ಬ್ರೇಕಿಂಗ್ ನ್ಯೂಸ್
02-10-20 09:57 pm Headline Karnataka News Network ದೇಶ - ವಿದೇಶ
ಶಿಮ್ಲಾ, ಅಕ್ಟೋಬರ್ 02: ವಿಶ್ವದ ಅತೀ ಉದ್ದದ ಸುರಂಗ ಹೆದ್ದಾರಿ ಎನಿಸಿಕೊಂಡ 9 ಕಿಮೀ ಉದ್ದದ ಅಟಲ್ ರೋಹ್ಟಾಂಗ್ ಸುರಂಗ ಮಾರ್ಗವನ್ನು ಅಕ್ಟೋಬರ್ 3 ರಂದು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ.
ಹಿಮಾಚಲಪ್ರದೇಶದ ರೋಹ್ಟಂಗ್ನಲ್ಲಿರುವ ಈ ಸರ್ವಋತು ಸುರಂಗವನ್ನು ಪ್ರಧಾನಿ ಮೋದಿ ಅವರು ಉದ್ಘಾಟಿಸಿದ ಬಳಿಕ ಸೋಲನ್ ಕಣಿವೆ ಹಾಗೂ ಲಹೌಲ್ ಸ್ಪಿಟಿ ಜಿಲ್ಲೆಯ ಸಿಸ್ಸುವಿನಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅಲ್ಲಿನ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಮಾಹಿತಿ ನೀಡಿದ್ದಾರೆ. ಎರಡೂ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಪಾಲನೆ ಆಗಲಿದ್ದು ಕೇವಲ 200 ಜನ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ.

ಸುಮಾರು 10 ಸಾವಿರ ಅಡಿ ಎತ್ತರದಲ್ಲಿ ನಿರ್ಮಿಸಲ್ಪಟ್ಟಿರುವ ವಿಶ್ವದ ಅತಿ ಉದ್ದವಾದ ಹೆದ್ದಾರಿ ಎಂಬ ಹೆಗ್ಗಳಿಕೆಗೆ ಅಟಲ್ ಸುರಂಗ ಮಾರ್ಗ ಪಾತ್ರವಾಗಿದೆ. ಈ ಸುರಂಗದಿಂದಾಗಿ ಮನಾಲಿ- ಲೇಹ್ ನಡುವಿನ ಪ್ರಯಾಣದ ಅಂತರ 46 ಕಿ.ಮೀನಷ್ಟು ಕಡಿಮೆಯಾಗಲಿದ್ದು 4 ಗಂಟೆಗಳ ಉಳಿತಾಯವಾಗಲಿದೆ.
ಮನಾಲಿಯಲ್ಲಿ ಭಾರೀ ಹಿಮಪಾತವಾಗುವ ಕಾರಣ ಇಲ್ಲಿ ರಸ್ತೆ ಸಂಚಾರ ಕೇವಲ ಆರು ತಿಂಗಳು ಮಾತ್ರ ಸಾಧ್ಯವಿತ್ತು. ಆದರೆ ಇದೀಗ ಸುರಂಗ ಮಾರ್ಗದಿಂದಾಗಿ ಮನಾಲಿಯಿಂದ ಲಹೌಲ್ ಸ್ಪಿಟಿ ಕಣಿವೆಯನ್ನು ವರ್ಷವಿಡಿ ಸಂಪರ್ಕ ಸಾಧಿಸಲು ಅನುಕೂಲವಾಗಲಿದೆ. ಈ ಸುರಂಗ ಮಾರ್ಗದಲ್ಲಿ ಪ್ರತಿ 60 ಮೀಟರಿಗೆ ಸಿಸಿಟಿವಿ ಕ್ಯಾಮೆರಾಗಳಿದ್ದು, ಸುರಂಗದ ಒಳಗೆ ಪ್ರತಿ 500 ಮೀಟರ್ ಅಂತರದಲ್ಲಿ ತುರ್ತು ನಿರ್ಗಮನ ದ್ವಾರಗಳನ್ನು ನಿರ್ಮಿಸಲಾಗಿದೆ.

ವಾಜಪೇಯಿ ಪ್ರಧಾನಿ ಆಗಿದ್ದಾಗ ಈ ಸುರಂಗ ಮಾರ್ಗ ನಿರ್ಮಾಣಕ್ಕೆ ಯೋಜನೆ ರೂಪಿಸಿದ್ದರು. ಅಟಲ್ ಕನಸಿನ ಯೋಜನೆ ಆಗಿದ್ದರಿಂದ ಸುರಂಗ ಮಾರ್ಗಕ್ಕೆ ಅಟಲ್ ಹೆಸರನ್ನೇ ಇಡಲಾಗಿದೆ. ಇದಲ್ಲದೆ, ಈ ಸುರಂಗ ಮಾರ್ಗದಿಂದಾಗಿ ಚೀನಾ ಗಡಿಭಾಗದಲ್ಲಿ ಲಡಾಖ್ ಪ್ರಾಂತ್ಯದ ಮೇಲೆ ಭಾರತ ತನ್ನ ಹಿಡಿತವನ್ನು ಇನ್ನಷ್ಟು ಬಲಪಡಿಸಲು ಸಾಧ್ಯವಾಗಲಿದೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am