ಬ್ರೇಕಿಂಗ್ ನ್ಯೂಸ್
02-09-22 09:48 pm HK News Desk ದೇಶ - ವಿದೇಶ
ಕಾಬೂಲ್, ಸೆ.2: ಪಶ್ಚಿಮ ಅಫ್ಘಾನ್ ನಗರದ ಹೆರಾತ್ನಲ್ಲಿರುವ ಮಸೀದಿಯಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿದ್ದು, 18 ಜನರು ಸಾವನ್ನಪ್ಪಿದ್ದಾರೆ.
ಶುಕ್ರವಾರ ಮಧ್ಯಾಹ್ನದ ಪ್ರಾರ್ಥನೆಯ ಸಮಯದಲ್ಲಿ ಹೆರಾತ್ನ ಗುಜರ್ಗಾ ಮಸೀದಿಯಲ್ಲಿ ಸ್ಫೋಟ ಸಂಭವಿಸಿದೆ. ಇಂದು ಮುಸ್ಲಿಂ ಧಾರ್ಮಿಕ ವಾರದ ಪ್ರಮುಖ ದಿನವಾಗಿದ್ದು, ಮಸೀದಿಯಲ್ಲಿ ವಿಶೇಷ ಜನಸಂದಣಿಯಿತ್ತು.
ಶುಕ್ರವಾರ ಪ್ರಾರ್ಥನೆಗೂ ಕೊಂಚ ಮುನ್ನ ಸಂಭವಿಸಿದ ಈ ಭೀಕರ ಸ್ಫೋಟದಲ್ಲಿ ಕನಿಷ್ಠ 18 ಜನರು ಬಲಿಯಾಗಿದ್ದು, ಸುಮಾರು 23 ಮಂದಿ ಗಾಯಗೊಂಡಿದ್ದಾರೆ ಎಂದು ಹೆರಾತ್ ಪ್ರಾಂತ್ಯದ ಗವರ್ನರ್ ಅವರ ವಕ್ತಾರ ಹಮೀದುಲ್ಲಾ ಮೊಟವಾಕೆಲ್ ತಿಳಿಸಿದ್ದಾರೆ. ಮೃತರಲ್ಲಿ ಮಸೀದಿಯ ಇಮಾಮ್ ಮುಜೀಬ್ ಉರ್ ರಮಹಾನ್ ಅನ್ಸಾರಿ ಸೇರಿರುವುದನ್ನು ಸರ್ಕಾರದ ವಕ್ತಾರ ಜಬೀಹುಲ್ಲಾ ಮುಜಾಹಿದ್ ಖಚಿತಪಡಿಸಿದ್ದಾರೆ.
ಈ ಘಟನೆಯ ಹೊಣೆಯನ್ನು ಇದುವರೆಗೂ ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ. ಈ ಹಿಂದಿನ ಮಸೀದಿ ದಾಳಿಗಳನ್ನು ಇಸ್ಲಾಮಿಕ್ ಸ್ಟೇಟ್ ಉಗ್ರಗಾಮಿ ಗುಂಪು ನಡೆಸಿದ್ದು, ಇದು ಅಫ್ಘಾನಿಸ್ತಾನದಲ್ಲಿ ಧಾರ್ಮಿಕ ಮತ್ತು ಜನಾಂಗೀಯ ಅಲ್ಪಸಂಖ್ಯಾತರ ವಿರುದ್ಧ ಸರಣಿ ದಾಳಿಗಳನ್ನು ನಡೆಸಿ, ತಾಲಿಬಾನ್ ಅನ್ನು ಗುರಿಯಾಗಿಸಿಕೊಂಡಿದೆ.
ತನ್ನ ಪ್ರಚೋದನಾಕಾರಿ ಹೇಳಿಕೆಗಳಿಂದ ಪ್ರಸಿದ್ಧರಾಗಿದ್ದ ಅನ್ಸಾರಿ, ತಾಲಿಬಾನ್ ಸರ್ಕಾರದಲ್ಲಿ ಬಹಳ ಪ್ರಭಾವಿ ವ್ಯಕ್ತಿಯಾಗಿದ್ದರು. ಜುಲೈನಲ್ಲಿ ಕಾಬೂಲ್ನಲ್ಲಿ ಧಾರ್ಮಿಕ ಸಮಾವೇಶದಲ್ಲಿ ಮಾತನಾಡಿದ್ದ ಅನ್ಸಾರಿ, ಅಫ್ಘಾನಿಸ್ತಾನದಲ್ಲಿನ ತಾಲಿಬಾನ್ ಆಡಳಿತವನ್ನು ಸಮರ್ಥಿಸಿಕೊಂಡಿದ್ದರು.
"ನಮ್ಮ ಇಸ್ಲಾಮಿಕ್ ಸರ್ಕಾರದ ವಿರುದ್ಧ ಅತಿ ಸಣ್ಣ ಕೃತ್ಯವನ್ನು ಕೂಡ ಯಾರಾದರೂ ಎಸಗಿದರೂ ಅವರ ಶಿರಚ್ಛೇದ ಮಾಡಬೇಕು. ಈ ಬಾವುಟ (ತಾಲಿಬಾನ್) ಸುಲಭವಾಗಿ ಹಾರಾಡಿಲ್ಲ. ಹಾಗೆಯೇ ಅದನ್ನು ಕೆಳಕ್ಕೆ ಇಳಿಸುವುದು ಸುಲಭವಲ್ಲ" ಎಂದಿದ್ದರು.
ಕಳೆದ ವರ್ಷದ ಆಗಸ್ಟ್ನಲ್ಲಿ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಧಿಕಾರಕ್ಕೆ ಮರಳುವ ಮುನ್ನ ಕೂಡ ಅನ್ಸಾರಿ ಅವರು ಅಮೆರಿಕ ಬೆಂಬಲಿತ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸುತ್ತಿದ್ದರು. ಅವರು ಒಂದು ತಿಂಗಳ ಒಳಗೇ, ಬಾಂಬ್ ಸ್ಫೋಟದಲ್ಲಿ ಮೃತಪಟ್ಟ ತಾಲಿಬಾನ್ ಪರವಿರುವ ಎರಡನೇ ಧಾರ್ಮಿಕ ನಾಯಕರಾಗಿದ್ದಾರೆ. ಕಾಬೂಲ್ನಲ್ಲಿ ಮದರಸಾದಲ್ಲಿ ನಡೆದ ಆತ್ಮಾಹುತಿ ದಾಳಿಯಲ್ಲಿ ರಹಿಮುಲ್ಲಾ ಹಕ್ಕಾನಿಯನ್ನು ಹತ್ಯೆ ಮಾಡಲಾಗಿತ್ತು.
ಅಫ್ಘಾನಿಸ್ತಾನದಲ್ಲಿ ಕಳೆದ ವರ್ಷ ತಾಲಿಬಾನ್ ಅಧಿಕಾರಕ್ಕೆ ಬಂದ ಬಳಿಕ ಹಿಂಸಾಚಾರಗಳಲ್ಲಿ ಇಳಿಕೆಯಾಗಿದೆ. ಆದರೆ ಕೆಲವು ತಿಂಗಳಿನಿಂದ ಅಲ್ಪಸಂಖ್ಯಾತ ಸಮುದಾಯಗಳನ್ನು ಗುರಿಯಾಗಿಸಿ ದಾಳಿಗಳು ನಡೆದಿವೆ. ಇವುಗಳಲ್ಲಿ ಹೆಚ್ಚಿನ ಕೃತ್ಯಗಳಿಗೆ ಇಸ್ಲಾಮಿಕ್ ಸ್ಟೇಟ್ ಹೊಣೆ ಹೊತ್ತುಕೊಂಡಿದೆ.
An Afghan medic says at least 18 people were killed and 21 wounded in a blast that tore through a crowded mosque in the western city of Herat.Mohammad Daud Mohammadi, an official at the Herat ambulance centre, said ambulances transported 18 dead and 21 wounded to hospitals in the city on Friday.The blast went off in the Guzargah Mosque in the western city of Herat during Friday noon prayers, the highlight of the Muslim religious week when places of worship are particularly crowded.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
22-04-25 07:13 pm
HK News Desk
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm