ಬ್ರೇಕಿಂಗ್ ನ್ಯೂಸ್
06-10-20 12:26 pm Headline Karnataka News Network ದೇಶ - ವಿದೇಶ
ವಿಳ್ಳುಪುರಂ, ಅಕ್ಟೋಬರ್ 06: ಕಲ್ಲಕುರಿಚಿ ಶಾಸಕ ತಮ್ಮ ಮನೆಯಲ್ಲಿ ಪ್ರೇಯಸಿಯನ್ನು ವಿವಾಹವಾಗುವ ಮೂಲಕ ಸೋಮವಾರ ವಿವಾದಕ್ಕೀಡಾಗಿದ್ದಾರೆ.
ಪುತ್ರಿಯನ್ನು ಅಪಹರಿಸಲಾಗಿದೆ ಎಂದು ಆಪಾದಿಸಿ ಯುವತಿಯ ತಂದೆ ಶಾಸಕನ ಮನೆ ಮುಂದೆಯೇ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಘಟನೆಯೂ ನಡೆದಿದೆ. ಆ ಬಳಿಕ ನೂತನ ದಂಪತಿ ಮನೆಯಿಂದ ಹೊರಬಂದು "ನಾವು ಪರಸ್ಪರ ಪ್ರೇಮಿಸುತ್ತಿದ್ದೆವು, ಇದೀಗ ಸ್ವ ಇಚ್ಛೆಯಿಂದ ವಿವಾಹ ಬಂಧನಕ್ಕೊಳಗಾಗಿದ್ದೇವೆ" ಎಂದು ತಿಳಿಸಿದರು.

ತಿಯಾಗದುರುಗಂ ನಿವಾಸಿ, ಕಲ್ಲಕುರಿಚಿ ಕ್ಷೇತ್ರವನ್ನು ಪ್ರತಿನಿಧಿಸುವ ಎಐಎಡಿಎಂ ಶಾಸಕ ಎ. ಪ್ರಭು (35), ಅದೇ ಪಟ್ಟಣದ ಸೌಂದರ್ಯ (19) ಎಂಬಾಕೆಯನ್ನು ಸೋಮವಾರ ಮುಂಜಾನೆ ಮನೆಯಲ್ಲೇ ವಿವಾಹವಾದರು. ಈ ವಿಚಾರ ತಿಳಿದ ಯುವತಿಯ ತಂದೆ ಸಾಮಿನಾಥನ್ (48) ಶಾಸಕರ ಮನೆಗೆ ಧಾವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಅವರನ್ನು ತಡೆದಿದ್ದರು. ಬಳಿಕ ಸಾಮಿನಾಥನ್ ಅವರನ್ನು ಬಂಧಿಸಿ ಭಾರತೀಯ ದಂಡ ಸಂಹಿತೆ ಸೆಕ್ಷನ್ 309ರ ಅನ್ವಯ ಆತ್ಮಹತ್ಯೆಗೆ ಪ್ರಯತ್ನಿಸಿದ ಪ್ರಕರಣ ದಾಖಲಿಸಲಾಗಿದೆ.
ಇದಕ್ಕೂ ಮುನ್ನ ರವಿವಾರ ಸಂಜೆ ಸಾಮಿನಾಥನ್ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ, ತಿರುಚಂಗೋಡಿನ ಖಾಸಗಿ ಕಲಾ ಕಾಲೇಜಿನಲ್ಲಿ ಎರಡನೇ ವರ್ಷದ ಪದವಿ ವಿದ್ಯಾರ್ಥಿನಿಯಾಗಿರುವ ತಮ್ಮ ಹಿರಿಯ ಮಗಳನ್ನು ಶಾಸಕ ಪ್ರಭು ಅಪಹರಿಸಿದ್ದಾರೆ ಎಂದು ಆಪಾದಿಸಿದ್ದರು. ಈ ವಿಚಾರವನ್ನು ಪೊಲೀಸರ ಗಮನಕ್ಕೆ ತಾರದಂತೆ ಪ್ರಭು ಬೆಂಬಗಲಿಗರು ದೂರವಾಣಿ ಮೂಲಕ ಬೆದರಿಕೆ ಒಡ್ಡಿದ್ದಾರೆ ಎಂದು ಅವರು ದೂರಿದ್ದರು.
ಕಳೆದ ನಾಲ್ಕು ವರ್ಷಗಳಿಂದ ತಮ್ಮ ನಡುವೆ ಪ್ರೇಮಸಂಬಂಧ ಇತ್ತು ಎಂದು ನೂತನ ದಂಪತಿ ಬಿಡುಗಡೆ ಮಾಡಿರುವ ವೀಡಿಯೊದಲ್ಲಿ ದೃಢಪಡಿಸಿದ್ದಾರೆ. ಸೌಂದರ್ಯ ವಿವಾಹದ ಬಗ್ಗೆ ಪೋಷಕರ ಜತೆ ಮಾತುಕತೆ ನಡೆಸಿದ್ದಾಗಿ ಪ್ರಭು ಹೇಳಿಕೊಂಡಿದ್ದಾರೆ. ಇದಕ್ಕೆ ಅವರು ಒಪ್ಪದಿದ್ದಾಗ ಸೌಂದರ್ಯ ಮನೆ ಬಿಟ್ಟು ಬಂದಿದ್ದಾಗಿ ಅವರು ಹೇಳಿದ್ದಾರೆ.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm