ಬ್ರೇಕಿಂಗ್ ನ್ಯೂಸ್
06-10-20 12:26 pm Headline Karnataka News Network ದೇಶ - ವಿದೇಶ
ವಿಳ್ಳುಪುರಂ, ಅಕ್ಟೋಬರ್ 06: ಕಲ್ಲಕುರಿಚಿ ಶಾಸಕ ತಮ್ಮ ಮನೆಯಲ್ಲಿ ಪ್ರೇಯಸಿಯನ್ನು ವಿವಾಹವಾಗುವ ಮೂಲಕ ಸೋಮವಾರ ವಿವಾದಕ್ಕೀಡಾಗಿದ್ದಾರೆ.
ಪುತ್ರಿಯನ್ನು ಅಪಹರಿಸಲಾಗಿದೆ ಎಂದು ಆಪಾದಿಸಿ ಯುವತಿಯ ತಂದೆ ಶಾಸಕನ ಮನೆ ಮುಂದೆಯೇ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಘಟನೆಯೂ ನಡೆದಿದೆ. ಆ ಬಳಿಕ ನೂತನ ದಂಪತಿ ಮನೆಯಿಂದ ಹೊರಬಂದು "ನಾವು ಪರಸ್ಪರ ಪ್ರೇಮಿಸುತ್ತಿದ್ದೆವು, ಇದೀಗ ಸ್ವ ಇಚ್ಛೆಯಿಂದ ವಿವಾಹ ಬಂಧನಕ್ಕೊಳಗಾಗಿದ್ದೇವೆ" ಎಂದು ತಿಳಿಸಿದರು.

ತಿಯಾಗದುರುಗಂ ನಿವಾಸಿ, ಕಲ್ಲಕುರಿಚಿ ಕ್ಷೇತ್ರವನ್ನು ಪ್ರತಿನಿಧಿಸುವ ಎಐಎಡಿಎಂ ಶಾಸಕ ಎ. ಪ್ರಭು (35), ಅದೇ ಪಟ್ಟಣದ ಸೌಂದರ್ಯ (19) ಎಂಬಾಕೆಯನ್ನು ಸೋಮವಾರ ಮುಂಜಾನೆ ಮನೆಯಲ್ಲೇ ವಿವಾಹವಾದರು. ಈ ವಿಚಾರ ತಿಳಿದ ಯುವತಿಯ ತಂದೆ ಸಾಮಿನಾಥನ್ (48) ಶಾಸಕರ ಮನೆಗೆ ಧಾವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಅವರನ್ನು ತಡೆದಿದ್ದರು. ಬಳಿಕ ಸಾಮಿನಾಥನ್ ಅವರನ್ನು ಬಂಧಿಸಿ ಭಾರತೀಯ ದಂಡ ಸಂಹಿತೆ ಸೆಕ್ಷನ್ 309ರ ಅನ್ವಯ ಆತ್ಮಹತ್ಯೆಗೆ ಪ್ರಯತ್ನಿಸಿದ ಪ್ರಕರಣ ದಾಖಲಿಸಲಾಗಿದೆ.
ಇದಕ್ಕೂ ಮುನ್ನ ರವಿವಾರ ಸಂಜೆ ಸಾಮಿನಾಥನ್ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ, ತಿರುಚಂಗೋಡಿನ ಖಾಸಗಿ ಕಲಾ ಕಾಲೇಜಿನಲ್ಲಿ ಎರಡನೇ ವರ್ಷದ ಪದವಿ ವಿದ್ಯಾರ್ಥಿನಿಯಾಗಿರುವ ತಮ್ಮ ಹಿರಿಯ ಮಗಳನ್ನು ಶಾಸಕ ಪ್ರಭು ಅಪಹರಿಸಿದ್ದಾರೆ ಎಂದು ಆಪಾದಿಸಿದ್ದರು. ಈ ವಿಚಾರವನ್ನು ಪೊಲೀಸರ ಗಮನಕ್ಕೆ ತಾರದಂತೆ ಪ್ರಭು ಬೆಂಬಗಲಿಗರು ದೂರವಾಣಿ ಮೂಲಕ ಬೆದರಿಕೆ ಒಡ್ಡಿದ್ದಾರೆ ಎಂದು ಅವರು ದೂರಿದ್ದರು.
ಕಳೆದ ನಾಲ್ಕು ವರ್ಷಗಳಿಂದ ತಮ್ಮ ನಡುವೆ ಪ್ರೇಮಸಂಬಂಧ ಇತ್ತು ಎಂದು ನೂತನ ದಂಪತಿ ಬಿಡುಗಡೆ ಮಾಡಿರುವ ವೀಡಿಯೊದಲ್ಲಿ ದೃಢಪಡಿಸಿದ್ದಾರೆ. ಸೌಂದರ್ಯ ವಿವಾಹದ ಬಗ್ಗೆ ಪೋಷಕರ ಜತೆ ಮಾತುಕತೆ ನಡೆಸಿದ್ದಾಗಿ ಪ್ರಭು ಹೇಳಿಕೊಂಡಿದ್ದಾರೆ. ಇದಕ್ಕೆ ಅವರು ಒಪ್ಪದಿದ್ದಾಗ ಸೌಂದರ್ಯ ಮನೆ ಬಿಟ್ಟು ಬಂದಿದ್ದಾಗಿ ಅವರು ಹೇಳಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm