ್
04-07-22 01:30 pm HK News Desk ದೇಶ - ವಿದೇಶ
ಮುಂಬೈ, ಜುಲೈ 4: ಮಹಾರಾಷ್ಟ್ರದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಏಕನಾಥ ಶಿಂಧೆ ಸರಕಾರ ವಿಶ್ವಾಸ ಮತ ಗೆದ್ದುಕೊಂಡಿದೆ. ಬಿಜೆಪಿ ಮತ್ತು ಶಿವಸೇನೆಯ 164 ಸದಸ್ಯರು ಏಕನಾಥ್ ಶಿಂಧೆ ಪರವಾಗಿ ಮತ ಚಲಾಯಿಸಿದ್ದಾರೆ.
ಜುಲೈ ಒಂದರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಏಕನಾಥ ಶಿಂಧೆಗೆ ಇನ್ನೆರಡು ದಿನದಲ್ಲಿ ಸದನದಲ್ಲಿ ಬಹುಮತ ಸಾಬೀತು ಮಾಡುವಂತೆ ರಾಜ್ಯಪಾಲರು ಸೂಚಿಸಿದ್ದರು. ಅದರಂತೆ, ಎರಡು ದಿನಗಳ ವಿಶೇಷ ಅಧಿವೇಶನ ಕರೆಯಲಾಗಿತ್ತು. ಇಂದು ಪರ- ವಿರೋಧ ಮತ ಚಲಾವಣೆ ಆಗಿದ್ದು, ಏಕನಾಥ್ ಶಿಂಧೆ ಪರವಾಗಿ 164 ಮತ್ತು ವಿರೋಧವಾಗಿ 99 ಮಂದಿ ಮತ ಚಲಾಯಿಸಿದ್ದಾರೆ. ಮೂವರು ಮತ ಚಲಾಯಿಸದೆ ತಟಸ್ಥರಾಗಿ ಉಳಿದಿದ್ದಾರೆ.
ಇದರೊಂದಿಗೆ ಮಹಾರಾಷ್ಟ್ರದಲ್ಲಿ ಎದುರಾಗಿದ್ದ ಎರಡು ವಾರಗಳ ರಾಜಕೀಯ ಬಿಕ್ಕಟ್ಟು ಅಂತ್ಯಗೊಂಡಿದೆ. ಬಹುಮತ ಗೆದ್ದ ಬಳಿಕ ಪ್ರತಿಕ್ರಿಯೆ ನೀಡಿದ ಡಿಸಿಎಂ ಮತ್ತು ಬಿಜೆಪಿ ಶಾಸಕಾಂಗ ನಾಯಕ ದೇವೇಂದ್ರ ಫಡ್ನವಿಸ್, ಇದು ಬಾಳಾ ಸಾಹೇಬರ ಸಿದ್ಧಾಂತಕ್ಕೆ ಜಯ ಎಂದು ಹೇಳಿದ್ದಾರೆ. ನಾನು ಮತ್ತೆ ಅಧಿಕಾರಕ್ಕೆ ಬರುತ್ತೇನೆ ಎಂದಿದ್ದೆ. ನನ್ನ ಮಾತು ಕೇಳಿ ಕೆಲವರು ವ್ಯಂಗ್ಯವಾಡಿದ್ದರು. ಆದರೆ ನನ್ನ ಮಾತು ನಿಜವಾಗಿದ್ದು, ನನ್ನ ಜೊತೆಗೆ ಏಕನಾಥ ಶಿಂಧೆ ಅವರನ್ನು ಕರೆತಂದಿದ್ದೇನೆ. ರಾಜಕೀಯದಲ್ಲಿ ಹಳೆಯದನ್ನು ಇಟ್ಟುಕೊಳ್ಳುವುದಿಲ್ಲ ಎಂದು ಫಡ್ನವಿಸ್ ಹೇಳಿದ್ದಾರೆ.
ಇದಕ್ಕೂ ಮುನ್ನ ಏಕನಾಥ್ ಶಿಂಧೆ ಸರಕಾರ ಹೊಸದಾಗಿ ಸ್ಪೀಕರ್ ಹುದ್ದೆಗೆ ರಾಹುಲ್ ನರ್ವೇಕರ್ ಅವರನ್ನು ನೇಮಕ ಮಾಡಿತ್ತು. ಇದರ ಬೆನ್ನಲ್ಲೇ ಶಿವಸೇನೆಯ ಶಾಸಕಾಂಗ ಪಕ್ಷದ ನಾಯಕ ಸ್ಥಾನದಲ್ಲಿದ್ದ ಠಾಕ್ರೆ ಗುಂಪಿನ ಅಜಯ್ ಚೌಧರಿ ಅವರನ್ನು ತೆಗೆದು ಹಾಕಿದ್ದಲ್ಲದೆ, ಆ ಸ್ಥಾನಕ್ಕೆ ಏಕನಾಥ ಶಿಂಧೆ ಅವರನ್ನು ನೂತನ ಸ್ಪೀಕರ್ ನೇಮಿಸಿದ್ದರು.
A day after electing Rahul Narvekar as Maharashtra Assembly’s speaker, the Eknath Shinde government on Monday comfortably passed the majority-mark with 164 votes, winning the trust vote after two weeks of political turmoil in Maharashtra. Meanwhile, the Uddhav Thackeray-faction of Shiv Sena on Monday moved a fresh plea in the Supreme against the decision of assembly’s speaker to recognise a new whip for the party.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm