ಬ್ರೇಕಿಂಗ್ ನ್ಯೂಸ್
02-10-20 09:57 pm Headline Karnataka News Network ದೇಶ - ವಿದೇಶ
ಶಿಮ್ಲಾ, ಅಕ್ಟೋಬರ್ 02: ವಿಶ್ವದ ಅತೀ ಉದ್ದದ ಸುರಂಗ ಹೆದ್ದಾರಿ ಎನಿಸಿಕೊಂಡ 9 ಕಿಮೀ ಉದ್ದದ ಅಟಲ್ ರೋಹ್ಟಾಂಗ್ ಸುರಂಗ ಮಾರ್ಗವನ್ನು ಅಕ್ಟೋಬರ್ 3 ರಂದು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ.
ಹಿಮಾಚಲಪ್ರದೇಶದ ರೋಹ್ಟಂಗ್ನಲ್ಲಿರುವ ಈ ಸರ್ವಋತು ಸುರಂಗವನ್ನು ಪ್ರಧಾನಿ ಮೋದಿ ಅವರು ಉದ್ಘಾಟಿಸಿದ ಬಳಿಕ ಸೋಲನ್ ಕಣಿವೆ ಹಾಗೂ ಲಹೌಲ್ ಸ್ಪಿಟಿ ಜಿಲ್ಲೆಯ ಸಿಸ್ಸುವಿನಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅಲ್ಲಿನ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಮಾಹಿತಿ ನೀಡಿದ್ದಾರೆ. ಎರಡೂ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಪಾಲನೆ ಆಗಲಿದ್ದು ಕೇವಲ 200 ಜನ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ.

ಸುಮಾರು 10 ಸಾವಿರ ಅಡಿ ಎತ್ತರದಲ್ಲಿ ನಿರ್ಮಿಸಲ್ಪಟ್ಟಿರುವ ವಿಶ್ವದ ಅತಿ ಉದ್ದವಾದ ಹೆದ್ದಾರಿ ಎಂಬ ಹೆಗ್ಗಳಿಕೆಗೆ ಅಟಲ್ ಸುರಂಗ ಮಾರ್ಗ ಪಾತ್ರವಾಗಿದೆ. ಈ ಸುರಂಗದಿಂದಾಗಿ ಮನಾಲಿ- ಲೇಹ್ ನಡುವಿನ ಪ್ರಯಾಣದ ಅಂತರ 46 ಕಿ.ಮೀನಷ್ಟು ಕಡಿಮೆಯಾಗಲಿದ್ದು 4 ಗಂಟೆಗಳ ಉಳಿತಾಯವಾಗಲಿದೆ.
ಮನಾಲಿಯಲ್ಲಿ ಭಾರೀ ಹಿಮಪಾತವಾಗುವ ಕಾರಣ ಇಲ್ಲಿ ರಸ್ತೆ ಸಂಚಾರ ಕೇವಲ ಆರು ತಿಂಗಳು ಮಾತ್ರ ಸಾಧ್ಯವಿತ್ತು. ಆದರೆ ಇದೀಗ ಸುರಂಗ ಮಾರ್ಗದಿಂದಾಗಿ ಮನಾಲಿಯಿಂದ ಲಹೌಲ್ ಸ್ಪಿಟಿ ಕಣಿವೆಯನ್ನು ವರ್ಷವಿಡಿ ಸಂಪರ್ಕ ಸಾಧಿಸಲು ಅನುಕೂಲವಾಗಲಿದೆ. ಈ ಸುರಂಗ ಮಾರ್ಗದಲ್ಲಿ ಪ್ರತಿ 60 ಮೀಟರಿಗೆ ಸಿಸಿಟಿವಿ ಕ್ಯಾಮೆರಾಗಳಿದ್ದು, ಸುರಂಗದ ಒಳಗೆ ಪ್ರತಿ 500 ಮೀಟರ್ ಅಂತರದಲ್ಲಿ ತುರ್ತು ನಿರ್ಗಮನ ದ್ವಾರಗಳನ್ನು ನಿರ್ಮಿಸಲಾಗಿದೆ.

ವಾಜಪೇಯಿ ಪ್ರಧಾನಿ ಆಗಿದ್ದಾಗ ಈ ಸುರಂಗ ಮಾರ್ಗ ನಿರ್ಮಾಣಕ್ಕೆ ಯೋಜನೆ ರೂಪಿಸಿದ್ದರು. ಅಟಲ್ ಕನಸಿನ ಯೋಜನೆ ಆಗಿದ್ದರಿಂದ ಸುರಂಗ ಮಾರ್ಗಕ್ಕೆ ಅಟಲ್ ಹೆಸರನ್ನೇ ಇಡಲಾಗಿದೆ. ಇದಲ್ಲದೆ, ಈ ಸುರಂಗ ಮಾರ್ಗದಿಂದಾಗಿ ಚೀನಾ ಗಡಿಭಾಗದಲ್ಲಿ ಲಡಾಖ್ ಪ್ರಾಂತ್ಯದ ಮೇಲೆ ಭಾರತ ತನ್ನ ಹಿಡಿತವನ್ನು ಇನ್ನಷ್ಟು ಬಲಪಡಿಸಲು ಸಾಧ್ಯವಾಗಲಿದೆ.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm