ಬ್ರೇಕಿಂಗ್ ನ್ಯೂಸ್
21-07-22 10:23 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 21 : ದೇಶದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾದ ದ್ರೌಪದಿ ಮುರ್ಮು ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ದೆಹಲಿಯಲ್ಲಿರುವ ದ್ರೌಪದಿ ಮುರ್ಮು ಅವರ ನಿವಾಸಕ್ಕೆ ತೆರಳಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಟ್ವಿಟರ್ನಲ್ಲಿ ಶುಭಾಶಯ ತಿಳಿಸಿರುವ ಪ್ರಧಾನಿ ನರೇಂದ್ರ ಮೋದಿ ಸರಣಿ ಟ್ವೀಟ್ಗಳನ್ನು ಮಾಡಿ ದ್ರೌಪದಿ ಅವರ ಗುಣಗಾನ ಮಾಡಿದ್ದಾರೆ. "ಭಾರತ ಇತಿಹಾಸ ಬರೆದಿದೆ. 130 ಕೋಟಿ ಭಾರತೀಯರು ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುತ್ತಿರುವ ಸಮಯದಲ್ಲಿ ಪೂರ್ವ ಭಾರತದ ಅತ್ಯಂತ ಹಿಂದುಳಿದ ಬುಡಕಟ್ಟು ಸಮುದಾಯದಿಂದ ಬಂದ ಭಾರತದ ಹೆಣ್ಮಗಳು ನಮ್ಮ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಸಾಧನೆಗಾಗಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಅಭಿನಂದಿಸುತ್ತೇನೆ" ಎಂದಿದ್ದಾರೆ.
"ಶ್ರೀಮತಿ ದ್ರೌಪದಿ ಮುರ್ಮು ಅವರ ಜೀವನ, ಅವರ ಆರಂಭಿಕ ಹೋರಾಟಗಳು, ಅವರ ಸೇವೆ ಮತ್ತು ಅವರ ಅನುಕರಣೀಯ ಕೆಲಸಗಳು ಪ್ರತಿ ಭಾರತೀಯನನ್ನು ಪ್ರೇರೇಪಿಸುತ್ತದೆ. ಅವರು ನಮ್ಮ ನಾಗರಿಕರಿಗೆ, ವಿಶೇಷವಾಗಿ ಬಡವರು, ಅಂಚಿನಲ್ಲಿರುವವರು ಮತ್ತು ದೀನ ದಲಿತರಿಗೆ ಭರವಸೆಯ ಕಿರಣವಾಗಿ ಹೊರಹೊಮ್ಮಿದ್ದಾರೆ" ಎಂದು ಟ್ವೀಟ್ ಮಾಡಿದ್ದಾರೆ.

"ದ್ರೌಪದಿ ಮುರ್ಮು ಅವರು ಅತ್ಯುತ್ತಮ ಶಾಸಕ ಮತ್ತು ಸಚಿವರಾಗಿದ್ದರು. ಜಾರ್ಖಂಡ್ ರಾಜ್ಯಪಾಲರಾಗಿ ಅತ್ಯುತ್ತಮ ಕೆಲಸ ಮಾಡಿದ್ದಾರೆ. ಅವರು ರಾಷ್ಟ್ರವನ್ನು ಮುನ್ನಡೆಸುವ ಮತ್ತು ಭಾರತದ ಅಭಿವೃದ್ಧಿ ಪಯಣವನ್ನು ಬಲಪಡಿಸುವ ಅತ್ಯುತ್ತಮ ರಾಷ್ಟ್ರಪತಿಯಾಗುತ್ತಾರೆ ಎಂದು ನನಗೆ ಖಾತ್ರಿಯಿದೆ" ಎಂದು ಭರವಸೆ ಸೂಚಿಸಿದ್ದಾರೆ.

ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಿದ ಎಲ್ಲಾ ಸಂಸದರು ಮತ್ತು ಶಾಸಕರಿಗೆ ಪಕ್ಷಾತೀತವಾಗಿ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ದ್ರೌಪದಿ ಮುರ್ಮು ಅವರ ದಾಖಲೆಯ ಗೆಲುವು ನಮ್ಮ ಪ್ರಜಾಪ್ರಭುತ್ವಕ್ಕೆ ಶುಭವನ್ನು ಸೂಚಿಸುತ್ತದೆ" ಎಂದು ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.

ಜುಲೈ 18 ರಂದು ನಡೆದ ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆ ಇಂದು ನಡೆದಿದ್ದು ಮೂರನೇ ಎರಡರಷ್ಟು ಮತಗಳನ್ನು ಪಡೆದು ದ್ರೌಪದಿ ಮುರ್ಮು ಗೆಲುವು ಕಂಡಿದ್ದಾರೆ. ರಾಮನಾಥ್ ಕೋವಿಂದ್ ಅವರ ಅವಧಿ ಜುಲೈ 24 ಕ್ಕೆ ಕೊನೆಯಾಗಲಿದ್ದು ಅದೇ ದಿನ ಹೊಸ ರಾಷ್ಟ್ರಪತಿ ಪ್ರಮಾಣ ಸ್ವೀಕರಿಸಲಿದ್ದಾರೆ.
I would like to thank all those MPs and MLAs across party lines who have supported the candidature of Smt. Droupadi Murmu Ji. Her record victory augurs well for our democracy.
— Narendra Modi (@narendramodi) July 21, 2022
Prime Minister Narendra Modi extended his wishes to NDA candidate Draupadi Murmu as she won the presidential election to become the first tribal woman set to occupy India's top constitutional post. "Smt. Droupadi Murmu Ji's life, her early struggles, her rich service and her exemplary success motivates each and every Indian. She has emerged as a ray of hope for our citizens, especially the poor, marginalised and the downtrodden," PM said on his official Twitter handle.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm