ಬ್ರೇಕಿಂಗ್ ನ್ಯೂಸ್
18-07-22 04:54 pm HK News Desk ದೇಶ - ವಿದೇಶ
Photo credits : LIVE LAW
ನವದೆಹಲಿ, ಜುಲೈ 18 : ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶ ಎಚ್.ಪಿ.ಸಂದೇಶ್ ಭ್ರಷ್ಟಾಚಾರ ನಿಗ್ರಹ ದಳ ಮತ್ತು ಅದರ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಸೀಮಂತ್ ಕುಮಾರ್ ಸಿಂಗ್ ವಿರುದ್ಧ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಮತ್ತು ಜೆ.ಮಂಜುನಾಥ್ ಅವರು ಪ್ರತ್ಯೇಕವಾಗಿ ಸಲ್ಲಿಸಿದ್ದ ವಿಶೇಷ ಮನವಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಮತ್ತು ಹಿಮಾ ಕೊಹ್ಲಿ ಅವರಿದ್ದ ತ್ರಿಸದಸ್ಯ ಪೀಠವು ನಡೆಸಿದ್ದು ನ್ಯಾಯಾಧೀಶರ ಅಭಿಪ್ರಾಯಕ್ಕೂ ಹಾಗೂ ಅವರು ವಿಚಾರಣೆ ಮಾಡುತ್ತಿರುವ ಪ್ರಕರಣಕ್ಕೂ ಸಂಬಂಧವಿಲ್ಲ. ಇಲ್ಲಿ ಅಪ್ರಸ್ತುತ ಅವಲೋಕನಗಳನ್ನು ಮಾಡಿದ್ದಾರೆ ಹಾಗೂ ಜಾಮೀನು ಅರ್ಜಿಯ ವ್ಯಾಪ್ತಿಯನ್ನೂ ಮೀರಿದ್ದಾರೆ ಎಂದು ಹೇಳಿದೆ.

ಜಿಲ್ಲಾಧಿಕಾರಿ ಮಂಜುನಾಥ್ ಲಂಚ ಪ್ರಕರಣದಲ್ಲಿ ಆರೋಪಿಯಾಗಿರುವ ಉಪ ತಹಸೀಲ್ದಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ಎಚ್.ಪಿ.ಸಂದೇಶ್, ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳದ ಎಸಿಬಿ ವಿರುದ್ಧ ಕಿಡಿಕಾರಿದ್ದರು. ಅಲ್ಲದೆ, ಎಸಿಬಿ ಮುಖ್ಯಸ್ಥ ಸೀಮಂತ್ ಕುಮಾರ್ ಸಿಂಗ್ ವಿರುದ್ಧ ಭ್ರಷ್ಟಾಚಾರ ಆರೋಪಗಳಿದ್ದು ಪೂರ್ತಿ ಸೇವಾ ದಾಖಲೆಗಳನ್ನು ಸಲ್ಲಿಸುವಂತೆ ಆದೇಶ ಮಾಡಿದ್ದರು. ಇದರಿಂದ ಧೃತಿಗೆಟ್ಟಿದ್ದ ಸೀಮಂತ್ ಕುಮಾರ್ ಸಿಂಗ್, ತಮ್ಮ ಮಾನ ಉಳಿಸಿಕೊಳ್ಳಲು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

ಜಿಲ್ಲಾಧಿಕಾರಿ ಜೆ.ಮಂಜುನಾಥ್ ಪರ ವಾದ ಮಂಡಿಸಿದ ಹಿರಿಯ ವಕೀಲ ಎಸ್.ನಾಗಮುತ್ತು ಅವರು, ಈ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಬದಲು ಬೇರೊಂದು ನ್ಯಾಯಪೀಠಕ್ಕೆ ವರ್ಗಾವಣೆ ಮಾಡುವಂತೆ ಕೋರಿದ್ದರು. ಇದಕ್ಕೆ ನಿರಾಕರಿಸಿದ ನ್ಯಾಯಪೀಠ ವಿಚಾರಣೆಯನ್ನು ನ್ಯಾಯಾಧೀಶರೇ ಮುಂದುವರಿಸುತ್ತಾರೆ. ಆದರೆ ಪ್ರಕರಣಕ್ಕೆ ಸಂಬಂಧಪಡದ ವಿಚಾರಗಳಿಗೆ ನಾವು ತಡೆ ನೀಡುತ್ತಿದ್ದೇವೆ ಎಂದು ಸ್ಪಷ್ಟನೆ ನೀಡಿತು. ಇದರಿಂದ ಒಂದು ಕಡೆ ಆರೋಪಕ್ಕೀಡಾಗಿದ್ದ ರಾಜ್ಯ ಸರಕಾರ ಮತ್ತು ಎಡಿಜಿಪಿ ಸೀಮಂತ್ ಕುಮಾರ್ ಬೀಸೋ ದೊಣ್ಣೆಯಿಂದ ಪಾರಾಗಿದ್ದಾರೆ.
In a significant development, the Supreme Court on Monday stayed directions, including seeking closure reports filed by the state's Anti-Corruption Bureau and the service records of officers including the ADGP, of the Karnataka High Court's Justice HP Sandesh while taking up a bail plea in a bribery case.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
20-04-26 09:35 pm
HK News Staffer
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm