ಬ್ರೇಕಿಂಗ್ ನ್ಯೂಸ್
18-08-22 03:58 pm HK News Desk ದೇಶ - ವಿದೇಶ
ಮುಂಬೈ, ಆಗಸ್ಟ್ 18: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಸಮುದ್ರ ತೀರದಲ್ಲಿ ಶಂಕಿತ ಬೋಟ್ ಕಂಡುಬಂದಿದ್ದು, ಅದರಲ್ಲಿ ಎಕೆ 47 ರೈಫಲ್ಸ್, ಮದ್ದುಗುಂಡುಗಳು ಹಾಗೂ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ. ಇದರ ಬೆನ್ನಲ್ಲೇ ಮಂಬೈ ನಗರ ಸೇರಿದಂತೆ ಮಹಾರಾಷ್ಟ್ರದಾದ್ಯಂತ ಹೈಎಲರ್ಟ್ ಮಾಡಲಾಗಿದೆ.
ರಾಯಗಢ ಜಿಲ್ಲೆಯ ಹರಿಹರೇಶ್ವರ ಎಂಬಲ್ಲಿನ ಸಮುದ್ರ ತೀರದಲ್ಲಿ ಬೋಟ್ ಪತ್ತೆಯಾಗಿದ್ದು, ಉಗ್ರರ ಜಾಡಿನ ಬಗ್ಗೆ ಶಂಕೆ ವ್ಯಕ್ತವಾಗಿದೆ. ರಾಯಗಢ ಎಸ್ಪಿ ಅಶೋಕ್ ಧುಡೆ, ಬೋಟಿನಲ್ಲಿ ಎಕೆ 47 ರೈಫಲ್ ಪತ್ತೆಯಾಗಿರುವುದನ್ನು ದೃಢಪಡಿಸಿದ್ದು, ಬೋಟ್ ಯಾವ ರೀತಿಯದ್ದು ಅನ್ನುವ ಬಗ್ಗೆ ಮಾಹಿತಿ ನೀಡಿಲ್ಲ. ಮುಂಬೈನಿಂದ 200 ಕಿಮೀ ದೂರದಲ್ಲಿ ಬೋಟ್ ಪತ್ತೆಯಾಗಿದ್ದು, ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೋಟಿನಲ್ಲಿದ್ದ ಬಾಕ್ಸ್ ಒಂದರಲ್ಲಿ ಮೂರು ಎಕೆ 47 ರೈಫಲ್ ಮತ್ತು ಮದ್ದುಗುಂಡುಗಳು ಪತ್ತೆಯಾಗಿವೆ. ಬೋಟ್ ಆಸ್ಟ್ರೇಲಿಯಾ ನಿರ್ಮಿತ ಎನ್ನುವ ಮಾಹಿತಿಗಳಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಟಿಎಸ್ ಮುಖ್ಯಸ್ಥ ವಿನೀತ್ ಅಗರ್ವಾಲ್, ಉಗ್ರರಿಗೆ ಸಂಬಂಧಪಟ್ಟ ಶಸ್ತ್ರಾಸ್ತ್ರಗಳೇ ಅನ್ನುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಬೋಟ್ ಮೇಲ್ನೋಟಕ್ಕೆ ಒಮಾನಲ್ಲಿ ರಿಜಿಸ್ಟರ್ ಆಗಿರುವಂತೆ ಕಂಡುಬಂದಿದೆ ಎಂದು ತಿಳಿಸಿದ್ದಾರೆ. ಬೋಟ್ ಅನಾಥ ಸ್ಥಿತಿಯಲ್ಲಿ ಕಂಡುಬಂದಿದೆ. ಆದರೆ, ಹೊರ ದೇಶದ ಬೋಟ್ ಆಗಿರುವುದರಿಂದ ಉಗ್ರರ ಕೆಲಸ ಆಗಿರಬಹುದು ಅನ್ನುವ ಶಂಕೆ ಇದೆ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅಗರ್ವಾಲ್ ತಿಳಿಸಿದ್ದಾರೆ.
Maharashtra police on Thursday found a suspected terror boat near Harihareshwar shore in Raigad district of the state carrying AK 47, some rifles and bullets. Following the recovery, police has issued a “high alert” in the district.SP Raigad Mr Ashok Dhudhe confirmed about AK 47 being found in boat near Harihareshwar beach. The place is about 200 km from Mumbai and 170 km from Pune.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm