ಬ್ರೇಕಿಂಗ್ ನ್ಯೂಸ್
03-10-20 12:11 pm Headline Karnataka News Network ದೇಶ - ವಿದೇಶ
ಶಿಮ್ಲಾ, ಅಕ್ಟೋಬರ್ 03: 20 ವರ್ಷಗಳ ಹಿಂದೆ ಅಟಲ್ ಬಿಹಾರಿ ವಾಜಪೇಯಿ ಕಂಡಿದ್ದ ಕನಸು ಇಂದಿಗೆ ನನಸಾಗಿದೆ. ಈ ಐತಿಹಾಸಿಕ ಕ್ಷಣದೊಂದಿಗೆ ಅಟಲ್ ಕನಸು ನನಸಾಗಿದ್ದು ಮಾತ್ರವಲ್ಲ, ಹಿಮಾಚಲಪ್ರದೇಶದ ಜನರ ಬಹುಕಾಲದ ನಿರೀಕ್ಷೆಯೂ ಅಂತ್ಯಗೊಂಡಿದೆ. ಗಡಿಭಾಗದಲ್ಲಿ ಸೇನೆಯ ಕಾರ್ಯಾಚರಣೆಗೂ ಈ ಸುರಂಗ ಮಾರ್ಗ ಮಹತ್ವದ್ದಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು, ಹಿಮಾಚಲಪ್ರದೇಶದ ಮನಾಲಿ ಮತ್ತು ಲೇಹ್ ನಡುವಿನ 9 ಕಿಮೀ ಉದ್ದದ ಅಟಲ್ ಸುರಂಗ ಮಾರ್ಗವನ್ನು ಉದ್ಘಾಟಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ ಸಿಂಗ್, ಸೇನಾ ಮುಖ್ಯಸ್ಥ ಬಿಪಿನ್ ರಾವತ್, ಹಿಮಾಚಲಪ್ರದೇಶ ಸಿಎಂ ಜೈರಾಮ್ ಠಾಕೂರ್, ಕೇಂದ್ರ ಸಚಿವ ಅನುರಾಗ್ ಠಾಕೂರ್, ಬೋರ್ಡರ್ ರೋಡ್ ಆರ್ಗನೈಸೇಶನ್ ಸಂಸ್ಥೆಯ ಡೈರೆಕ್ಟರ್ ಜನರಲ್ ಹರ್ಪಾಲ್ ಸಿಂಗ್ ಉಪಸ್ಥಿತರಿದ್ದರು.
ಲೇಹ್ - ಲಡಾಖ್, ಮನಾಲಿಯ ಜನರಿಗೆ ಈ ಸುರಂಗ ಮಾರ್ಗವು ಜೀವಮಾನದ ಕೊಡುಗೆಯಾಗಲಿದೆ. ಹಿಮಪಾತದಿಂದಾಗಿ ಹಿಂದೆ ಈ ಭಾಗದ ಜನರು ಆರು ತಿಂಗಳ ಕಾಲ ಮನಾಲಿಗೆ ಹೋಗುವುದು ಸಾಧ್ಯವಾಗುತ್ತಿರಲಿಲ್ಲ. ಇನ್ನು ವರ್ಷಪೂರ್ತಿ ಈ ಹೆದ್ದಾರಿಯ ಮೂಲಕ ಮನಾಲಿ - ಲೇಹ್ ಸಂಪರ್ಕ ಮಾಡಬಹುದಾಗಿದೆ. ಗಡಿಯಲ್ಲಿ ರಸ್ತೆ, ಸೇತುವೆ, ಸುರಂಗ ಮಾರ್ಗಗಳ ರಚನೆಯಿಂದ ಈ ಭಾಗದ ಜನರಿಗೆ ಮಾತ್ರ ಉಪಯೋಗ ಆಗುವುದಲ್ಲ. ಇದರ ದೊಡ್ಡ ಲಾಭ ಸೇನಾ ಪಡೆಗೂ ಸಿಗಲಿದೆ ಎಂದು ಮೋದಿ ಹೇಳಿದರು.
9.02 ಕಿಮೀ ಉದ್ದದ ಈ ಸುರಂಗ ಮಾರ್ಗದಿಂದಾಗಿ ಮನಾಲಿ ಮತ್ತು ಲೇಹ್ ನಡುವೆ 46 ಕಿಮೀ ಅಂತರವನ್ನು ಕಡಿಮೆಗೊಳಿಸಿದೆ. ಅಲ್ಲದೆ, ಐದು ಗಂಟೆಗಳ ಸಮಯವನ್ನು ಉಳಿತಾಯ ಮಾಡಿದೆ. ಸಮುದ್ರ ಮಟ್ಟಕ್ಕಿಂತ 3 ಸಾವಿರ ಮೀಟರ್ ಎತ್ತರದಲ್ಲಿ 9 ಕಿಮೀ ಉದ್ದದ ಸುರಂಗ ಮಾರ್ಗ ನಿರ್ಮಿಸಿದ್ದು ಜಗತ್ತಿನಲ್ಲಿ ಇದೇ ಮೊದಲು. ಅತ್ಯಾಧುನಿಕ ಸೌಕರ್ಯಗಳೊಂದಿಗೆ ನಿರ್ಮಿಸಲಾಗಿರುವ ಈ ಸುರಂಗ ಮಾರ್ಗಕ್ಕೆ 3300 ಕೋಟಿ ರೂಪಾಯಿ ವೆಚ್ಚವಾಗಿದೆ. ದಿನದಲ್ಲಿ 3 ಸಾವಿರ ಕಾರು ಮತ್ತು 1500 ಟ್ರಕ್ ಗಳು 80 ಕಿಮೀ ವೇಗದಲ್ಲಿ ಸಾಗಬಲ್ಲ ರೀತಿಯಲ್ಲಿ ರಸ್ತೆಯ ಸಾಮರ್ಥ್ಯವನ್ನು ಮಾರ್ಪಡಿಸಲಾಗಿದೆ. ವಿಶೇಷ ಅಂದ್ರೆ, ಈ ಸುರಂಗ ಮಾರ್ಗ ಅತ್ಯಂತ ಕಡಿದಾದ ಕಣಿವೆಗಳು ಮತ್ತು ನದಿಗಳ ಅಡಿಭಾಗದಿಂದ ದಾಟಿಕೊಂಡು ಸಾಗಲಿದೆ.
16-03-25 12:11 pm
Bangalore Correspondent
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 02:05 pm
Mangalore Correspondent
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
16-03-25 10:43 am
Mangalore Correspondent
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm