ಬ್ರೇಕಿಂಗ್ ನ್ಯೂಸ್
17-07-22 10:54 pm HK News Desk ದೇಶ - ವಿದೇಶ
ಢಾಕಾ, ಜುಲೈ 17 : ಫೇಸ್ಬುಕ್ ಪೋಸ್ಟ್ನಲ್ಲಿ ಇಸ್ಲಾಂ ಬಗ್ಗೆ ಅವಹೇಳನ ಮಾಡಲಾಗಿದೆ ಎಂಬ ಆರೋಪದಲ್ಲಿ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದಾಳಿ ನಡೆದಿದೆ.
ಹಲವಾರು ಮನೆ, ಅಂಗಡಿ ಮತ್ತು ಹಿಂದು ದೇಗುಲಗಳ ಮೇಲೆ ದಾಳಿ ನಡೆಸಿ ಬೆಂಕಿ ಹಚ್ಚಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಶುಕ್ರವಾರ ಸಂಜೆ ದಿಗೋಲಿಯಾ ಗ್ರಾಮದಲ್ಲಿ ಮನೆಯೊಂದಕ್ಕೆ ಬೆಂಕಿ ಹಚ್ಚಿದ್ದು ಜನರ ಗುಂಪನ್ನು ಚದುರಿಸಲು ಪೊಲೀಸರು ಎಚ್ಚರಿಕೆ ಗುಂಡು ಹಾರಿಸಿದ್ದಾರೆ. ಇಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದ್ದು , ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ಹೇಳಿದ್ದಾರೆ. ಆಕಾಶ್ ಸಾಹಾ ಎಂಬ ಯುವಕ ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿದ್ದು ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಮುಸ್ಲಿಮರು ದಾಳಿ ನಡೆಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆಕಾಶ್ ಸಾಹಾ ಮತ್ತು ಅವರ ಅಪ್ಪ ಅಶೋಕ್ ಸಾಹಾ ಅವರನ್ನು ಬಂಧಿಸಿದ್ದಾರೆ. ಆಕಾಶ್ ಸಾಹಾ ಹಜರತ್ ಮುಹಮ್ಮದ್ ಅವರನ್ನು ಅವಹೇಳನ ಮಾಡಿ ಜುಲೈ 14ರಂದು ಫೇಸ್ಬುಕ್ ಪೋಸ್ಟೊಂದನ್ನು ಹಾಕಿದ್ದ. ಇದರಿಂದ ಕುಪಿತಗೊಂಡ ಜನರ ಗುಂಪೊಂದು ಅಂದು ಮಧ್ಯಾಹ್ನ ಸಾಹಾ ಮನೆ ಮುಂದೆ ಪ್ರತಿಭಟನೆ ನಡೆಸಿ ಮನೆಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜೂನ್ 18ರಂದು ನಾರೈಲಿಯಲ್ಲಿ ನೂಪುರ್ ಶರ್ಮಾ ಅವರ ಫೋಟೊ ಹಾಕಿ ಬೆಂಬಲಿಸಿದ ವಿದ್ಯಾರ್ಥಿಯೊಬ್ಬನಿಗೆ ಕಾಲೇಜು ಪ್ರಾಂಶುಪಾಲರು ಬೆಂಬಲ ನೀಡಿದ್ದಾರೆ ಎಂಬ ಆರೋಪದಲ್ಲಿ ಅಲ್ಲಿನ ಸ್ಥಳೀಯರು ಪ್ರಾಂಶುಪಾಲರಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ನಡೆಸಿದ್ದ ಘಟನೆ ನಡೆದಿತ್ತು. ಸುದ್ದಿ ವಾಹಿನಿಯ ಚರ್ಚೆ ವೇಳೆ ನೂಪುರ್ ಶರ್ಮಾ ಪ್ರವಾದಿ ಮೊಹಮ್ಮದ್ ಬಗ್ಗೆ ಹೇಳಿದ ಆಕ್ಷೇಪಾರ್ಹ ಹೇಳಿಕೆಗೆ ಜಗತ್ತಿನಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿತ್ತು.
A mob reportedly attacked a Hindu temple and vandalised several houses belonging to the Hindu community in Bangladesh's Narail district. The violence in Dighalia Upazila took place on Friday evening over a young Hindu boy's Facebook post, local media reported.Dhaka Tribune reported that the mob has grocery stores and several homes of the Hindu community.The angry villagers alleged that the boy hurt their religious sentiments with his social media post.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm