ಬ್ರೇಕಿಂಗ್ ನ್ಯೂಸ್
12-08-22 08:51 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 12: ಸ್ವಾತಂತ್ರ್ಯೋತ್ಸವಕ್ಕೆ ಎರಡೇ ದಿನ ಇರುವಾಗ ಉತ್ತರ ಪ್ರದೇಶ ಪೊಲೀಸರು ಜೈಶ್- ಇ-ಮಹಮ್ಮದ್ ಉಗ್ರವಾದಿ ಸಂಘಟನೆಗೆ ಸೇರಿದ ಉಗ್ರನನ್ನು ಪಶ್ಚಿಮ ಉತ್ತರ ಪ್ರದೇಶದ ಸಹರಾಣ್ ಪುರ್ ಎಂಬಲ್ಲಿ ಬಂಧಿಸಿದ್ದಾರೆ. ಇತ್ತೀಚೆಗೆ ಪೈಗಂಬರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ನಾಯಕಿ ನೂಪುರ್ ಶರ್ಮಾ ಕೊಲ್ಲುವ ಗುರಿ ಇಟ್ಟುಕೊಂಡಿದ್ದ ಅನ್ನುವ ಸ್ಫೋಟಕ ಮಾಹಿತಿಯನ್ನು ಪೊಲೀಸರು ಹೊರಗೆಡವಿದ್ದಾರೆ.
ಬಂಧಿತನನ್ನು ಮೊಹಮ್ಮದ್ ನದೀಂ ಎಂದು ಗುರುತಿಸಲಾಗಿದ್ದು, ಉತ್ತರ ಪ್ರದೇಶದ ಆಂಟಿ ಟೆರರಿಸ್ಟ್ ಸ್ಕ್ವಾಡ್ ಸಿಬಂದಿ ಸೆರೆ ಹಿಡಿದಿದ್ದಾರೆ. ಆತನಿಗೆ ನೂಪುರ್ ಶರ್ಮಾನನ್ನು ಹುಡುಕಿ ಕೊಲ್ಲುವುದನ್ನೇ ಪ್ರಮುಖ ಟಾರ್ಗೆಟ್ ಆಗಿ ನೀಡಲಾಗಿತ್ತು. ಜೈಶೆ ಮಹಮ್ಮದ್ ಮತ್ತು ತೆಹ್ರೀಕ್ ಇ-ತಾಲಿಬಾನ್ ಉಗ್ರವಾದಿ ಸಂಘಟನೆಗಳ ಜೊತೆ ಲಿಂಕ್ ಹೊಂದಿದ್ದ. 2018ರಿಂದ ನಿರಂತರವಾಗಿ ಪಾಕಿಸ್ಥಾನದ ಉಗ್ರರ ಜೊತೆ ಸಂಪರ್ಕದಲ್ಲಿದ್ದ ಅನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ.

ಮೊಹಮ್ಮದ್ ನದೀಂ ವಿವಿಧ ಸಾಮಾಜಿಕ ಜಾಲತಾಣಗಳನ್ನು ನಕಲಿ ಐಡಿ ಬಳಸಿ ಕಾರ್ಯಾಚರಿಸುತ್ತಿದ್ದು, ಅದರಲ್ಲಿಯೇ ಪಾಕಿಸ್ಥಾನದ ಉಗ್ರರ ಜೊತೆಗೆ ಸಂಪರ್ಕ ಮಾಡುತ್ತಿದ್ದ. ಪಾಕಿಸ್ಥಾನದ ಕಡೆಯ ಉಗ್ರರು ನೂಪುರ್ ಶರ್ಮಾಳನ್ನು ಕೊಲ್ಲುವ ಟಾರ್ಗೆಟ್ ಕೊಟ್ಟಿದ್ದರು. ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ದೇಶಾದ್ಯಂತ ಪೊಲೀಸರು ಅಲರ್ಟ್ ಇರುವಂತೆ ಸೂಚಿಸಲಾಗಿದೆ. ಸ್ವಾತಂತ್ರ್ಯದ ಸಂದರ್ಭದಲ್ಲಿ ಉಗ್ರರು ವಿಧ್ವಂಸಕ ಕೃತ್ಯಕ್ಕೆ ಯೋಜನೆ ಹಾಕುತ್ತಾರೆಂದು ಪೊಲೀಸರು ಸೇರಿದಂತೆ ವಿವಿಧ ಭದ್ರತಾ ಏಜನ್ಸಿಗಳು ಅಲರ್ಟ್ ಆಗಿರುತ್ತವೆ. ಇದೇ ವೇಳೆ, ಉತ್ತರ ಪ್ರದೇಶದಲ್ಲಿ ಉಗ್ರವಾದಿ ಲಿಂಕ್ ಇರುವ ವ್ಯಕ್ತಿ ಸಿಕ್ಕಿಬಿದ್ದಿದ್ದಾನೆ.
Ahead of Independence Day, police claimed to have busted a major terror plot on Friday as it arrested an alleged operative of Jaish-e-Mohammad and Tehreek-e-Taliban from western Uttar Pradesh’s Saharanpur. The accused was tasked with killing former BJP leader Nupur Sharma, police added.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 12:58 pm
HK News Staffer
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
04-03-26 10:54 am
HK News Staffer
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm