ಬ್ರೇಕಿಂಗ್ ನ್ಯೂಸ್
12-07-22 05:18 pm HK News Desk ದೇಶ - ವಿದೇಶ
ಭೋಪಾಲ್, ಜುಲೈ 12: ನದಿಯಲ್ಲಿ ಸ್ನಾನ ಮಾಡುತ್ತಿದ್ದ ಹತ್ತು ವರ್ಷದ ಬಾಲಕನನ್ನು ಮೊಸಳೆ ನುಂಗಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಶಿಯೋಪುರ್ ಜಿಲ್ಲೆಯ ಚಂಬಲ್ ನದಿಯಲ್ಲಿ ಘಟನೆ ನಡೆದಿದೆ.
ಸ್ನಾನ ಮಾಡುತ್ತಿದ್ದ ಹುಡುಗನನ್ನು ಬೃಹತ್ ಮೊಸಳೆ ಎಳೆದೊಯ್ದಿದ್ದನ್ನು ನೋಡಿದ ಸ್ಥಳೀಯರು ಗ್ರಾಮಸ್ಥರ ಗಮನಕ್ಕೆ ತಂದಿದ್ದಾರೆ. ಆನಂತರ, ಮೊಸಳೆಯನ್ನು ಬಲೆ ಹಾಕಿ ಹಿಡಿದು ಹಗ್ಗದಿಂದ ಕಟ್ಟಿ ನೀರಿನಿಂದ ಮೇಲಕ್ಕೆ ಎಳೆದಿದ್ದಾರೆ. ಅಷ್ಟರಲ್ಲಿ ಪೊಲೀಸರಿಗೆ ಮಾಹಿತಿ ಹೋಗಿದ್ದು, ವನ್ಯಜೀವಿ ಸಂರಕ್ಷಣಾ ವಿಭಾಗದ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದಾರೆ. ಪೊಲೀಸರು ಗ್ರಾಮಸ್ಥರ ಕೈಯಿಂದ ಮೊಸಳೆಯನ್ನು ಬಿಡಿಸಿದ್ದಾರೆ.
ಆದರೆ ಬಾಲಕನ ಹೆತ್ತವರು ಮೊಸಳೆಯನ್ನು ಬಿಡುವುದಕ್ಕೆ ಕೇಳಲಿಲ್ಲ. ಮೊಸಳೆಯ ಹೊಟ್ಟೆಯಲ್ಲಿ ಬಾಲಕ ಜೀವಂತ ಇರಬಹುದು. ಸಿಗಿದು ನೋಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಆದರೆ ಪೊಲೀಸರು ಮತ್ತು ವನ್ಯಜೀವಿ ಅಧಿಕಾರಿಗಳು ಮೊಸಳೆಯ ಹೊಟ್ಟೆ ಬಗೆಯಲು ಬಿಡಲಿಲ್ಲ. ರಘುನಾಥ ಪುರ ಪೊಲೀಸ್ ಠಾಣಾಧಿಕಾರಿ ಶ್ಯಾಮ್ ವೀರ್ ಸಿಂಗ್ ತೋಮರ್, ಬಾಲಕ ನದಿ ಆಳ ಇರುವ ಜಾಗಕ್ಕೆ ಹೋಗಿದ್ದ. ಅಲ್ಲಿಗೆ ಬಂದಿದ್ದ ಮೊಸಳೆ ಬಾಲಕನನ್ನು ಹಿಡಿದು ನುಂಗಿತ್ತು. ಆನಂತರ ಸ್ಥಳೀಯರು ಸೇರಿ ಮೊಸಳೆಯನ್ನು ಹಿಡಿದು ಕಟ್ಟಿ ಹಾಕಿದ್ದಾರೆ. ಬಾಲಕನನ್ನು ಹಿಡಿದು ನೀರಿನಾಳಕ್ಕೆ ಎಳೆದೊಯ್ದು ನುಂಗಿದ್ದರಿಂದ ಬದುಕುಳಿಯುವ ಸಾಧ್ಯತೆ ಇರುವುದಿಲ್ಲ ಎಂದು ಹೆತ್ತವರಿಗೆ ಮನವರಿಕೆ ಮಾಡಿದ್ದಾರೆ.
ಕೊನೆಗೆ ಮೊಸಳೆಯನ್ನು ಗ್ರಾಮಸ್ಥರು ಬಿಟ್ಟು ಕೊಟ್ಟಿದ್ದಾರೆ. ವನ್ಯಜೀವಿ ವಿಭಾಗದ ಅಧಿಕಾರಿಗಳು ಮೊಸಳೆಯನ್ನು ವಶಕ್ಕೆ ಪಡೆದು ಬೇರೆ ಕಡೆಗೆ ಒಯ್ದಿದ್ದಾರೆ.
An 10-year-old boy was swallowed by a crocodile in Sheopur of Madhya Pradesh. The crocodile attacked the boy when he was taking a bath in the Chambal river on Monday morning. The crocodile dragged the boy into the river.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm