ಬ್ರೇಕಿಂಗ್ ನ್ಯೂಸ್
08-10-20 12:14 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 07: ಭಾರತೀಯ ವಾಯುಸೇನೆಯು ಇಂದು 88ನೇ ಸಂಸ್ಥಾಪನಾ ದಿನವನ್ನು ಆಚರಿಸಿಕೊಳ್ಳುತ್ತಿದ್ದು, ಉತ್ತರ ಪ್ರದೇಶದ ಘಾಜಿಯಬಾದ್ನಲ್ಲಿರುವ ಹಿಂಡನ್ ವಾಯುನೆಲೆಯಲ್ಲಿ ವಿಶೇಷ ಪರೇಡ್ ಅನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್, ಸೇನಾ ಮುಖ್ಯಸ್ಥರಾದ ಜನರಲ್ ಮನೋಜ್ ಮುಕುಂದ್ ನರಾವಣೆ ಮತ್ತು ನೌಕಾ ಪಡೆಯ ಮುಖ್ಯಸ್ಥ ಅಡ್ಮಿರಲ್ ಕರಂಬಿರ್ ಸಿಂಗ್ ಅವರು ಭಾಗಿಯಾಗಿದ್ದರು. ವಾಯುಪಡೆಯ ಮುಖ್ಯಸ್ಥರಾದ ಮಾರ್ಷಲ್ ರಾಕೇಶ್ ಕುಮಾರ್ ಸಿಂಗ್ ಭದೌರಿಯಾ ಅವರು ಹಿಂಡನ್ ವಾಯುನೆಲೆಯಲ್ಲಿ 88ನೇ ಭಾರತೀಯ ವಾಯುಪಡೆ ದಿನದ ಮೆರವಣಿಗೆಯನ್ನು ಪರಿಶೀಲಿಸಿದರು.

ಇನ್ನು ಈ ವರ್ಷದ ವಿಶೇಷ ಪರೇಡ್ ಪ್ರಮುಖ ಆಕರ್ಷಣೆ ರಫೇಲ್ ಯುದ್ಧ ವಿಮಾನ ಎಂಬುವುದು ಎಲ್ಲರಿಗೂ ತಿಳಿದಿರುವ ವಿಚಾರ. ಇದರ ಜೊತೆಗೆ ಸುಕೋಯ್, ತೇಜಸ್, ಅಪಾಚೆ, ಮಿಗ್ ಸೇರಿ ಅನೇಕ ಯುದ್ಧ ವಿಮಾನಗಳು ಶಕ್ತಿ ಪ್ರದರ್ಶನ ಮಾಡಲಿವೆ. ವಿಶೇಷ ಹೆಲಿಕಾಫ್ಟರ್ಗಳು ಸಾಹಸ ಪ್ರದರ್ಶಿಸಲಿವೆ. ಒಟ್ಟಾರೆ 56 ಏರ್ಕ್ರಾಫ್ಟ್ಗಳು, 19 ಫೈಟರ್ ಜೆಟ್ಗಳು, 19 ಹೆಲಿಕಾಫ್ಟರ್ಗಳು ಈ ವರ್ಷದ ಪರೇಡ್ನಲ್ಲಿ ಕಾಣಿಸಿಕೊಳ್ಳಲಿವೆ.

ಭಾರತೀಯ ವಾಯುಸೇನಾ ದಿನವನ್ನು 1932, ಅಕ್ಟೋಬರ್ 8 ರಂದು ಮೊದಲ ಬಾರಿ ಆಚರಿಸಲಾಯಿತು. ಇದಾದ ಬಳಿಕ ಪ್ರತಿವರ್ಷ ಈ ದಿನವನ್ನು ಆಚರಿಸಲಾಗುತ್ತಿದೆ. ನೆರೆ ದೇಶಗಳಾದ ಪಾಕಿಸ್ತಾನ ಮತ್ತು ಚೀನಾದೊಂದಿಗೆ ನಡೆದ ಯುದ್ಧದಲ್ಲಿ ನಮ್ಮ ವಾಯುಪಡೆ ಅತ್ಯಂತ ಮಹತ್ವದ ಪಾತ್ರ ವಹಿಸಿದೆ. ವಾಯುಪಡೆಯು ನಡೆಸಿದ ಸೇನಾ ಕಾರ್ಯಾಚರಣೆಗಳಲ್ಲಿ ಆಪರೇಷನ್ ವಿಜಯ್, ಆಪರೇಷನ್ ಮೇಘದೂತ್, ಆಪರೇಷನ್ ಕ್ಯಾಕ್ಟಸ್, ಆಪರೇಷನ್ ಪೂಮಲೈ, ಆಪರೇಷನ್ ರಾಹತ್ ಇತ್ಯಾದಿಗಳು ಅತ್ಯಂತ ಪ್ರಮುಖವಾಗಿವೆ
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm