ಬ್ರೇಕಿಂಗ್ ನ್ಯೂಸ್
10-08-22 05:50 pm HK News Desk ದೇಶ - ವಿದೇಶ
ಪಾಟ್ನಾ, ಆಗಸ್ಟ್ 10: ಬಿಹಾರದಲ್ಲಿ ಎಂಟನೇ ಬಾರಿಗೆ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅತ್ತ ಬಿಜೆಪಿ ಸಖ್ಯ ತೊರೆದು ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ ಒಂದೇ ದಿನದಲ್ಲಿ ಇತ್ತ ಆರ್ ಜೆಡಿ, ಕಾಂಗ್ರೆಸ್ ಇನ್ನಿತರ ಏಳು ಪಕ್ಷಗಳ ಬೆಂಬಲದೊಂದಿಗೆ ಮತ್ತೆ ಸರಕಾರ ರಚಿಸಿದ್ದಾರೆ.
ಬುಧವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ರಾಜಭವನದಲ್ಲಿ ನಿತೀಶ್ ಕುಮಾರ್ ದಾಖಲೆಯ ಎಂಟನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದೇ ವೇಳೆ, ಆರ್ ಜೆಡಿ ನಾಯಕ, ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ಅವರ ಪುತ್ರ ತೇಜಸ್ವಿ ಯಾದವ್ ಡಿಸಿಎಂ ಆಗಿ ಪ್ರಮಾಣ ಸ್ವೀಕರಿಸಿದ್ದಾರೆ. ಒಂದು ವಾರ ಕಾಲ ಬಿಜೆಪಿ ನಾಯಕರ ಜೊತೆಗಿನ ಮುನಿಸಿನ ಬಳಿಕ ಬಿಜೆಪಿ- ಜೆಡಿಯು ಮೈತ್ರಿ ಸರಕಾರವನ್ನೇ ವಿಸರ್ಜಿಸಿ, ಒಂದೇ ದಿನದಲ್ಲಿ ವಿರೋಧ ಪಕ್ಷಗಳಾಗಿದ್ದ ಆರ್ ಜೆಡಿ, ಕಾಂಗ್ರೆಸ್ ಬೆಂಬಲ ಪಡೆದು ಮತ್ತೆ ಅಧಿಕಾರಕ್ಕೇರಿದ್ದು ವಿಶೇಷ.

![]()

ಆಮೂಲಕ 71 ವರ್ಷದ ನಿತೀಶ್ ಕುಮಾರ್, ಮತ್ತೆ ಹಳೆಯ ಮಹಾಘಟಬಂಧನ್ ಮೈತ್ರಿಕೂಟವನ್ನು ರಚಿಸುವ ಸುಳಿವು ನೀಡಿದ್ದಾರೆ. ಎನ್ ಡಿಎ ಒಕ್ಕೂಟ ತೊರೆದು ಮರಳಿ ಮಹಾ ಒಕ್ಕೂಟ ಸೇರುತ್ತಿದ್ದಂತೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ನಿತೀಶ್ ಕುಮಾರ್ ಅವರೇ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ ಅನ್ನುವ ರೀತಿ ಬಿಂಬಿತಗೊಂಡಿದ್ದಾರೆ. ಇದೇ ವೇಳೆ, ನಿತೀಶ್ ಕುಮಾರ್ ದ್ರೋಹ ಎಸಗಿದ್ದಾರೆಂದು ಕಿಡಿಕಾರಿರುವ ಬಿಜೆಪಿ ನಾಯಕರು, ರಾಜ್ಯದಾದ್ಯಂತ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ. ಬಿಹಾರದಲ್ಲಿ ಮುಂದಿನ ವರ್ಷ ಚುನಾವಣೆ ನಡೆಯಲಿದ್ದು, ಅದಕ್ಕೆ ತಯಾರಿ ನಡೆಸುತ್ತಿದ್ದಾಗಲೇ ಬಿಜೆಪಿ ವಿರುದ್ಧ ಮುನಿಸಿಕೊಂಡು ಪ್ರತ್ಯೇಕ ಸರಕಾರ ರಚಿಸಿದ್ದು ಮಹತ್ವದ ಬೆಳವಣಿಗೆಯಾಗಿದೆ.
Stripped of power in Bihar, the BJP today staged a massive demonstration condemning the "betrayal" of Chief Minister Nitish Kumar, whose similar volte face five years ago had helped it join the government through the proverbial "back door".
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
20-04-26 09:35 pm
HK News Staffer
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm