ಬ್ರೇಕಿಂಗ್ ನ್ಯೂಸ್
19-09-22 01:41 pm HK News Desk ದೇಶ - ವಿದೇಶ
ಮುಂಬೈ, ಸೆ.19: ಭಾರತೀಯ ಮಾರುಕಟ್ಟೆಯಲ್ಲಿ ಪ್ರಾಬಲ್ಯ ಮೆರೆದಿರುವ 'ಜಾನ್ಸನ್ ಆಂಡ್ ಜಾನ್ಸನ್' ಬೇಬಿ ಪೌಡರ್ಗೆ ಮಹಾರಾಷ್ಟ್ರ ಸರ್ಕಾರ ನಿಷೇಧ ಹೇರಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದಾಗಿ ಮಹಾರಾಷ್ಟ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಜಾನ್ಸನ್ ಆಂಡ್ ಜಾನ್ಸನ್ ಬೇಬಿ ಪೌಡರ್ನಿಂದ ಮಕ್ಕಳ ಚರ್ಮದ ಮೇಲಾಗುವ ಪರಿಣಾಮಗಳ ಬಗ್ಗೆ ದೂರುಗಳು ಕೇಳಿ ಬಂದಿತ್ತು. ಹೀಗಾಗಿ ಅವುಗಳ ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿತ್ತು. ಪ್ರಯೋಗಾಲಯದಿಂದ ಬಂದ ಫಲಿತಾಂಶದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.
ಕೋಲ್ಕತ್ತಾದ ಕೇಂದ್ರ ಔಷಧೀಯ ಪ್ರಯೋಗಾಲಯದ ವರದಿ ಕೂಡ, ಜಾನ್ಸನ್ ಆಂಡ್ ಜಾನ್ಸನ್ ಬೇಬಿ ಪೌಡರ್ ಶಿಶುಗಳ ಆರೋಗ್ಯಕ್ಕೆ ಒಳ್ಳೆಯದಲ್ಲ ಎನ್ನುವ ವರದಿ ನೀಡಿತ್ತು. ಇದಾದ ಬಳಿಕ ಮಹಾರಾಷ್ಟ್ರ ಸರ್ಕಾರ ಇಂಥಹದ್ದೊಂದು ನಿರ್ಧಾರ ತೆಗೆದುಕೊಂಡಿದೆ.
ನಿಷೇಧ ಹೇರುವುದಕ್ಕೂ ಮುನ್ನ ಮಹಾರಾಷ್ಟ್ರ ಆಹಾರ ಹಾಗೂ ಔಷಧ ಆಡಳಿತವು ಜಾನ್ಸನ್ ಆಂಡ್ ಜಾನ್ಸನ್ ಬೇಬಿ ಪೌಡರ್ನ ಸ್ಯಾಂಪಲ್ಗಳನ್ನು ಪುಣೆ ಹಾಗೂ ನಾಸಿಕ್ನಲ್ಲಿರುವ ಪ್ರಯೋಗಾಲಯಕ್ಕೆ ಕಳುಹಿಸಿ ಪರೀಕ್ಷೆಗೆ ಒಳಪಡಿಸಿತ್ತು. ಅಲ್ಲಿಂದ ಬಂದ ವರದಿಯನ್ವಯ ಇದೀಗ ಲೈಸೆನ್ಸ್ ರದ್ದು ಮಾಡುವ ನಿರ್ಧಾರ ಕೈಗೊಂಡಿದೆ.
ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾದ ಸ್ಯಾಂಪಲ್ಗಳು 'ಪ್ರಾಮಾಣಿತ ಗುಣಮಟ್ಟ'ದಲ್ಲಿ ಇಲ್ಲ. IS 5339:2004 ಹೇಳಲಾದ ಗುಣಮಟ್ಟದಲ್ಲಿ ಇಲ್ಲ ಎಂದು ಪರೀಕ್ಷೆಯಲ್ಲಿ ಗೊತ್ತಾಗಿದೆ.
ಹೀಗಾಗಿ ಡ್ರಗ್ಸ್ ಕಾಸ್ಮೆಟಿಕ್ಸ್ ಕಾಯ್ದೆ 1940 ರ ಅನ್ವಯ ಜಾನ್ಸನ್ ಆಂಡ್ ಜಾನ್ಸನ್ ಕಂಪನಿಗೆ ಮಹಾರಾಷ್ಟ್ರ ಆಹಾರ ಹಾಗೂ ಔಷಧ ಆಡಳಿತ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಅಲ್ಲದೇ ಮಾರುಕಟ್ಟೆಯಲ್ಲಿ ಇರುವ ಉತ್ಪನ್ನಗಳನ್ನು ಹಿಂಪಡೆಯಬೇಕು ಎಂದು ನಿರ್ದೇಶನ ನೀಡಿದೆ.
ಇನ್ನು ಮಹಾರಾಷ್ಟ್ರ ಆಹಾರ ಹಾಗೂ ಔಷಧ ಆಡಳಿತ ನೀಡಿರುವ ನೊಟಿಸ್ಗೆ ಕಂಪನಿ ಪ್ರತಿಕ್ರಿಯೆ ನೀಡಿದ್ದು, ಇದರ ವಿರುದ್ಧ ನ್ಯಾಯಾಲಯಕ್ಕೆ ಹೋಗುವುದಾಗಿ ತಿಳಿಸಿದೆ.
Maharashtra's Food and Drugs Administration (FDA) on Friday cancelled the baby powder manufacturing licence of Johnson & Johnson Pvt Ltd "in the interest of public health at large". In a release, the state government agency said the company's product, Johnson's Baby Powder, may affect the skin of newborn babies.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 02:36 pm
HK News Staffer
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
21-04-26 03:13 pm
HK News Staffer
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am