ಬ್ರೇಕಿಂಗ್ ನ್ಯೂಸ್
31-08-22 08:06 pm HK News Desk ದೇಶ - ವಿದೇಶ
ನವದೆಹಲಿ, ಆ 31: ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ತಾಯಿ ವಿಧಿವಶರಾದರು. ಇಟಲಿಯಲ್ಲಿನ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ಸೋನಿಯಾ ಗಾಂಧಿ ತಾಯಿ, ಸಂಸದ ರಾಹುಲ್ ಗಾಂಧಿ ಅಜ್ಜಿ ಪಾವೊಲಾ ಮೈನೋ ಆಗಸ್ಟ್ 27ರಂದು ನಿಧನರಾಗಿದ್ದಾರೆ. ಮಂಗಳವಾರ ಅಂತ್ಯಕ್ರಿಯೆ ನಡೆದಿದೆ.ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಸಂವಹನ ವಿಭಾಗದ ಉಸ್ತುವಾರಿ ಜೈರಾಮ್ ರಮೇಶ್ ಈ ಕುರಿತು ಟ್ವೀಟ್ ಮಾಡಿದ್ದಾರೆ. ವೈದ್ಯಕೀಯ ಪರೀಕ್ಷೆಗಾಗಿ ಸೋನಿಯಾ ಗಾಂಧಿ ವಿದೇಶಕ್ಕೆ ತೆರಳಿದ್ದು, ರಾಹುಲ್ ಗಾಂಧಿ ಸಹ ಅವರ ಜೊತೆ ಇದ್ದಾರೆ.

ತಮ್ಮ ಟ್ವೀಟ್ನಲ್ಲಿ ಜೈರಾಮ್ ರಮೇಶ್, 'ಶ್ರೀಮತಿ ಸೋನಿಯಾ ಗಾಂಧಿಯವರ ತಾಯಿ, ಶ್ರೀಮತಿ ಪಾವೊಲಾ ಮೈನೋ ಅವರು 27 ಆಗಸ್ಟ್ 2022 ರಂದು ಶನಿವಾರ ಇಟಲಿಯಲ್ಲಿ ತಮ್ಮ ಮನೆಯಲ್ಲಿ ನಿಧನರಾದರು. ಅಂತ್ಯಕ್ರಿಯೆ ನಿನ್ನೆ ನಡೆಯಿತು' ಎಂದು ಮಾಹಿತಿ ನೀಡಿದ್ದಾರೆ.

ವಿದೇಶದಲ್ಲಿರುವ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಎಂದು ನವದೆಹಲಿಗೆ ವಾಪಸ್ ಆಗಲಿದ್ದಾರೆ? ಎಂಬುದು ಇನ್ನೂ ಖಚಿತವಾಗಿಲ್ಲ. ಆದರೆ ದೆಹಲಿಯಲ್ಲಿ ಸೆಪ್ಟೆಂಬರ್ 4ರಂದು ನಡೆಯಲಿರುವ 'ಮೆಹೆಂಗೈ ಪರ್ ಹಲ್ಲಾ ಬೋಲ್' ಜಾಥಾ ಉದ್ದೇಶಿಸಿ ಅವರು ಮಾತನಾಡಲಿದ್ದಾರೆ ಎಂಬ ಮಾಹಿತಿ ಇದೆ.
ಭಾನುವಾರ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಬಗ್ಗೆ ಚರ್ಚಿಸಲು ಸಭೆ ನಡೆದಿತ್ತು. ಸೋನಿಯಾ ಗಾಂಧಿ ವಿದೇಶದಿಂದಲೇ ಸಭೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಪಾಲ್ಗೊಂಡಿದ್ದರು. ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದ್ದು, ಅಗತ್ಯವಿದ್ದರೆ ಅಕ್ಟೋಬರ್ 19ರಂದು ಮತ ಎಣಿಕೆ ನಡೆಯಲಿದೆ.
ಕಾಂಗ್ರೆಸ್ ಪಕ್ಷ ಕಾಶ್ಮೀರದಿಂದ ಕನ್ಯಾಕುಮಾರಿ ತನಕ 'ಭಾರತ್ ಜೋಡೋ' ಯಾತ್ರೆಗೆ ತಯಾರಿ ನಡೆಸಿದೆ. ಸೆಪ್ಟೆಂಬರ್ 7ರಂದು ಈ ಯಾತ್ರೆಗೆ ಚಾಲನೆ ಸಿಗಲಿದೆ. 3500 ಕಿ. ಮೀ.ಗಳ ದೊಡ್ಡ ಪಾದಯಾತ್ರೆ ಇದಾಗಿದೆ. ಸುಮಾರು 150 ದಿನಗಳ ಕಾಲ ನಡೆಯುವ ಬೃಹತ್ ಪಾದಯಾತ್ರೆ ನಡೆಯಲಿದೆ.
Congress president Sonia Gandhi’s mother, Paola Maino, died on August 27 and her funeral was held on Tuesday. Sonia Gandhi had left last week to meet her mother. This was part of her trip abroad for medical check-ups, where her son Rahul Gandhi and daughter Priyanka Gandhi Vadra went with her.Jairam Ramesh, Congress general secretary of communications, has tweeted the news of the death of Sonia Gandhi’s mother.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm