ಬ್ರೇಕಿಂಗ್ ನ್ಯೂಸ್
21-08-22 12:03 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 21: ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಗೆ ಭೀಕರ ಪ್ರವಾಹ, ಭೂಕುಸಿತ ಉಂಟಾಗಿದ್ದು, 22 ಜನರು ಸಾವಿಗೀಡಾಗಿದ್ದಾರೆ. ಈ ಪೈಕಿ ಒಂದೇ ಕುಟುಂಬದ ಎಂಟು ಮಂದಿ ಸೇರಿದ್ದಾರೆ. ಹಲವರು ನಾಪತ್ತೆಯಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಶುಕ್ರವಾರದಿಂದ ತೊಡಗಿ ಭಾರೀ ಮಳೆಯಾಗುತ್ತಿದ್ದು, ಬೆಟ್ಟ ಪ್ರದೇಶಗಳಲ್ಲಿ ವ್ಯಾಪಕ ಭೂಕುಸಿತ ಉಂಟಾಗಿದೆ.
ಮಾಂಡಿ, ಕಾಂಗ್ರಾ ಮತ್ತು ಚಂಬಾ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಪ್ರವಾಹ ಮತ್ತು ಭೂಕುಸಿತ ಕಾಣಿಸಿಕೊಂಡಿದೆ. ರಸ್ತೆಗಳಲ್ಲಿ ಸಾಗುತ್ತಿದ್ದ ವಾಹನಗಳ ಮೇಲೆ ಬೆಟ್ಟಗಳು ಕುಸಿದಿದ್ದು, ವಾಹನಗಳಲ್ಲಿದ್ದವರು ಸಾವಿಗೀಡಾಗಿದ್ದಾರೆ. ಮಾಂಡಿಯಿಂದ ಸಾಗುವ ಮನಾಲಿ- ಚಂಡೀಗಢ ರಾಷ್ಟ್ರೀಯ ಹೆದ್ದಾರಿ ಮತ್ತು ಶಿಮ್ಲಾ- ಚಂಡೀಗಢ ರಾಷ್ಟ್ರೀಯ ಹೆದ್ದಾರಿ ಶೋಘಿ ಎಂಬಲ್ಲಿ ಕುಸಿತಕ್ಕೊಳಗಾಗಿದ್ದು ಸಂಚಾರ ಬಂದ್ ಮಾಡಲಾಗಿದೆ.
ಮಾಂಡಿ ಜಿಲ್ಲೆ ಒಂದರಲ್ಲೇ 13 ಮಂದಿ ಸಾವೀಗೀಡಾಗಿದ್ದು, ಆರು ಮಂದಿ ನಾಪತ್ತೆಯಾಗಿದ್ದಾರೆ. ಪ್ರವಾಹದಲ್ಲಿ ಸಿಲುಕಿ ನಾಪತ್ತೆಯಾದವರು ಸಾವಿಗೀಡಾದ ಶಂಕೆಯಿದೆ ಎಂದು ಜಿಲ್ಲಾಧಿಕಾರಿ ಅರಿಂಧಮ್ ಚೌಧರಿ ತಿಳಿಸಿದ್ದಾರೆ. ಎಸ್ ಡಿ ಆರ್ ಎಫ್ ಮತ್ತು ಎನ್ ಡಿಆರ್ ಎಫ್ ಪಡೆಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಪ್ರವಾಹದಲ್ಲಿ ಸಿಕ್ಕಿಬಿದ್ದ ಜನರನ್ನು ಸ್ಥಳಾಂತರ ಕಾರ್ಯ ಮಾಡುತ್ತಿದೆ. ಕಾಂಗ್ರಾ ಜಿಲ್ಲೆಯಲ್ಲಿ ಹಾದು ಹೋಗುವ ಚಕ್ಕಿ ಹೊಳೆಯ ಸೇತುವೆ ಶನಿವಾರ ಕುಸಿದು ಬಿದ್ದಿದ್ದು, ಅಲ್ಲಿನ ರಸ್ತೆ ಸಂಚಾರ ಬಂದ್ ಮಾಡಲಾಗಿದೆ. ಇದರ ವಿಡಿಯೋವನ್ನು ಎಎನ್ಐ ಟ್ವೀಟ್ ಮಾಡಿದೆ.
ಹಿಮಾಚಲ ಪ್ರದೇಶದಲ್ಲಿ ಇನ್ನೂ ಐದು ದಿನಗಳ ಕಾಲ ಆಗಸ್ಟ್ 24ರ ವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಆರೆಂಜ್ ಅಲರ್ಟ್ ನೀಡಲಾಗಿದ್ದು, ಹಿಮಾಚಲ ಪ್ರದೇಶಕ್ಕೆ ಪ್ರವಾಸ ಹೋಗುವುದನ್ನು ನಿಷೇಧ ಮಾಡಲಾಗಿದೆ. ಚಂಬಾ ಜಿಲ್ಲೆಯ ಚೊವಾರಿ ಎಂಬ ಗ್ರಾಮದಲ್ಲಿ ಮನೆಯೊಂದು ರಾತ್ರಿ ವೇಳೆ ಕುಸಿದು ಬಿದ್ದು ಅದರಲ್ಲಿದ್ದ ಮೂವರು ಸಾವಿಗೀಡಾಗಿದ್ದಾರೆ. ಬಾಘಿ ಮತ್ತು ಓಲ್ಡ್ ಕಟೋಲಾ ಪ್ರದೇಶದಲ್ಲಿ ಮೇಘ ಸ್ಫೋಟ ಉಂಟಾಗಿದ್ದು, ಹಲವರು ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಆರು ಮಂದಿಯ ಕುಟುಂಬದ ಬಾಲಕಿಯೊಬ್ಬಳ ಶವ ಅರ್ಧ ಕಿಮೀ ದೂರದಲ್ಲಿ ಪತ್ತೆಯಾಗಿದ್ದರೆ, ಐವರು ನಾಪತ್ತೆಯಾಗಿದ್ದಾರೆ. ದಿಢೀರ್ ಮಳೆಯಿಂದಾಗಿ ಮಾಂಡಿ ಜಿಲ್ಲೆಯಲ್ಲಿ ಹಲವು ಗ್ರಾಮಗಳು ಜಲಾವೃತ ಆಗಿದ್ದು, ಮನೆಗಳಿಗೆ ನೀರು ನುಗ್ಗಿ ಜನರು ಸಿಕ್ಕಿಬಿದ್ದಿದ್ದಾರೆಂಬ ಮಾಹಿತಿಗಳಿವೆ.
#WATCH | Himachal Pradesh: The railway bridge on Chakki river in Himachal Pradesh's Kangra district damaged due to flash flood, and collapsed today morning. The water in the river is yet to recede: Northern Railways pic.twitter.com/ApmVkwAkB8
— ANI (@ANI) August 20, 2022
Twenty-two people, including eight members of a family, were killed and six feared dead in incidents of landslide and flash flood triggered by heavy rainfall in Himachal Pradesh since Friday, officials said.Ten people were injured, state Disaster Management Department Director Sudesh Kumar Mokhta said on Saturday. The maximum damage has been reported from Mandi, Kangra and Chamba districts, he said, adding that so far 36 weather-related incidents have been reported from the state.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm