ಬ್ರೇಕಿಂಗ್ ನ್ಯೂಸ್
03-10-20 12:11 pm Headline Karnataka News Network ದೇಶ - ವಿದೇಶ
ಶಿಮ್ಲಾ, ಅಕ್ಟೋಬರ್ 03: 20 ವರ್ಷಗಳ ಹಿಂದೆ ಅಟಲ್ ಬಿಹಾರಿ ವಾಜಪೇಯಿ ಕಂಡಿದ್ದ ಕನಸು ಇಂದಿಗೆ ನನಸಾಗಿದೆ. ಈ ಐತಿಹಾಸಿಕ ಕ್ಷಣದೊಂದಿಗೆ ಅಟಲ್ ಕನಸು ನನಸಾಗಿದ್ದು ಮಾತ್ರವಲ್ಲ, ಹಿಮಾಚಲಪ್ರದೇಶದ ಜನರ ಬಹುಕಾಲದ ನಿರೀಕ್ಷೆಯೂ ಅಂತ್ಯಗೊಂಡಿದೆ. ಗಡಿಭಾಗದಲ್ಲಿ ಸೇನೆಯ ಕಾರ್ಯಾಚರಣೆಗೂ ಈ ಸುರಂಗ ಮಾರ್ಗ ಮಹತ್ವದ್ದಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು, ಹಿಮಾಚಲಪ್ರದೇಶದ ಮನಾಲಿ ಮತ್ತು ಲೇಹ್ ನಡುವಿನ 9 ಕಿಮೀ ಉದ್ದದ ಅಟಲ್ ಸುರಂಗ ಮಾರ್ಗವನ್ನು ಉದ್ಘಾಟಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ ಸಿಂಗ್, ಸೇನಾ ಮುಖ್ಯಸ್ಥ ಬಿಪಿನ್ ರಾವತ್, ಹಿಮಾಚಲಪ್ರದೇಶ ಸಿಎಂ ಜೈರಾಮ್ ಠಾಕೂರ್, ಕೇಂದ್ರ ಸಚಿವ ಅನುರಾಗ್ ಠಾಕೂರ್, ಬೋರ್ಡರ್ ರೋಡ್ ಆರ್ಗನೈಸೇಶನ್ ಸಂಸ್ಥೆಯ ಡೈರೆಕ್ಟರ್ ಜನರಲ್ ಹರ್ಪಾಲ್ ಸಿಂಗ್ ಉಪಸ್ಥಿತರಿದ್ದರು.
ಲೇಹ್ - ಲಡಾಖ್, ಮನಾಲಿಯ ಜನರಿಗೆ ಈ ಸುರಂಗ ಮಾರ್ಗವು ಜೀವಮಾನದ ಕೊಡುಗೆಯಾಗಲಿದೆ. ಹಿಮಪಾತದಿಂದಾಗಿ ಹಿಂದೆ ಈ ಭಾಗದ ಜನರು ಆರು ತಿಂಗಳ ಕಾಲ ಮನಾಲಿಗೆ ಹೋಗುವುದು ಸಾಧ್ಯವಾಗುತ್ತಿರಲಿಲ್ಲ. ಇನ್ನು ವರ್ಷಪೂರ್ತಿ ಈ ಹೆದ್ದಾರಿಯ ಮೂಲಕ ಮನಾಲಿ - ಲೇಹ್ ಸಂಪರ್ಕ ಮಾಡಬಹುದಾಗಿದೆ. ಗಡಿಯಲ್ಲಿ ರಸ್ತೆ, ಸೇತುವೆ, ಸುರಂಗ ಮಾರ್ಗಗಳ ರಚನೆಯಿಂದ ಈ ಭಾಗದ ಜನರಿಗೆ ಮಾತ್ರ ಉಪಯೋಗ ಆಗುವುದಲ್ಲ. ಇದರ ದೊಡ್ಡ ಲಾಭ ಸೇನಾ ಪಡೆಗೂ ಸಿಗಲಿದೆ ಎಂದು ಮೋದಿ ಹೇಳಿದರು.

9.02 ಕಿಮೀ ಉದ್ದದ ಈ ಸುರಂಗ ಮಾರ್ಗದಿಂದಾಗಿ ಮನಾಲಿ ಮತ್ತು ಲೇಹ್ ನಡುವೆ 46 ಕಿಮೀ ಅಂತರವನ್ನು ಕಡಿಮೆಗೊಳಿಸಿದೆ. ಅಲ್ಲದೆ, ಐದು ಗಂಟೆಗಳ ಸಮಯವನ್ನು ಉಳಿತಾಯ ಮಾಡಿದೆ. ಸಮುದ್ರ ಮಟ್ಟಕ್ಕಿಂತ 3 ಸಾವಿರ ಮೀಟರ್ ಎತ್ತರದಲ್ಲಿ 9 ಕಿಮೀ ಉದ್ದದ ಸುರಂಗ ಮಾರ್ಗ ನಿರ್ಮಿಸಿದ್ದು ಜಗತ್ತಿನಲ್ಲಿ ಇದೇ ಮೊದಲು. ಅತ್ಯಾಧುನಿಕ ಸೌಕರ್ಯಗಳೊಂದಿಗೆ ನಿರ್ಮಿಸಲಾಗಿರುವ ಈ ಸುರಂಗ ಮಾರ್ಗಕ್ಕೆ 3300 ಕೋಟಿ ರೂಪಾಯಿ ವೆಚ್ಚವಾಗಿದೆ. ದಿನದಲ್ಲಿ 3 ಸಾವಿರ ಕಾರು ಮತ್ತು 1500 ಟ್ರಕ್ ಗಳು 80 ಕಿಮೀ ವೇಗದಲ್ಲಿ ಸಾಗಬಲ್ಲ ರೀತಿಯಲ್ಲಿ ರಸ್ತೆಯ ಸಾಮರ್ಥ್ಯವನ್ನು ಮಾರ್ಪಡಿಸಲಾಗಿದೆ. ವಿಶೇಷ ಅಂದ್ರೆ, ಈ ಸುರಂಗ ಮಾರ್ಗ ಅತ್ಯಂತ ಕಡಿದಾದ ಕಣಿವೆಗಳು ಮತ್ತು ನದಿಗಳ ಅಡಿಭಾಗದಿಂದ ದಾಟಿಕೊಂಡು ಸಾಗಲಿದೆ.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm