ಬ್ರೇಕಿಂಗ್ ನ್ಯೂಸ್
12-07-22 05:18 pm HK News Desk ದೇಶ - ವಿದೇಶ
ಭೋಪಾಲ್, ಜುಲೈ 12: ನದಿಯಲ್ಲಿ ಸ್ನಾನ ಮಾಡುತ್ತಿದ್ದ ಹತ್ತು ವರ್ಷದ ಬಾಲಕನನ್ನು ಮೊಸಳೆ ನುಂಗಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಶಿಯೋಪುರ್ ಜಿಲ್ಲೆಯ ಚಂಬಲ್ ನದಿಯಲ್ಲಿ ಘಟನೆ ನಡೆದಿದೆ.
ಸ್ನಾನ ಮಾಡುತ್ತಿದ್ದ ಹುಡುಗನನ್ನು ಬೃಹತ್ ಮೊಸಳೆ ಎಳೆದೊಯ್ದಿದ್ದನ್ನು ನೋಡಿದ ಸ್ಥಳೀಯರು ಗ್ರಾಮಸ್ಥರ ಗಮನಕ್ಕೆ ತಂದಿದ್ದಾರೆ. ಆನಂತರ, ಮೊಸಳೆಯನ್ನು ಬಲೆ ಹಾಕಿ ಹಿಡಿದು ಹಗ್ಗದಿಂದ ಕಟ್ಟಿ ನೀರಿನಿಂದ ಮೇಲಕ್ಕೆ ಎಳೆದಿದ್ದಾರೆ. ಅಷ್ಟರಲ್ಲಿ ಪೊಲೀಸರಿಗೆ ಮಾಹಿತಿ ಹೋಗಿದ್ದು, ವನ್ಯಜೀವಿ ಸಂರಕ್ಷಣಾ ವಿಭಾಗದ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದಾರೆ. ಪೊಲೀಸರು ಗ್ರಾಮಸ್ಥರ ಕೈಯಿಂದ ಮೊಸಳೆಯನ್ನು ಬಿಡಿಸಿದ್ದಾರೆ.

ಆದರೆ ಬಾಲಕನ ಹೆತ್ತವರು ಮೊಸಳೆಯನ್ನು ಬಿಡುವುದಕ್ಕೆ ಕೇಳಲಿಲ್ಲ. ಮೊಸಳೆಯ ಹೊಟ್ಟೆಯಲ್ಲಿ ಬಾಲಕ ಜೀವಂತ ಇರಬಹುದು. ಸಿಗಿದು ನೋಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಆದರೆ ಪೊಲೀಸರು ಮತ್ತು ವನ್ಯಜೀವಿ ಅಧಿಕಾರಿಗಳು ಮೊಸಳೆಯ ಹೊಟ್ಟೆ ಬಗೆಯಲು ಬಿಡಲಿಲ್ಲ. ರಘುನಾಥ ಪುರ ಪೊಲೀಸ್ ಠಾಣಾಧಿಕಾರಿ ಶ್ಯಾಮ್ ವೀರ್ ಸಿಂಗ್ ತೋಮರ್, ಬಾಲಕ ನದಿ ಆಳ ಇರುವ ಜಾಗಕ್ಕೆ ಹೋಗಿದ್ದ. ಅಲ್ಲಿಗೆ ಬಂದಿದ್ದ ಮೊಸಳೆ ಬಾಲಕನನ್ನು ಹಿಡಿದು ನುಂಗಿತ್ತು. ಆನಂತರ ಸ್ಥಳೀಯರು ಸೇರಿ ಮೊಸಳೆಯನ್ನು ಹಿಡಿದು ಕಟ್ಟಿ ಹಾಕಿದ್ದಾರೆ. ಬಾಲಕನನ್ನು ಹಿಡಿದು ನೀರಿನಾಳಕ್ಕೆ ಎಳೆದೊಯ್ದು ನುಂಗಿದ್ದರಿಂದ ಬದುಕುಳಿಯುವ ಸಾಧ್ಯತೆ ಇರುವುದಿಲ್ಲ ಎಂದು ಹೆತ್ತವರಿಗೆ ಮನವರಿಕೆ ಮಾಡಿದ್ದಾರೆ.

ಕೊನೆಗೆ ಮೊಸಳೆಯನ್ನು ಗ್ರಾಮಸ್ಥರು ಬಿಟ್ಟು ಕೊಟ್ಟಿದ್ದಾರೆ. ವನ್ಯಜೀವಿ ವಿಭಾಗದ ಅಧಿಕಾರಿಗಳು ಮೊಸಳೆಯನ್ನು ವಶಕ್ಕೆ ಪಡೆದು ಬೇರೆ ಕಡೆಗೆ ಒಯ್ದಿದ್ದಾರೆ.
An 10-year-old boy was swallowed by a crocodile in Sheopur of Madhya Pradesh. The crocodile attacked the boy when he was taking a bath in the Chambal river on Monday morning. The crocodile dragged the boy into the river.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
20-04-26 09:35 pm
HK News Staffer
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm