ಬ್ರೇಕಿಂಗ್ ನ್ಯೂಸ್
06-10-20 12:26 pm Headline Karnataka News Network ದೇಶ - ವಿದೇಶ
ವಿಳ್ಳುಪುರಂ, ಅಕ್ಟೋಬರ್ 06: ಕಲ್ಲಕುರಿಚಿ ಶಾಸಕ ತಮ್ಮ ಮನೆಯಲ್ಲಿ ಪ್ರೇಯಸಿಯನ್ನು ವಿವಾಹವಾಗುವ ಮೂಲಕ ಸೋಮವಾರ ವಿವಾದಕ್ಕೀಡಾಗಿದ್ದಾರೆ.
ಪುತ್ರಿಯನ್ನು ಅಪಹರಿಸಲಾಗಿದೆ ಎಂದು ಆಪಾದಿಸಿ ಯುವತಿಯ ತಂದೆ ಶಾಸಕನ ಮನೆ ಮುಂದೆಯೇ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಘಟನೆಯೂ ನಡೆದಿದೆ. ಆ ಬಳಿಕ ನೂತನ ದಂಪತಿ ಮನೆಯಿಂದ ಹೊರಬಂದು "ನಾವು ಪರಸ್ಪರ ಪ್ರೇಮಿಸುತ್ತಿದ್ದೆವು, ಇದೀಗ ಸ್ವ ಇಚ್ಛೆಯಿಂದ ವಿವಾಹ ಬಂಧನಕ್ಕೊಳಗಾಗಿದ್ದೇವೆ" ಎಂದು ತಿಳಿಸಿದರು.
ತಿಯಾಗದುರುಗಂ ನಿವಾಸಿ, ಕಲ್ಲಕುರಿಚಿ ಕ್ಷೇತ್ರವನ್ನು ಪ್ರತಿನಿಧಿಸುವ ಎಐಎಡಿಎಂ ಶಾಸಕ ಎ. ಪ್ರಭು (35), ಅದೇ ಪಟ್ಟಣದ ಸೌಂದರ್ಯ (19) ಎಂಬಾಕೆಯನ್ನು ಸೋಮವಾರ ಮುಂಜಾನೆ ಮನೆಯಲ್ಲೇ ವಿವಾಹವಾದರು. ಈ ವಿಚಾರ ತಿಳಿದ ಯುವತಿಯ ತಂದೆ ಸಾಮಿನಾಥನ್ (48) ಶಾಸಕರ ಮನೆಗೆ ಧಾವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಅವರನ್ನು ತಡೆದಿದ್ದರು. ಬಳಿಕ ಸಾಮಿನಾಥನ್ ಅವರನ್ನು ಬಂಧಿಸಿ ಭಾರತೀಯ ದಂಡ ಸಂಹಿತೆ ಸೆಕ್ಷನ್ 309ರ ಅನ್ವಯ ಆತ್ಮಹತ್ಯೆಗೆ ಪ್ರಯತ್ನಿಸಿದ ಪ್ರಕರಣ ದಾಖಲಿಸಲಾಗಿದೆ.
ಇದಕ್ಕೂ ಮುನ್ನ ರವಿವಾರ ಸಂಜೆ ಸಾಮಿನಾಥನ್ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ, ತಿರುಚಂಗೋಡಿನ ಖಾಸಗಿ ಕಲಾ ಕಾಲೇಜಿನಲ್ಲಿ ಎರಡನೇ ವರ್ಷದ ಪದವಿ ವಿದ್ಯಾರ್ಥಿನಿಯಾಗಿರುವ ತಮ್ಮ ಹಿರಿಯ ಮಗಳನ್ನು ಶಾಸಕ ಪ್ರಭು ಅಪಹರಿಸಿದ್ದಾರೆ ಎಂದು ಆಪಾದಿಸಿದ್ದರು. ಈ ವಿಚಾರವನ್ನು ಪೊಲೀಸರ ಗಮನಕ್ಕೆ ತಾರದಂತೆ ಪ್ರಭು ಬೆಂಬಗಲಿಗರು ದೂರವಾಣಿ ಮೂಲಕ ಬೆದರಿಕೆ ಒಡ್ಡಿದ್ದಾರೆ ಎಂದು ಅವರು ದೂರಿದ್ದರು.
ಕಳೆದ ನಾಲ್ಕು ವರ್ಷಗಳಿಂದ ತಮ್ಮ ನಡುವೆ ಪ್ರೇಮಸಂಬಂಧ ಇತ್ತು ಎಂದು ನೂತನ ದಂಪತಿ ಬಿಡುಗಡೆ ಮಾಡಿರುವ ವೀಡಿಯೊದಲ್ಲಿ ದೃಢಪಡಿಸಿದ್ದಾರೆ. ಸೌಂದರ್ಯ ವಿವಾಹದ ಬಗ್ಗೆ ಪೋಷಕರ ಜತೆ ಮಾತುಕತೆ ನಡೆಸಿದ್ದಾಗಿ ಪ್ರಭು ಹೇಳಿಕೊಂಡಿದ್ದಾರೆ. ಇದಕ್ಕೆ ಅವರು ಒಪ್ಪದಿದ್ದಾಗ ಸೌಂದರ್ಯ ಮನೆ ಬಿಟ್ಟು ಬಂದಿದ್ದಾಗಿ ಅವರು ಹೇಳಿದ್ದಾರೆ.
18-10-25 09:11 pm
HK News Desk
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
18-10-25 11:01 pm
Mangalore Correspondent
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
Ullal, Someshwara, Pillar: ಸೋಮೇಶ್ವರ ಪಿಲಾರಿನಲ್...
17-10-25 09:36 pm
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
18-10-25 10:49 pm
Mangalore Correspondent
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm
Illegal Arms Case, Mahesh Shetty Timarodi: ಅಕ...
18-10-25 01:52 pm
ಪ್ರೀತಿ ನಿರಾಕರಿಸಿದ ಕಾಲೇಜು ಯುವತಿಯನ್ನು ನಡುರಸ್ತೆಯ...
17-10-25 03:27 pm