ಬ್ರೇಕಿಂಗ್ ನ್ಯೂಸ್
10-09-22 08:04 pm HK News Desk ದೇಶ - ವಿದೇಶ
Photo credits : mathrubhumi news
ಕೇರಳ, ಸೆ.10: ಒಂದು ಕುಂಬಳಕಾಯಿಯ ಬೆಲೆ 47 ಸಾವಿರ ರೂಪಾಯಿ ಅಂದರೆ ಯಾರೂ ನಂಬುವುದಿಲ್ಲ. ಆದರೂ ಇದು ಸತ್ಯ. ಕುಂಬಳಕಾಯಿಯೊಂದು ಬರೋಬ್ಬರಿ 47 ಸಾವಿರ ರೂಪಾಯಿಗೆ ಮಾರಾಟವಾಗಿದ್ದು ನಿಜ. ಇಡುಕ್ಕಿಯ ಗುಡ್ಡ ಪ್ರದೇಶದಲ್ಲಿರುವ ಚೆಮ್ಮನ್ನಾರ್ ಎಂಬಲ್ಲಿ ನಡೆದ ಓಣಂ ಹಬ್ಬದ ಹರಾಜಿನಲ್ಲಿ 5 ಕೆಜಿ ತೂಕದ ಕುಂಬಳಕಾಯಿಯೊಂದು 47 ಸಾವಿರ ರೂಪಾಯಿಗೆ ಮಾರಾಟವಾಗಿದೆ. ಇದು ಈ ಬಾರಿಯ ಓಣಂ ಹಬ್ಬದ ವಿಶೇಷತೆಯಾಗಿದೆ.
ಸಾಮಾನ್ಯವಾಗಿ ಇಲ್ಲಿ ನಡೆಯುವ ಹರಾಜಿನಲ್ಲಿ ಟಗರು, ಹುಂಜ ಮುಂತಾದುವು 10 ಸಾವಿರಕ್ಕೂ ಅಧಿಕ ಬೆಲೆಗೆ ಮಾರಾಟವಾಗುತ್ತವೆ. ಆದರೆ ಇದಕ್ಕಿಂತಲೂ ದೊಡ್ಡ ಬೆಲೆಗೆ ಕುಂಬಳಕಾಯಿ ಮಾರಾಟವಾಗಿದ್ದು ಒಂದು ದಾಖಲೆಯಾಗಿದೆ. ಕುಂಬಳಕಾಯಿಗೆ ಈ ಪರಿ ಬೆಲೆ ಬಂದಿರುವುದನ್ನು ನೋಡಿ ಇಲ್ಲಿನ ಹರಾಜಿನ ಬಗ್ಗೆ ಜನರಲ್ಲಿ ವಿಪರೀತ ಕುತೂಹಲ ಮೂಡಿದೆ. ಇನ್ನೂ ವಿಚಿತ್ರ ಏನೆಂದರೆ ಈ ಕುಂಬಳಕಾಯಿಯನ್ನು ಹಬ್ಬದ ಸಂಘಟಕರಿಗೆ ಉಚಿತವಾಗಿ ನೀಡಿದ್ದರು ಎಂಬುದು.
47 ಸಾವಿರ ರೂ.ಗೆ ಮಾರಾಟವಾದ ಕುಂಬಳಕಾಯಿ
ಓಣಂ ಹಬ್ಬದ ಖರ್ಚು ವೆಚ್ಚಗಳನ್ನು ಸರಿದೂಗಿಸಲು ಪ್ರಯತ್ನಿಸುತ್ತಿದ್ದ ಸಂಘಟಕರಿಗೆ ಒಂದೇ ಒಂದು ಕುಂಬಳಕಾಯಿ ಮಾರಾಟದಿಂದ 47 ಸಾವಿರ ರೂಪಾಯಿ ಸಿಕ್ಕಿರುವುದು ಖುಷಿಯಾಗಿದೆ. ಅದೃಷ್ಟ ಎಂಬುದು ಕುಂಬಳಕಾಯಿ ರೂಪದಲ್ಲೂ ಬರುತ್ತೆ ಎಂದು ಇಲ್ಲಿನ ಜನ ಈಗ ಮಾತನಾಡಿಕೊಳ್ಳುತ್ತಿದ್ದಾರೆ.
An auction conducted in Chemmnar in Idukki as part of Onam celebrations became so competitive that a Pumpkin was sold for Rs 47,000.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm