ಬ್ರೇಕಿಂಗ್ ನ್ಯೂಸ್
14-09-22 04:06 pm HK News Desk ದೇಶ - ವಿದೇಶ
ಚೆನ್ನೈ, ಸೆ.14 : ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಪಕ್ಷದ ಉಪ ಪ್ರಧಾನ ಕಾರ್ಯದರ್ಶಿ ಮತ್ತು ಸಂಸದ ಎ.ರಾಜಾ ಹಿಂದುಗಳ ಬಗ್ಗೆ ಅವಹೇಳನಕಾರಿ ಮಾತನಾಡಿದ್ದು ವಿವಾದಕ್ಕೆ ತುತ್ತಾಗಿದ್ದಾರೆ. ಶೂದ್ರರ ಕುರಿತು ಎ.ರಾಜಾ ನೀಡಿರುವ ಹೇಳಿಕೆಗೆ ಪ್ರತಿಪಕ್ಷ ಬಿಜೆಪಿ ಕೆಂಡಾಮಂಡಲವಾಗಿದೆ.
ಪಕ್ಷದ ಸಭೆಯಲ್ಲಿ ಮಾತನಾಡಿದ ಎ. ರಾಜಾ, "ಹಿಂದೂ ಆಗಿ ಉಳಿಯುವವರೆಗೂ ನೀನು ಶೂದ್ರನಾಗಿರುವೆ. ಶೂದ್ರನಾಗಿ ಉಳಿಯುವವರೆಗೂ ನೀನು ವೇಶ್ಯೆಯ ಮಗನಾಗಿರುತ್ತೀಯ. ಹಿಂದೂ ಆಗಿ ಉಳಿಯುವವರೆಗೂ ನೀನು ಪಂಚಮನಾಗಿರುತ್ತಿ (ದಲಿತ). ಹಿಂದೂ ಆಗಿ ಉಳಿಯುವವರೆಗೂ ನೀನು ಅಸ್ಪೃಶ್ಯನಾಗುಯೇ ಇರುತ್ತೀಯ ಎಂದು ಹಿಂದುಳಿದ ಜನಾಂಗದ ಬಗ್ಗೆ ಹೇಳಿದ್ದರು.
ಮನುಸ್ಮೃತಿಯಲ್ಲಿ ಶೂದ್ರರನ್ನು ಅವಮಾನಿಸಲಾಗಿದೆ. ಶೂದ್ರರಿಗೆ ಸಮಾನತೆ, ಶಿಕ್ಷಣ, ಉದ್ಯೋಗ ಮತ್ತು ದೇವಾಲಯಗಳಿಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ನೀಲಗಿರಿಯ ಸಂಸದ ಎ.ರಾಜಾ ಅಸಮಾಧಾನ ಹೊರಹಾಕಿದ್ದರು. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಎ.ರಾಜಾ, "ನಿಮ್ಮಲ್ಲಿ ಎಷ್ಟು ಮಂದಿ ವೇಶ್ಯೆಯರ ಮಕ್ಕಳಾಗಿ ಉಳಿಯಲು ಬಯಸುತ್ತೀರಿ? ನಿಮ್ಮಲ್ಲಿ ಎಷ್ಟು ಮಂದಿ ಅಸ್ಪೃಶ್ಯರಾಗಿ ಉಳಿಯಲು ಬಯಸುತ್ತೀರಿ? ಈ ಪ್ರಶ್ನೆಗಳ ಬಗ್ಗೆ ನಾವು ಧ್ವನಿ ಎತ್ತಿದರೆ ಮಾತ್ರ ಸನಾತನ ಧರ್ಮದ ಪ್ರಭಾವದಿಂದ ಹೊರಬರಲು ಸಾಧ್ಯ ಎಂದು ಎ.ರಾಜಾ ಹೇಳಿದ್ದಾರೆ.
ಒಬ್ಬ ವ್ಯಕ್ತಿ ಕ್ರಿಶ್ಚಿಯನ್, ಮುಸ್ಲಿಂ ಅಥವಾ ಪರ್ಷಿಯನ್ ಅಲ್ಲದಿದ್ದರೆ, ಅವನು ಹಿಂದೂ ಆಗಿರಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ ಎಂದು ಮಾಜಿ ಕೇಂದ್ರ ಸಚಿವರೊಬ್ಬರು ಹೇಳಿದ್ದಾರೆ. ಇಂತಹ ಸಾಮಾಜಿಕ ಕ್ರೌರ್ಯವನ್ನು ಪ್ರಸ್ತುತ ಜಗತ್ತಿನ ಯಾವುದೇ ದೇಶ ಎದುರಿಸುತ್ತಿಲ್ಲ ಎಂದು ಎ. ರಾಜಾ ತೀವ್ರ ವಾಗ್ದಾಳಿ ನಡೆಸಿದ್ದರು.
ಈ ಕುರಿತು ರಣಿ ಟ್ವೀಟ್ಗಳನ್ನೂ ಮಾಡಿರುವ ಎ. ರಾಜಾ, "ಶೂದ್ರರು ಯಾರು? ಅವರು ಹಿಂದೂಗಳಲ್ಲವೇ? ಮನುಸ್ಮೃತಿಯಲ್ಲಿ ಅವರನ್ನು ಏಕೆ ಅವಮಾನಿಸಲಾಗಿದೆ. ಶೂದ್ರರಿಗೆ ಸಮಾನತೆ, ಶಿಕ್ಷಣ, ಉದ್ಯೋಗ ಮತ್ತು ದೇವಾಲಯ ಪ್ರವೇಶವನ್ನು ಏಕೆ ನಿರಾಕರಿಸಲಾಗಿದೆ. ದ್ರಾವಿಡ ಚಳುವಳಿ ಶೇ.90ರಷ್ಟು ಶೂದ್ರರನ್ನು ಈ ಸಾಮಾಜಿಕ ಜೀತದಿಂದ ರಕ್ಷಿಸಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಡಿಎಂಕೆ ಸಂಸದ ಎ. ರಾಜಾ ನೀಡಿರುವ ಹೇಳಿಕೆಯನ್ನು ಪ್ರತಿಪಕ್ಷ ಬಿಜೆಪಿ ಅತ್ಯುಗ್ರವಾಗಿ ಖಂಡಿಸಿದೆ. ಹಿಂದೂ ಸಮಾಜದ ಒಗ್ಗಟ್ಟನ್ನು ಒಡೆಯಲು ಎ.ರಾಜಾ ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ.
ಈ ಕುರಿತು ಮಾತನಾಡಿರುವ ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ.ಅಣ್ಣಾಮಲೈ, ಎ.ರಾಜಾ ಅವರ ಹೇಳಿಕೆಯನ್ನು ʼತಮಿಳುನಾಡಿನ ರಾಜಕೀಯ ಭಾಷಣದ ಒಂದು ವಿಷಾದನೀಯ ಸ್ಥಿತಿʼ ಎಂದು ಬಣ್ಣಿಸಿದ್ದಾರೆ. ಅಲ್ಲದೇ ಎ. ರಾಜಾ ಇತರರನ್ನು ಸಮಾಧಾನಪಡಿಸುವ ಏಕೈಕ ಗುರಿಯೊಂದಿಗೆ ಒಂದು ಸಮುದಾಯದ ವಿರುದ್ಧ ಮತ್ತೊಮ್ಮೆ ದ್ವೇಷವನ್ನು ಹೊರಹಾಕಿದ್ದಾರೆ. ಇಡೀ ತಮಿಳುನಾಡನ್ನು ತಮ್ಮದೇ ಎಂದು ಭಾವಿಸುವ ಈ ರಾಜಕೀಯ ನಾಯಕರ ದುರದೃಷ್ಟಕರ ಮನಸ್ಥಿತಿ ರಾಜ್ಯವನ್ನು ಹಿಂದಕ್ಕೆ ಕೊಂಡೊಯ್ಯುತ್ತಿದೆ ಎಂದೂ ಅಣ್ಣಾಮಲೈ ಕಿಡಿಕಾರಿದ್ದಾರೆ.
Chennai, Sep 13 (PTI) DMK deputy general secretary A Raja stoked a controversy over his Shudra remark and drew BJP’s ire with the saffron party accusing him of spewing hatred against a community to appease others.Shudras, the Nilgiris MP claimed, were insulted in Manusmrithi and denied equality, education, employment and entry into temples.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 11:27 am
Mangalore Correspondent
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm