ಬ್ರೇಕಿಂಗ್ ನ್ಯೂಸ್
03-10-20 12:11 pm Headline Karnataka News Network ದೇಶ - ವಿದೇಶ
ಶಿಮ್ಲಾ, ಅಕ್ಟೋಬರ್ 03: 20 ವರ್ಷಗಳ ಹಿಂದೆ ಅಟಲ್ ಬಿಹಾರಿ ವಾಜಪೇಯಿ ಕಂಡಿದ್ದ ಕನಸು ಇಂದಿಗೆ ನನಸಾಗಿದೆ. ಈ ಐತಿಹಾಸಿಕ ಕ್ಷಣದೊಂದಿಗೆ ಅಟಲ್ ಕನಸು ನನಸಾಗಿದ್ದು ಮಾತ್ರವಲ್ಲ, ಹಿಮಾಚಲಪ್ರದೇಶದ ಜನರ ಬಹುಕಾಲದ ನಿರೀಕ್ಷೆಯೂ ಅಂತ್ಯಗೊಂಡಿದೆ. ಗಡಿಭಾಗದಲ್ಲಿ ಸೇನೆಯ ಕಾರ್ಯಾಚರಣೆಗೂ ಈ ಸುರಂಗ ಮಾರ್ಗ ಮಹತ್ವದ್ದಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು, ಹಿಮಾಚಲಪ್ರದೇಶದ ಮನಾಲಿ ಮತ್ತು ಲೇಹ್ ನಡುವಿನ 9 ಕಿಮೀ ಉದ್ದದ ಅಟಲ್ ಸುರಂಗ ಮಾರ್ಗವನ್ನು ಉದ್ಘಾಟಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ ಸಿಂಗ್, ಸೇನಾ ಮುಖ್ಯಸ್ಥ ಬಿಪಿನ್ ರಾವತ್, ಹಿಮಾಚಲಪ್ರದೇಶ ಸಿಎಂ ಜೈರಾಮ್ ಠಾಕೂರ್, ಕೇಂದ್ರ ಸಚಿವ ಅನುರಾಗ್ ಠಾಕೂರ್, ಬೋರ್ಡರ್ ರೋಡ್ ಆರ್ಗನೈಸೇಶನ್ ಸಂಸ್ಥೆಯ ಡೈರೆಕ್ಟರ್ ಜನರಲ್ ಹರ್ಪಾಲ್ ಸಿಂಗ್ ಉಪಸ್ಥಿತರಿದ್ದರು.
ಲೇಹ್ - ಲಡಾಖ್, ಮನಾಲಿಯ ಜನರಿಗೆ ಈ ಸುರಂಗ ಮಾರ್ಗವು ಜೀವಮಾನದ ಕೊಡುಗೆಯಾಗಲಿದೆ. ಹಿಮಪಾತದಿಂದಾಗಿ ಹಿಂದೆ ಈ ಭಾಗದ ಜನರು ಆರು ತಿಂಗಳ ಕಾಲ ಮನಾಲಿಗೆ ಹೋಗುವುದು ಸಾಧ್ಯವಾಗುತ್ತಿರಲಿಲ್ಲ. ಇನ್ನು ವರ್ಷಪೂರ್ತಿ ಈ ಹೆದ್ದಾರಿಯ ಮೂಲಕ ಮನಾಲಿ - ಲೇಹ್ ಸಂಪರ್ಕ ಮಾಡಬಹುದಾಗಿದೆ. ಗಡಿಯಲ್ಲಿ ರಸ್ತೆ, ಸೇತುವೆ, ಸುರಂಗ ಮಾರ್ಗಗಳ ರಚನೆಯಿಂದ ಈ ಭಾಗದ ಜನರಿಗೆ ಮಾತ್ರ ಉಪಯೋಗ ಆಗುವುದಲ್ಲ. ಇದರ ದೊಡ್ಡ ಲಾಭ ಸೇನಾ ಪಡೆಗೂ ಸಿಗಲಿದೆ ಎಂದು ಮೋದಿ ಹೇಳಿದರು.

9.02 ಕಿಮೀ ಉದ್ದದ ಈ ಸುರಂಗ ಮಾರ್ಗದಿಂದಾಗಿ ಮನಾಲಿ ಮತ್ತು ಲೇಹ್ ನಡುವೆ 46 ಕಿಮೀ ಅಂತರವನ್ನು ಕಡಿಮೆಗೊಳಿಸಿದೆ. ಅಲ್ಲದೆ, ಐದು ಗಂಟೆಗಳ ಸಮಯವನ್ನು ಉಳಿತಾಯ ಮಾಡಿದೆ. ಸಮುದ್ರ ಮಟ್ಟಕ್ಕಿಂತ 3 ಸಾವಿರ ಮೀಟರ್ ಎತ್ತರದಲ್ಲಿ 9 ಕಿಮೀ ಉದ್ದದ ಸುರಂಗ ಮಾರ್ಗ ನಿರ್ಮಿಸಿದ್ದು ಜಗತ್ತಿನಲ್ಲಿ ಇದೇ ಮೊದಲು. ಅತ್ಯಾಧುನಿಕ ಸೌಕರ್ಯಗಳೊಂದಿಗೆ ನಿರ್ಮಿಸಲಾಗಿರುವ ಈ ಸುರಂಗ ಮಾರ್ಗಕ್ಕೆ 3300 ಕೋಟಿ ರೂಪಾಯಿ ವೆಚ್ಚವಾಗಿದೆ. ದಿನದಲ್ಲಿ 3 ಸಾವಿರ ಕಾರು ಮತ್ತು 1500 ಟ್ರಕ್ ಗಳು 80 ಕಿಮೀ ವೇಗದಲ್ಲಿ ಸಾಗಬಲ್ಲ ರೀತಿಯಲ್ಲಿ ರಸ್ತೆಯ ಸಾಮರ್ಥ್ಯವನ್ನು ಮಾರ್ಪಡಿಸಲಾಗಿದೆ. ವಿಶೇಷ ಅಂದ್ರೆ, ಈ ಸುರಂಗ ಮಾರ್ಗ ಅತ್ಯಂತ ಕಡಿದಾದ ಕಣಿವೆಗಳು ಮತ್ತು ನದಿಗಳ ಅಡಿಭಾಗದಿಂದ ದಾಟಿಕೊಂಡು ಸಾಗಲಿದೆ.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
19-04-26 02:58 pm
HK News Staffer
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm