ಬ್ರೇಕಿಂಗ್ ನ್ಯೂಸ್
14-07-22 09:59 pm HK News Desk ದೇಶ - ವಿದೇಶ
ಪಟಿಯಾಲ, ಜುಲೈ 14: ಪಂಜಾಬಿ ಗಾಯಕ ದಲೇರ್ ಮೆಹಂದಿಗೆ ಪಟಿಯಾಲ ನ್ಯಾಯಾಲಯ ಗುರುವಾರ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಮಾನವ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ದಲೇರ್ ಮೆಹಂದಿ ದೋಷಿ ಎಂದು ಸಾಬೀತಾಗಿದ್ದು, ನ್ಯಾಯಾಲಯ ಈ ಶಿಕ್ಷೆ ವಿಧಿಸಿದೆ.
2003ರಲ್ಲಿ ದಲೇರ್ ಮೆಹಂದಿ ಮತ್ತು ಆತನ ಸಹೋದರ ಶಂಷೇರ್ ಸಿಂಗ್ ವಿರುದ್ಧ ಒಟ್ಟು 31 ಪ್ರಕರಣಗಳು ದಾಖಲಾಗಿತ್ತು.ನ್ಯಾಯಾಲಯದಲ್ಲಿ ಹಾಜರಾಗಿದ್ದ ಮೆಹಂದಿಯನ್ನು ಅಲ್ಲಿಂದಲೇ ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ದಲೇರ್ ಮೆಹಂದಿ ಮತ್ತು ಆತನ ಸಹೋದರ ಶಂಷೇರ್ ಸಿಂಗ್ ತಮ್ಮ ತಂಡದ ಜನರು ಎಂದು ಹೇಳಿ ಅಕ್ರಮವಾಗಿ ಜನರನ್ನು ವಿದೇಶಕ್ಕೆ ಕರೆದೊಯ್ಯುತ್ತಿದ್ದರು. ಇದಕ್ಕಾಗಿ ಅವರು ಭಾರೀ ಹಣವನ್ನೂ ಪಡೆಯುತ್ತಿದ್ದರು. 2018ರಲ್ಲಿ ಜ್ಯುಡಿಷಿಯಲ್ ಮೆಜಿಸ್ಟ್ರೇಟ್ ಫಸ್ಟ್ ಕ್ಲಾಸ್ ಕೋರ್ಟ್ ಇವರಿಬ್ಬರನ್ನು ದೋಷಿ ಎಂದು ಹೇಳಿ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದಾದ ನಂತರ ಜಾಮೀನು ಪಡೆದು ಹೊರಬಂದ ಇವರು ಸೆಷನ್ಸ್ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಗುರುವಾರ ಅಡಿಷನಲ್ ಸೆಷನ್ಸ್ ನ್ಯಾಯಮೂರ್ತಿ ಎಚ್ಎಸ್ ಗ್ರೆವಾಲ್ ಜಾಮೀನು ಅರ್ಜಿಯನ್ನು ತಳ್ಳಿದ್ದು ಮೆಹಂದಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
2003ರಲ್ಲಿ ಸರ್ದಾರ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್ಐಆರ್ ಪ್ರಕಾರ ಮೆಹಂದಿ ಸಹೋದರರು 1998 ಮತ್ತು 1999ರಲ್ಲಿ ಎರಡು ತಂಡವನ್ನು ವಿದೇಶಕ್ಕೆ ಕರೆದುಕೊಂಡು ಹೋಗಿದ್ದು, ಅದರಲ್ಲಿ 10 ಮಂದಿಯನ್ನು ಅಮೆರಿಕದಲ್ಲಿ ಅಕ್ರಮವಾಗಿ ಬಿಟ್ಟು ಬಂದಿದ್ದಾರೆ.ಈ ಎಫ್ಐಆರ್ ದಾಖಲಾದ ನಂತರ ಇಬ್ಬರು ಸಹೋದರರ ಮೇಲೆ 35ಕ್ಕಿಂತಲೂ ಹೆಚ್ಚು ದೂರುಗಳು ದಾಖಲಾಗಿತ್ತು.
ಮೂರು ವರ್ಷಗಳ ನಂತರ ಸ್ಥಳೀಯ ಪೊಲೀಸರು ಸ್ಥಳೀಯ ನ್ಯಾಯಾಲಯದಲ್ಲಿ ದಲೇರ್ ಮೆಹಂದಿ ನಿರ್ದೋಷಿ ಎಂದು ಅರ್ಜಿ ಸಲ್ಲಿಸಿದ್ದರು. ಆದರೆ ದಲೇರ್ ವಿರುದ್ದ ಸಾಕಷ್ಟು ಸಾಕ್ಷ್ಯಗಳಿವೆ, ಅವರನ್ನು ಬಿಡುಗಡೆ ಮಾಡಲು ಆಗಲ್ಲ. ಈ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸಬೇಕು ಎಂದು ಆದೇಶಿಸಿತ್ತು.
Popular Punjabi singer Daler Mehndi was sent to jail on Thursday evening after the Patiala district court upheld a lower court’s order of jail term for him in a 2003 case of human trafficking.The singer was sent to Patiala Central Jail after the additional district and session judge H S Grewal dismissed the singer’s appeal against conviction and upheld the decision of the lower court that had held him guilty of cheating (section 420) and criminal conspiracy (section 120 B) of the Indian penal code (IPC) in 2018 in the 2003 case of human trafficking.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm