ಬ್ರೇಕಿಂಗ್ ನ್ಯೂಸ್
29-08-22 06:33 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 29 : ತಾವು ವಿದ್ಯಾರ್ಥಿ ನಾಯಕರಾಗಿದ್ದಾಗ ಕಾಂಗ್ರೆಸ್ ಮುಖಂಡ ಶ್ರೀಕಾಂತ್ ಜಿಚ್ಕರ್ ಉತ್ತಮ ಭವಿಷ್ಯಕ್ಕಾಗಿ ಕಾಂಗ್ರೆಸ್ ಸೇರುವಂತೆ ಕೇಳಿಕೊಂಡಿದ್ದರು. ಅದಕ್ಕೆ ನಾನು ಬಾವಿಗೆ ಹಾರಿ ಸಾಯುತ್ತೇನೆಯೇ ಹೊರತು ಕಾಂಗ್ರೆಸ್ಗೆ ಸೇರುವುದಿಲ್ಲ. ಏಕೆಂದರೆ ನನಗೆ ಕಾಂಗ್ರೆಸ್ ಪಕ್ಷದ ಸಿದ್ಧಾಂತ ಇಷ್ಟವಿಲ್ಲ ಎಂದಿದ್ದೆ ಎಂಬುದಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಹಳೆಯ ಪ್ರಸಂಗವನ್ನು ನೆನಪಿಸಿಕೊಂಡಿದ್ದಾರೆ.
ಇತ್ತೀಚೆಗೆ ಬಿಜೆಪಿ ಸಂಸದೀಯ ಕಮಿಟಿಯಿಂದ ಹೊರಬಿದ್ದ ಬಳಿಕ ಗಡ್ಕರಿಯವರು ಮೋದಿ ಸರಕಾರ ಮತ್ತು ಬಿಜೆಪಿ ಬಗ್ಗೆ ಅಸಮಾಧಾನ ಇರುವಂತೆ ಹೇಳಿಕೆ ನೀಡುತ್ತಿದ್ದಾರೆ. ಇದೀಗ ಉದ್ಯಮಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ನಿತಿನ್ ಗಡ್ಕರಿ, ವ್ಯಾಪಾರ, ಸಾಮಾಜಿಕ ಕೆಲಸ ಅಥವಾ ರಾಜಕೀಯದಲ್ಲಿರುವ ಯಾರಿಗಾದರೂ ಮಾನವನ ಸಂಬಂಧವೇ ದೊಡ್ಡ ಶಕ್ತಿಯಾಗಿದೆ. ಆದ್ದರಿಂದ, ಒಳ್ಳೆಯ ದಿನಗಳು ಅಥವಾ ಕೆಟ್ಟ ದಿನಗಳಲ್ಲಿ ಒಮ್ಮೆ ನೀವು ಯಾರದ್ದಾದರೂ ಕೈಯನ್ನು ಹಿಡಿದರೆ ಆ ಕೈಯನ್ನು ಯಾವಾಗಲೂ ಹಿಡಿದುಕೊಳ್ಳಿ ಎಂದು ಹೇಳಿದ್ದಾರೆ.
ಅಮೆರಿಕದ ಮಾಜಿ ಅಧ್ಯಕ್ಷ ರಿಚರ್ಡ್ ನಿಕ್ಸನ್ ಅವರನ್ನೂ ಉಲ್ಲೇಖಿಸಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ, ಒಬ್ಬ ವ್ಯಕ್ತಿಯು ಸೋತಾಗ ಅವನ ಕತೆ ಅಲ್ಲಿಗೇ ಮುಗಿಯುವುದಿಲ್ಲ. ಆದರೆ, ಆತ ಸೋತ ಮೇಲೆ ಇನ್ನಾಗದು ಎಂದು ಕೈಚೆಲ್ಲಿದಾಗ ಆತನ ಕತೆ ಅಂತ್ಯ ಕಾಣುತ್ತದೆ ಎಂಬ ಅಮೆರಿಕಾದ ಮಾಜಿ ಅಧ್ಯಕ್ಷ ರಿಚರ್ಡ್ ನಿಕ್ಸನ್ ಅವರ ಆತ್ಮಚರಿತ್ರೆಯ ವಾಕ್ಯವನ್ನು ಯುವ ಉದ್ಯಮಿಗಳು ನೆನಪಿಟ್ಟುಕೊಳ್ಳಬೇಕು ಎಂದು ಹೇಳಿದ್ದಾರೆ.
ಇತ್ತೀಚೆಗೆ ಗಡ್ಕರಿಯವರು ಬಿಜೆಪಿ ಅಧಿಕಾರಕ್ಕೆ ಬರಲು ಅಟಲ್ ಬಿಹಾರಿ ವಾಜಪೇಯಿ, ಎಲ್.ಕೆ ಅಡ್ವಾಣಿ ಮತ್ತು ದೀನದಯಾಳ್ ಉಪಾಧ್ಯಾಯ ಮಾಡಿದ ಕೆಲಸಗಳು ಕಾರಣ ಎಂದು ಹೇಳಿ ಚರ್ಚೆಗೆ ಗ್ರಾಸವಾಗಿದ್ದರು. ಮುಂಬೈನಲ್ಲಿ 1980ರ ಬಿಜೆಪಿ ಸಮಾವೇಶದಲ್ಲಿ ವಾಜಪೇಯಿ ಭಾಷಣವನ್ನು ನಾನು ಕೇಳಿದ್ದೆ. ಅಟಲ್ ಜಿ ಅವರು ‘ಅಂಧೇರಾ ಛಟೇಗಾ, ಸೂರಜ್ ನಿಕ್ಲೇಗಾ, ಕಮಲ ಖಿಲೇಗಾ’ (ಕತ್ತಲು ಮಾಯವಾಗುತ್ತದೆ, ಸೂರ್ಯ ಹೊರಬರುತ್ತಾನೆ ಮತ್ತು ಕಮಲ ಅರಳುತ್ತದೆ) ಎಂದು ಹೇಳಿದ್ದರು. ಆ ದಿನ ಅಟಲ್ ಭಾಷಣ ಕೇಳಿದವರೆಲ್ಲರೂ ಇಂತಹ ದಿನ ಬರುತ್ತದೆ ಎಂದು ಆಗಲೇ ನಂಬಿದ್ದರು. ಅಟಲ್ ಜಿ, ಅಡ್ವಾಣಿ ಜಿ, ದೀನದಯಾಳ್ ಉಪಾಧ್ಯಾಯ ಮತ್ತು ಅನೇಕ ಕಾರ್ಯಕರ್ತರು ಬಿಜೆಪಿ ಅಧಿಕಾರಕ್ಕೆ ಬರಲು ಅಗತ್ಯವಿರುವ ಕೆಲಸವನ್ನು ಮಾಡಿದ್ದಾರೆ ಎಂದು ನಿತಿನ್ ಗಡ್ಕರಿ ಹೇಳಿದ್ದರು.
Days after being dropped from the BJP Parliamentary Board, Union Minister Nitin Gadkari on Sunday said that he would rather jump into a well than join the Congress.Addressing a corporate event in Nagpur, Gadkari said, “I had an offer to join the Congress party from my friend and late Congress leader Shrikant Jichkar. I told him I will jump into a well but not join the Congress because I do not like the ideology of the Congress.”
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm