ಬ್ರೇಕಿಂಗ್ ನ್ಯೂಸ್
01-10-20 04:05 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ,ಅ.1: ಅತ್ಯಾಚಾರಕ್ಕೀಡಾಗಿ ಸಾವನ್ನಪ್ಪಿರುವ ದಲಿತ ಯುವತಿಯ ಕುಟುಂಬವನ್ನು ಭೇಟಿಯಾಗಲು ಉತ್ತರಪ್ರದೇಶದ ಹಥ್ರಾಸ್ ಜಿಲ್ಲೆಯತ್ತ ತೆರಳುತ್ತಿದ್ದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರ ಬೆಂಗಾವಲು ಪಡೆಯ ವಾಹನವನ್ನು ಪೊಲೀಸರು ತಡೆಹಿಡಿದರು. ಹೀಗಾಗಿ ಇವರಿಬ್ಬರು ದಿಲ್ಲಿ ಹಾಗೂ ಉತ್ತರಪ್ರದೇಶ ನಡುವಿನ ಹೆದ್ದಾರಿಯಲ್ಲಿ ಕಾಲ್ನಡಿಗೆಯಲ್ಲಿ ತಮ್ಮ ಪ್ರಯಾಣ ಮುಂದುವರಿಸಿದರು. ಆದರೆ,ಪೊಲೀಸರು ಮತ್ತೆ ಇವರನ್ನು ತಡೆದ ಕಾರಣ ಕಾಂಗ್ರೆಸ್ ಮೆರವಣಿಗೆಯನ್ನು ಅಂತ್ಯಗೊಳಿಸಲಾಗಿದೆ.
"ಪೊಲೀಸರು ನನ್ನನ್ನು ಮೊದಲು ದಬ್ಬಿದರು. ಲಾಠಿ ಚಾರ್ಜ್ ಮಾಡಿ,ಕೆಳಗೆ ಬೀಳಿಸಿದರು. ಪಕ್ಷದ ಕಾರ್ಯಕರ್ತರ ಮೇಲೂ ಪೊಲೀಸರು ಲಾಠಿ ಬೀಸಿದ್ದಾರೆ. ಈ ದೇಶದಲ್ಲಿ ಮೋದೀಜಿ ಮಾತ್ರ ನಡೆಯಬೇಕೇ, ಸಾಮಾನ್ಯ ಮನುಷ್ಯ ನಡೆಯಬಾರದೇ? ಎಂದು ಪ್ರಶ್ನಿಸಲು ಬಯಸುವೆ. ನಮ್ಮ ವಾಹನವನ್ನು ತಡೆಯಲಾಯಿತು. ಹೀಗಾಗಿ ಕಾಲ್ನಡಿಗೆಯಲ್ಲಿ ಹೊರಟೆವು'' ಎಂದು ಯಮುನಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುದ್ದಿಗಾರರಿಗೆ ರಾಹುಲ್ ಗಾಂಧಿ ತಿಳಿಸಿದರು.

ದಿಲ್ಲಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿ ಮಂಗಳವಾರ ರಾತ್ರಿ ಸಾವನ್ನಪ್ಪಿದ್ದ ದಲಿತ ಯುವತಿಯನ್ನು ಉತ್ತರಪ್ರದೇಶ ಪೊಲೀಸರು ಬುಧವಾರ ರಾತ್ರಿ 2:30ರ ಸುಮಾರಿಗೆ ಅಂತ್ಯಕ್ರಿಯೆ ನಡೆಸಿದ್ದು ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm