ಬ್ರೇಕಿಂಗ್ ನ್ಯೂಸ್
06-08-22 02:54 pm HK News Desk ದೇಶ - ವಿದೇಶ
ದೋಹಾ, ಆಗಸ್ಟ್ 6 : ಭಾರತದ 75ನೇ ಸ್ವಾತಂತ್ರ್ಯೋತ್ಸವದ ನೆನಪಿನಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ್ ಕಾರ್ಯಕ್ರಮ ದೂರದ ಕತಾರಿನಲ್ಲೂ ಪ್ರತಿಧ್ವನಿಸಿದೆ. ಅಲ್ಲಿನ ಭಾರತೀಯ ಸಾಂಸ್ಕೃತಿಕ ಕೇಂದ್ರ "ಆಜಾದಿ ಕಾ ಅಮೃತ್ ಮಹೋತ್ಸವ" ಆಚರಣೆ ಹಮ್ಮಿಕೊಂಡಿದ್ದು ಇದರ ಅಂಗವಾಗಿ ಕರ್ನಾಟಕ ಸಂಘ ಕತಾರ್ ಆಗಸ್ಟ್ 4 ರಂದು ಶಾಸ್ತ್ರೀಯ ನೃತ್ಯ ಹಾಗೂ ಗಾಯನ ಸಂಗೀತ ಆಯೋಜಿಸಿತ್ತು.
ಕಾರ್ಯಕ್ರಮವು ನೆರೆದಿದ್ದ ಭಾರತೀಯ ಸಮುದಾಯದ ಪ್ರೇಕ್ಷಕರಿಂದ ಮೆಚ್ಚುಗೆ ಪಡೆಯಿತು. ಶ್ರೀಮತಿ ಸಂಜನ್ ಜೀವನ್ ಅವರ ಶಾಸ್ತ್ರೀಯ ನೃತ್ಯದೊಂದಿಗೆ ಆರಂಭ. ಕಾರ್ಯಕ್ರಮದಲ್ಲಿ ಕನ್ನಡ, ಹಿಂದಿ, ತುಳು ಮತ್ತು ಕೊಂಕಣಿ ಭಾಷೆಗಳ ಸುಮಧುರ, ದೇಶಭಕ್ತಿಯ ಸೂಪರ್ ಹಿಟ್ ಹಾಡುಗಳನ್ನು ಕರ್ನಾಟಕ ಮೂಲದ ಪ್ರಸಿದ್ಧ ಗಾಯಕರು ಹಾಡಿದರು. ಅನಿಲ್ ಭಾಸಗಿ, ತುಫೈಲ್, ಲಾವಣ್ಯ ಆಚಾರ್ಯ, ಸಾಗರ್ ಕೋಟ್ಯಾನ್, ಅಕ್ಷಯಾ ಶೆಟ್ಟಿ, ದಿವ್ಯಾ, ರಂಜಿತ್, ಸಂತೋಷ್, ನವ್ಯಾ ಶೆಟ್ಟಿ, ಕರೋಲ್ ಡಿಸೋಜಾ ಮತ್ತು ಅಬ್ದುಲ್ಲಾ ಮೋನು ಅವರ ಹಾಡುಗಳು ಪ್ರೇಕ್ಷಕರ ಮನ ಸೆಳೆದವು.
ಕರ್ನಾಟಕ ಸಂಘದ ಜಂಟಿ ಸಾಂಸ್ಕೃತಿಕ ಕಾರ್ಯದರ್ಶಿ ಮಂಜೋತ್ ಕಾರ್ಯಕ್ರಮ ನಿರೂಪಿಸಿದರು. ಕರ್ನಾಟಕ ಸಂಘದ ಅಧ್ಯಕ್ಷ ಮಹೇಶ್ ಗೌಡ, ಭಾರತೀಯ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷ ಪಿ.ಎನ್.ಬಾಬುರಾಜನ್, ಕೇಂದ್ರದ ಉಪಾಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಾಗಿಲು ಉಪಸ್ಥಿತರಿದ್ದರು. ಆಗಸ್ಟ್ 19ರ ವರೆಗೂ ಆಜಾದಿ ಕಾ ಅಮೃತ್ ಮಹೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದೆ.
Azadi Ka Amrit Mahotsav celebrated in Doha Qatar by Kannada Sangha with grandeur on 4th August with loads of Cultural activities.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm