ಬ್ರೇಕಿಂಗ್ ನ್ಯೂಸ್
08-10-20 12:14 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 07: ಭಾರತೀಯ ವಾಯುಸೇನೆಯು ಇಂದು 88ನೇ ಸಂಸ್ಥಾಪನಾ ದಿನವನ್ನು ಆಚರಿಸಿಕೊಳ್ಳುತ್ತಿದ್ದು, ಉತ್ತರ ಪ್ರದೇಶದ ಘಾಜಿಯಬಾದ್ನಲ್ಲಿರುವ ಹಿಂಡನ್ ವಾಯುನೆಲೆಯಲ್ಲಿ ವಿಶೇಷ ಪರೇಡ್ ಅನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್, ಸೇನಾ ಮುಖ್ಯಸ್ಥರಾದ ಜನರಲ್ ಮನೋಜ್ ಮುಕುಂದ್ ನರಾವಣೆ ಮತ್ತು ನೌಕಾ ಪಡೆಯ ಮುಖ್ಯಸ್ಥ ಅಡ್ಮಿರಲ್ ಕರಂಬಿರ್ ಸಿಂಗ್ ಅವರು ಭಾಗಿಯಾಗಿದ್ದರು. ವಾಯುಪಡೆಯ ಮುಖ್ಯಸ್ಥರಾದ ಮಾರ್ಷಲ್ ರಾಕೇಶ್ ಕುಮಾರ್ ಸಿಂಗ್ ಭದೌರಿಯಾ ಅವರು ಹಿಂಡನ್ ವಾಯುನೆಲೆಯಲ್ಲಿ 88ನೇ ಭಾರತೀಯ ವಾಯುಪಡೆ ದಿನದ ಮೆರವಣಿಗೆಯನ್ನು ಪರಿಶೀಲಿಸಿದರು.

ಇನ್ನು ಈ ವರ್ಷದ ವಿಶೇಷ ಪರೇಡ್ ಪ್ರಮುಖ ಆಕರ್ಷಣೆ ರಫೇಲ್ ಯುದ್ಧ ವಿಮಾನ ಎಂಬುವುದು ಎಲ್ಲರಿಗೂ ತಿಳಿದಿರುವ ವಿಚಾರ. ಇದರ ಜೊತೆಗೆ ಸುಕೋಯ್, ತೇಜಸ್, ಅಪಾಚೆ, ಮಿಗ್ ಸೇರಿ ಅನೇಕ ಯುದ್ಧ ವಿಮಾನಗಳು ಶಕ್ತಿ ಪ್ರದರ್ಶನ ಮಾಡಲಿವೆ. ವಿಶೇಷ ಹೆಲಿಕಾಫ್ಟರ್ಗಳು ಸಾಹಸ ಪ್ರದರ್ಶಿಸಲಿವೆ. ಒಟ್ಟಾರೆ 56 ಏರ್ಕ್ರಾಫ್ಟ್ಗಳು, 19 ಫೈಟರ್ ಜೆಟ್ಗಳು, 19 ಹೆಲಿಕಾಫ್ಟರ್ಗಳು ಈ ವರ್ಷದ ಪರೇಡ್ನಲ್ಲಿ ಕಾಣಿಸಿಕೊಳ್ಳಲಿವೆ.

ಭಾರತೀಯ ವಾಯುಸೇನಾ ದಿನವನ್ನು 1932, ಅಕ್ಟೋಬರ್ 8 ರಂದು ಮೊದಲ ಬಾರಿ ಆಚರಿಸಲಾಯಿತು. ಇದಾದ ಬಳಿಕ ಪ್ರತಿವರ್ಷ ಈ ದಿನವನ್ನು ಆಚರಿಸಲಾಗುತ್ತಿದೆ. ನೆರೆ ದೇಶಗಳಾದ ಪಾಕಿಸ್ತಾನ ಮತ್ತು ಚೀನಾದೊಂದಿಗೆ ನಡೆದ ಯುದ್ಧದಲ್ಲಿ ನಮ್ಮ ವಾಯುಪಡೆ ಅತ್ಯಂತ ಮಹತ್ವದ ಪಾತ್ರ ವಹಿಸಿದೆ. ವಾಯುಪಡೆಯು ನಡೆಸಿದ ಸೇನಾ ಕಾರ್ಯಾಚರಣೆಗಳಲ್ಲಿ ಆಪರೇಷನ್ ವಿಜಯ್, ಆಪರೇಷನ್ ಮೇಘದೂತ್, ಆಪರೇಷನ್ ಕ್ಯಾಕ್ಟಸ್, ಆಪರೇಷನ್ ಪೂಮಲೈ, ಆಪರೇಷನ್ ರಾಹತ್ ಇತ್ಯಾದಿಗಳು ಅತ್ಯಂತ ಪ್ರಮುಖವಾಗಿವೆ
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm