ಬ್ರೇಕಿಂಗ್ ನ್ಯೂಸ್
24-07-22 01:33 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 24: ದೇಶದಲ್ಲಿ ಮಂಕಿ ಪಾಕ್ಸ್ ನಾಲ್ಕನೇ ಪ್ರಕರಣ ರಾಜಧಾನಿ ದೆಹಲಿಯಲ್ಲಿ ಪತ್ತೆಯಾಗಿದೆ. ಈ ಹಿಂದೆ ಮೂರು ಪ್ರಕರಣಗಳು ವಿದೇಶದಿಂದ ಕೇರಳಕ್ಕೆ ಆಗಮಿಸಿದ್ದ ಮೂವರಲ್ಲಿ ಪತ್ತೆಯಾಗಿದ್ದರೆ, ಈಗ ಯಾವುದೇ ವಿದೇಶ ಪ್ರಯಾಣದ ಹಿನ್ನೆಲೆ ಇಲ್ಲದ 24 ವರ್ಷದ ವ್ಯಕ್ತಿಗೆ ವೈರಾಣು ಸೋಂಕು ಪತ್ತೆಯಾಗಿದೆ.
ಪಶ್ಚಿಮ ಬಂಗಾಳ ಮೂಲದ ವ್ಯಕ್ತಿಯನ್ನು ಮಂಕಿ ಪಾಕ್ಸ್ ಜ್ವರದ ಲಕ್ಷಣಗಳಿದ್ದರಿಂದ ದೆಹಲಿಯ ಮೌಲಾನಾ ಆಜಾದ್ ಮೆಡಿಕಲ್ ಆಸ್ಪತ್ರೆಗೆ ಮೂರು ದಿನಗಳ ಹಿಂದೆ ಸೇರಿಸಲಾಗಿತ್ತು. ಆತನ ರಕ್ತದ ಸ್ಯಾಂಪಲನ್ನು ಪುಣೆಯ ವೈರಾಲಜಿ ಕೇಂದ್ರಕ್ಕೆ ಕಳುಹಿಸಿ, ರೋಗ ಪತ್ತೆ ಮಾಡಲಾಗಿದೆ. ಶನಿವಾರ ವರದಿ ಪಾಸಿಟಿವ್ ಬಂದಿದ್ದು, ಯಾವುದೇ ವಿದೇಶ ಪ್ರಯಾಣದ ಹಿನ್ನೆಲೆ ಇಲ್ಲದಿದ್ದರೂ ರೋಗ ಪತ್ತೆಯಾಗಿರುವುದು ಆರೋಗ್ಯ ಅಧಿಕಾರಿಗಳಲ್ಲಿ ಅಚ್ಚರಿ ಮೂಡಿಸಿದೆ. ದೆಹಲಿಯಲ್ಲಿ ನೆಲೆಸಿರುವ ಈ ವ್ಯಕ್ತಿ ಇತ್ತೀಚೆಗೆ ಹಿಮಾಚಲ ಪ್ರದೇಶದ ಮನಾಲಿಗೆ ಹೋಗಿ ಬಂದಿದ್ದ ಅನ್ನುವ ಮಾಹಿತಿ ಕಲೆಹಾಕಲಾಗಿದೆ.
ಇದೇ ವೇಳೆ, ಮಂಕಿ ಪಾಕ್ಸ್ ರೋಗವು ಜಗತ್ತಿನಲ್ಲಿ 75 ದೇಶಗಳಲ್ಲಿ ಹರಡಿರುವುದರಿಂದ ಜಾಗತಿಕ ಆರೋಗ್ಯ ತುರ್ತುಸ್ಥಿತಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಘೋಷಿಸಿದೆ. ಜಗತ್ತಿನಲ್ಲಿ ಭಾರತ ಸೇರಿದಂತೆ 75 ದೇಶಗಳಲ್ಲಿ 16 ಸಾವಿರ ಮಂದಿಗೆ ರೋಗ ದೃಢಪಟ್ಟಿದ್ದು, ಐವರು ಮೃತಪಟ್ಟಿದ್ದಾರೆ. ಆಫ್ರಿಕಾ ದೇಶಗಳಲ್ಲಿ ಮಾತ್ರ ಇದ್ದ ಮಂಕಿ ಪಾಕ್ಸ್ ಈಗ ಯುರೋಪ್, ಉತ್ತರ ಅಮೆರಿಕಾ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ಕಾಣಿಸಿಕೊಂಡಿದೆ. ಮೇ ತಿಂಗಳ ನಂತರ ಇದರ ಹರಡುವಿಕೆ ಹೆಚ್ಚಿದ್ದು, ಹೀಗಾಗಿ ಆರೋಗ್ಯ ತುರ್ತುಸ್ಥಿತಿ ಘೋಷಿಸಿರುವುದಾಗಿ ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.
A case of monkeypox has been detected for the first time in Delhi in a man who has no history of international travel, said health officials Sunday, taking the infections of the viral disease in India to four.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm