ಬ್ರೇಕಿಂಗ್ ನ್ಯೂಸ್
14-08-22 01:01 pm HK News Desk ದೇಶ - ವಿದೇಶ
ಮುಂಬೈ, ಆಗಸ್ಟ್ 14 : ಭಾರತದ ಶೇರು ಮಾರುಕಟ್ಟೆಯಲ್ಲಿ ಅನಭಿಷಿಕ್ತ ದೊರೆಯಾಗಿ ಮೆರೆದಾಡಿದ್ದ ರಾಕೇಶ್ ಜುಂಜುನ್ ವಾಲಾ ಇನ್ನಿಲ್ಲ. ಮುಂಬೈನಲ್ಲಿ ಹೃದಯಾಘಾತಕ್ಕೊಳಗಾಗಿ ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ವಾರದ ಹಿಂದಷ್ಟೇ ಭಾರತದಲ್ಲಿ ವೈಮಾನಿಕ ಉದ್ಯಮಕ್ಕೆ ಕಾಲಿಟ್ಟಿದ್ದ ಜುಂಜುನ್ ವಾಲಾ ಅವರು ಅಕಾಸಾ ಏರ್ ಲೈನ್ಸ್ ಎಂಬ ಹೊಸ ಕಂಪನಿಯನ್ನು ಹುಟ್ಟುಹಾಕಿದ್ದರು. ಆರಂಭಿಕ ನೆಲೆಯಲ್ಲಿ ವಾಣಿಜ್ಯ ವಿಮಾನಗಳ ಹಾರಾಟವೂ ಆರಂಭಗೊಂಡಿತ್ತು. ಬೆಳಗ್ಗೆ ಹೃದಯಾಘಾತ ಆದಕೂಡಲೇ ಅವರನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿಗೆ ಒಯ್ಯುವಾಗಲೇ ಅವರು ಕೊನೆಯುಸಿರೆಳೆದಿದ್ದಾರೆ. ಜುಂಜುನ್ ವಾಲಾ ಕಿಡ್ನಿ ಸೇರಿದಂತೆ ಬಹು ಅಂಗಾಂಗ ವೈಫಲ್ಯಕ್ಕೆ ಒಳಗಾಗಿದ್ದರು. ತಿಂಗಳ ಹಿಂದಷ್ಟೇ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದರು.
ಸ್ಟಾಕ್ ಎಕ್ಸ್ಚೇಂಜ್ ನಲ್ಲಿ ಹೂಡಿಕೆ ಮಾಡುವ ಮೂಲಕವೇ ರಾಕೇಶ್ ಜುಜುನ್ ವಾಲಾ ಅವರು ಮೇಲೇರಿದ್ದರು. ಮುಂಬೈ ಸ್ಟಾಕ್ ಎಕ್ಸ್ಚೇಂಜ್ ನಲ್ಲಿ ದಿಗ್ಗಜರಾಗಿ ಭಾರೀ ಹೆಸರು ಮಾಡಿದ್ದರು. ಭಾರತೀಯ ಶೇರು ಮಾರುಕಟ್ಟೆಯಲ್ಲಿ ಜುಂಜುನ್ ವಾಲಾ ಅವರದ್ದು ಅತ್ಯಂತ ದೊಡ್ಡ ಹೆಸರು. ಫೋರ್ಬ್ಸ್ ನಿಯತಕಾಲಿಕದ ಪ್ರಕಾರ, ಜುಂಜುನ್ ವಾಲಾ ಅವರ ಒಟ್ಟು ಆಸ್ತಿ 5.8 ಬಿಲಿಯನ್ ಡಾಲರ್. ಜಗತ್ತಿನಲ್ಲಿ 36ನೇ ಶ್ರೀಮಂತ ಎಂಬ ಹೆಗ್ಗಳಿಕೆಯನ್ನೂ ಹೊಂದಿದ್ದಾರೆ. ಜುಂಜುನ್ ವಾಲಾ ಅವರನ್ನು ಭಾರತದ ವಾರೆನ್ ಬಫೆಟ್ ಎನ್ನುವ ಅನ್ವರ್ಥ ನಾಮದಲ್ಲೂ ಕರೆಯುತ್ತಾರೆ.
The veteran trader-cum-investor, known as the Big Bull of Dalal Street, was reported to have a net worth of around $5.8 billion, according to Forbes.Ace stock market investor Rakesh Jhunjhunwala died this morning at a Mumbai hospital. He was also the co-founder of Akasa Air, India's newest airline which began commercial operations last week.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm