ಬ್ರೇಕಿಂಗ್ ನ್ಯೂಸ್
10-08-22 10:45 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 10: ಸುಪ್ರೀಂ ಕೋರ್ಟ್ ಹಿರಿಯ ನ್ಯಾಯಾಧೀಶ ಜಸ್ಟಿಸ್ ಉದಯ್ ಉಮೇಶ್ ಲಲಿತ್ ಅವರು ಭಾರತದ 49ನೇ ಮುಖ್ಯ ನ್ಯಾಯಾಧೀಶರಾಗಲಿದ್ದಾರೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಎನ್.ವಿ.ರಮಣ ಅವರಿಂದ ತೆರವಾಗುವ ಸ್ಥಾನಕ್ಕೆ ಯುಯು ಲಲಿತ್ ನೇಮಕಗೊಂಡಿದ್ದಾರೆ. ಆಗಸ್ಟ್ 27ರಂದು ಅವರು ಮುಖ್ಯ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ನವೆಂಬರ್ 8ರಂದು ಯುಯು ಲಲಿತ್ ನಿವೃತ್ತಿಯಾಗಲಿದ್ದು, ಕೇವಲ 74 ದಿವಸಗಳಷ್ಟೇ ಮುಖ್ಯ ನ್ಯಾಯಾಧೀಶರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಮುಂಬೈನ ಸರಕಾರಿ ಕಾನೂನು ಕಾಲೇಜಿನಲ್ಲಿ ಪದವಿ ಪೂರೈಸಿದ್ದ ಲಲಿತ್ ಅವರು ಕ್ರಿಮಿನಲ್ ಕಾನೂನಿನಲ್ಲಿ ನಿಷ್ಣಾತರಾಗಿದ್ದರು. ಮೊದಲಿಗೆ ಮುಂಬೈ ಹೈಕೋರ್ಟಿನಲ್ಲಿ ವಕೀಲರಾಗಿ ಪ್ರಾಕ್ಟೀಸ್ ಮಾಡಿದ್ದರು. ಅವರ ತಂದೆಯೂ ಸೀನಿಯರ್ ವಕೀಲರಾಗಿದ್ದು, ನ್ಯಾಯಾಧೀಶರಾಗಿಯೂ ಸೇವೆಗೈದಿದ್ದರು.
ಯುಯು ಲಲಿತ್ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಕೆಲವು ಮಹತ್ವದ ಪ್ರಕರಣಗಳಲ್ಲಿ ತೀರ್ಪು ನೀಡಿದ್ದರು. 2017ರಲ್ಲಿ ತ್ರಿವಳಿ ತಲಾಖ್ ಪ್ರಕರಣದಲ್ಲಿ ತೀರ್ಪು ನೀಡಿದ್ದ ಐವರು ಸದಸ್ಯರ ಸಾಂವಿಧಾನಿಕ ಪೀಠದಲ್ಲಿ ಇವರೂ ಒಬ್ಬರಾಗಿದ್ದರು. ತ್ರಿವಳಿ ತಲಾಖ್ ಎನ್ನುವುದು ಅಸಾಂವಿಧಾನಿಕ, ಕಾನೂನು ಬಾಹಿರ ಎಂದು ಯುಯು ಲಲಿತ್ ತೀರ್ಪು ನೀಡಿದ್ದು ಗಮನ ಸೆಳೆದಿತ್ತು. ಮುಖ್ಯ ನ್ಯಾಯಾಧೀಶರಾಗಿದ್ದ ಜೆಎಸ್ ಖೇಹರ್ ಮತ್ತು ಅಬ್ದುಲ್ ನಜೀರ್ ತ್ರಿವಳಿ ತಲಾಖ್ ಪರವಾಗಿ ತೀರ್ಪು ನೀಡಿದ್ದರೆ, ಕುರಿಯನ್ ಜೋಸೆಫ್, ಆರ್.ಎಫ್ ನಾರಿಮನ್ ಮತ್ತು ಯುಯು ಲಲಿತ್ ತ್ರಿವಳಿ ತಲಾಖ್ ವಿರುದ್ಧ ತೀರ್ಪು ನೀಡಿದ್ದರು. ಸದ್ಯಕ್ಕೆ ಖೇಹರ್, ನಾರಿಮನ್ ಮತ್ತು ಜೋಸೆಫ್ ನ್ಯಾಯಾಧೀಶ ಹುದ್ದೆಯಿಂದ ನಿವೃತ್ತರಾಗಿದ್ದಾರೆ.
President Droupadi Murmu issued a notice on Wednesday for the appointment of Justice UU Lalit as the next Chief Justice of India. He will succeed Chief Justice of India (CJI) NV Ramana, whose tenure ends on August 26.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 12:58 pm
HK News Staffer
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
04-03-26 10:54 am
HK News Staffer
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm