ಬ್ರೇಕಿಂಗ್ ನ್ಯೂಸ್
12-07-22 05:18 pm HK News Desk ದೇಶ - ವಿದೇಶ
ಭೋಪಾಲ್, ಜುಲೈ 12: ನದಿಯಲ್ಲಿ ಸ್ನಾನ ಮಾಡುತ್ತಿದ್ದ ಹತ್ತು ವರ್ಷದ ಬಾಲಕನನ್ನು ಮೊಸಳೆ ನುಂಗಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಶಿಯೋಪುರ್ ಜಿಲ್ಲೆಯ ಚಂಬಲ್ ನದಿಯಲ್ಲಿ ಘಟನೆ ನಡೆದಿದೆ.
ಸ್ನಾನ ಮಾಡುತ್ತಿದ್ದ ಹುಡುಗನನ್ನು ಬೃಹತ್ ಮೊಸಳೆ ಎಳೆದೊಯ್ದಿದ್ದನ್ನು ನೋಡಿದ ಸ್ಥಳೀಯರು ಗ್ರಾಮಸ್ಥರ ಗಮನಕ್ಕೆ ತಂದಿದ್ದಾರೆ. ಆನಂತರ, ಮೊಸಳೆಯನ್ನು ಬಲೆ ಹಾಕಿ ಹಿಡಿದು ಹಗ್ಗದಿಂದ ಕಟ್ಟಿ ನೀರಿನಿಂದ ಮೇಲಕ್ಕೆ ಎಳೆದಿದ್ದಾರೆ. ಅಷ್ಟರಲ್ಲಿ ಪೊಲೀಸರಿಗೆ ಮಾಹಿತಿ ಹೋಗಿದ್ದು, ವನ್ಯಜೀವಿ ಸಂರಕ್ಷಣಾ ವಿಭಾಗದ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದಾರೆ. ಪೊಲೀಸರು ಗ್ರಾಮಸ್ಥರ ಕೈಯಿಂದ ಮೊಸಳೆಯನ್ನು ಬಿಡಿಸಿದ್ದಾರೆ.

ಆದರೆ ಬಾಲಕನ ಹೆತ್ತವರು ಮೊಸಳೆಯನ್ನು ಬಿಡುವುದಕ್ಕೆ ಕೇಳಲಿಲ್ಲ. ಮೊಸಳೆಯ ಹೊಟ್ಟೆಯಲ್ಲಿ ಬಾಲಕ ಜೀವಂತ ಇರಬಹುದು. ಸಿಗಿದು ನೋಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಆದರೆ ಪೊಲೀಸರು ಮತ್ತು ವನ್ಯಜೀವಿ ಅಧಿಕಾರಿಗಳು ಮೊಸಳೆಯ ಹೊಟ್ಟೆ ಬಗೆಯಲು ಬಿಡಲಿಲ್ಲ. ರಘುನಾಥ ಪುರ ಪೊಲೀಸ್ ಠಾಣಾಧಿಕಾರಿ ಶ್ಯಾಮ್ ವೀರ್ ಸಿಂಗ್ ತೋಮರ್, ಬಾಲಕ ನದಿ ಆಳ ಇರುವ ಜಾಗಕ್ಕೆ ಹೋಗಿದ್ದ. ಅಲ್ಲಿಗೆ ಬಂದಿದ್ದ ಮೊಸಳೆ ಬಾಲಕನನ್ನು ಹಿಡಿದು ನುಂಗಿತ್ತು. ಆನಂತರ ಸ್ಥಳೀಯರು ಸೇರಿ ಮೊಸಳೆಯನ್ನು ಹಿಡಿದು ಕಟ್ಟಿ ಹಾಕಿದ್ದಾರೆ. ಬಾಲಕನನ್ನು ಹಿಡಿದು ನೀರಿನಾಳಕ್ಕೆ ಎಳೆದೊಯ್ದು ನುಂಗಿದ್ದರಿಂದ ಬದುಕುಳಿಯುವ ಸಾಧ್ಯತೆ ಇರುವುದಿಲ್ಲ ಎಂದು ಹೆತ್ತವರಿಗೆ ಮನವರಿಕೆ ಮಾಡಿದ್ದಾರೆ.

ಕೊನೆಗೆ ಮೊಸಳೆಯನ್ನು ಗ್ರಾಮಸ್ಥರು ಬಿಟ್ಟು ಕೊಟ್ಟಿದ್ದಾರೆ. ವನ್ಯಜೀವಿ ವಿಭಾಗದ ಅಧಿಕಾರಿಗಳು ಮೊಸಳೆಯನ್ನು ವಶಕ್ಕೆ ಪಡೆದು ಬೇರೆ ಕಡೆಗೆ ಒಯ್ದಿದ್ದಾರೆ.
An 10-year-old boy was swallowed by a crocodile in Sheopur of Madhya Pradesh. The crocodile attacked the boy when he was taking a bath in the Chambal river on Monday morning. The crocodile dragged the boy into the river.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm