ಬ್ರೇಕಿಂಗ್ ನ್ಯೂಸ್
03-10-20 12:11 pm Headline Karnataka News Network ದೇಶ - ವಿದೇಶ
ಶಿಮ್ಲಾ, ಅಕ್ಟೋಬರ್ 03: 20 ವರ್ಷಗಳ ಹಿಂದೆ ಅಟಲ್ ಬಿಹಾರಿ ವಾಜಪೇಯಿ ಕಂಡಿದ್ದ ಕನಸು ಇಂದಿಗೆ ನನಸಾಗಿದೆ. ಈ ಐತಿಹಾಸಿಕ ಕ್ಷಣದೊಂದಿಗೆ ಅಟಲ್ ಕನಸು ನನಸಾಗಿದ್ದು ಮಾತ್ರವಲ್ಲ, ಹಿಮಾಚಲಪ್ರದೇಶದ ಜನರ ಬಹುಕಾಲದ ನಿರೀಕ್ಷೆಯೂ ಅಂತ್ಯಗೊಂಡಿದೆ. ಗಡಿಭಾಗದಲ್ಲಿ ಸೇನೆಯ ಕಾರ್ಯಾಚರಣೆಗೂ ಈ ಸುರಂಗ ಮಾರ್ಗ ಮಹತ್ವದ್ದಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು, ಹಿಮಾಚಲಪ್ರದೇಶದ ಮನಾಲಿ ಮತ್ತು ಲೇಹ್ ನಡುವಿನ 9 ಕಿಮೀ ಉದ್ದದ ಅಟಲ್ ಸುರಂಗ ಮಾರ್ಗವನ್ನು ಉದ್ಘಾಟಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ ಸಿಂಗ್, ಸೇನಾ ಮುಖ್ಯಸ್ಥ ಬಿಪಿನ್ ರಾವತ್, ಹಿಮಾಚಲಪ್ರದೇಶ ಸಿಎಂ ಜೈರಾಮ್ ಠಾಕೂರ್, ಕೇಂದ್ರ ಸಚಿವ ಅನುರಾಗ್ ಠಾಕೂರ್, ಬೋರ್ಡರ್ ರೋಡ್ ಆರ್ಗನೈಸೇಶನ್ ಸಂಸ್ಥೆಯ ಡೈರೆಕ್ಟರ್ ಜನರಲ್ ಹರ್ಪಾಲ್ ಸಿಂಗ್ ಉಪಸ್ಥಿತರಿದ್ದರು.
ಲೇಹ್ - ಲಡಾಖ್, ಮನಾಲಿಯ ಜನರಿಗೆ ಈ ಸುರಂಗ ಮಾರ್ಗವು ಜೀವಮಾನದ ಕೊಡುಗೆಯಾಗಲಿದೆ. ಹಿಮಪಾತದಿಂದಾಗಿ ಹಿಂದೆ ಈ ಭಾಗದ ಜನರು ಆರು ತಿಂಗಳ ಕಾಲ ಮನಾಲಿಗೆ ಹೋಗುವುದು ಸಾಧ್ಯವಾಗುತ್ತಿರಲಿಲ್ಲ. ಇನ್ನು ವರ್ಷಪೂರ್ತಿ ಈ ಹೆದ್ದಾರಿಯ ಮೂಲಕ ಮನಾಲಿ - ಲೇಹ್ ಸಂಪರ್ಕ ಮಾಡಬಹುದಾಗಿದೆ. ಗಡಿಯಲ್ಲಿ ರಸ್ತೆ, ಸೇತುವೆ, ಸುರಂಗ ಮಾರ್ಗಗಳ ರಚನೆಯಿಂದ ಈ ಭಾಗದ ಜನರಿಗೆ ಮಾತ್ರ ಉಪಯೋಗ ಆಗುವುದಲ್ಲ. ಇದರ ದೊಡ್ಡ ಲಾಭ ಸೇನಾ ಪಡೆಗೂ ಸಿಗಲಿದೆ ಎಂದು ಮೋದಿ ಹೇಳಿದರು.
9.02 ಕಿಮೀ ಉದ್ದದ ಈ ಸುರಂಗ ಮಾರ್ಗದಿಂದಾಗಿ ಮನಾಲಿ ಮತ್ತು ಲೇಹ್ ನಡುವೆ 46 ಕಿಮೀ ಅಂತರವನ್ನು ಕಡಿಮೆಗೊಳಿಸಿದೆ. ಅಲ್ಲದೆ, ಐದು ಗಂಟೆಗಳ ಸಮಯವನ್ನು ಉಳಿತಾಯ ಮಾಡಿದೆ. ಸಮುದ್ರ ಮಟ್ಟಕ್ಕಿಂತ 3 ಸಾವಿರ ಮೀಟರ್ ಎತ್ತರದಲ್ಲಿ 9 ಕಿಮೀ ಉದ್ದದ ಸುರಂಗ ಮಾರ್ಗ ನಿರ್ಮಿಸಿದ್ದು ಜಗತ್ತಿನಲ್ಲಿ ಇದೇ ಮೊದಲು. ಅತ್ಯಾಧುನಿಕ ಸೌಕರ್ಯಗಳೊಂದಿಗೆ ನಿರ್ಮಿಸಲಾಗಿರುವ ಈ ಸುರಂಗ ಮಾರ್ಗಕ್ಕೆ 3300 ಕೋಟಿ ರೂಪಾಯಿ ವೆಚ್ಚವಾಗಿದೆ. ದಿನದಲ್ಲಿ 3 ಸಾವಿರ ಕಾರು ಮತ್ತು 1500 ಟ್ರಕ್ ಗಳು 80 ಕಿಮೀ ವೇಗದಲ್ಲಿ ಸಾಗಬಲ್ಲ ರೀತಿಯಲ್ಲಿ ರಸ್ತೆಯ ಸಾಮರ್ಥ್ಯವನ್ನು ಮಾರ್ಪಡಿಸಲಾಗಿದೆ. ವಿಶೇಷ ಅಂದ್ರೆ, ಈ ಸುರಂಗ ಮಾರ್ಗ ಅತ್ಯಂತ ಕಡಿದಾದ ಕಣಿವೆಗಳು ಮತ್ತು ನದಿಗಳ ಅಡಿಭಾಗದಿಂದ ದಾಟಿಕೊಂಡು ಸಾಗಲಿದೆ.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm