ಬ್ರೇಕಿಂಗ್ ನ್ಯೂಸ್
21-09-22 12:03 pm HK News Desk ದೇಶ - ವಿದೇಶ
ನವದೆಹಲಿ ಸೆ 21: ಜನಪ್ರಿಯ ಹಾಸ್ಯನಟ ರಾಜು ಶ್ರೀವಾಸ್ತವ್ (58) ಇಂದು ನವದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ನಲ್ಲಿ ನಿಧನರಾದರು.
ಸ್ಟ್ಯಾಂಡ್-ಅಪ್ ಕಮೇಡಿಯನ್ ಆಗಿರುವ ರಾಜು ಶ್ರೀವಾಸ್ತವ್ ಆಗಸ್ಟ್ 10 ರಂದು ಜಿಮ್ನಲ್ಲಿ ದೈಹಿಕ ಕಸರತ್ತು ಮಾಡುತ್ತಿದ್ದಾಗ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದರು. ನಂತರ ರಾಜು ಅವರನ್ನು ಏಮ್ಸ್ಗೆ ದಾಖಲಿಸಲಾಗಿತ್ತು. ಆ ಬಳಿಕ ಅವರು ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದರು. ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ರಾಜು ಶ್ರೀವಾಸ್ತವ್ ಅವರು ಕೊನೆಯುಸಿರೆಳಿದಿದ್ದಾರೆ.
ರಾಜು ಶ್ರೀವಾಸ್ತವ್ ಅವರು ತಮ್ಮ ಸಮಯೋಚಿತ ಹಾಸ್ಯ ಮತ್ತು ಕಾಮಿಕ್ ಟೇಕ್ಗಳ ಮೂಲಕ ಸ್ಟ್ಯಾಂಡ್-ಅಪ್ ಕಾಮಿಡಿ ಜಗತ್ತಿನಲ್ಲಿ ತಮ್ಮದೇ ಆದ ಹೆಸರು ಮಾಡಿದ್ದರು. 2005 ರಲ್ಲಿಮೊದಲ ಸೀಸನ್ ಪ್ರಥಮ ಪ್ರದರ್ಶನದೊಂದಿಗೆ 'ದಿ ಗ್ರೇಟ್ ಇಂಡಿಯನ್ ಲಾಫ್ಟರ್ ಚಾಲೆಂಜ್' ಎಂಬ ಮೊದಲ ಸ್ಟ್ಯಾಂಡ್-ಅಪ್ ಕಾಮಿಡಿ ಟ್ಯಾಲೆಂಟ್ ಹಂಟ್ ಶೋನೊಂದಿಗೆ ಅವರು ಖ್ಯಾತಿಯನ್ನು ಪಡೆದರು.
ಅವರು "ಮೈನೆ ಪ್ಯಾರ್ ಕಿಯಾ", "ಬಾಜಿಗರ್", "ಬಾಂಬೆ ಟು ಗೋವಾ" (ರೀಮೇಕ್) ಮತ್ತು "ಆಮ್ದಾನಿ ಅಥಾನಿ ಖರ್ಚಾ ರುಪೈಯಾ" ಮುಂತಾದ ಹಿಂದಿ ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಅವರು "ಬಿಗ್ ಬಾಸ್" ಸೀಸನ್ ಮೂರರಲ್ಲಿ ಸ್ಪರ್ಧಿಗಳಲ್ಲಿ ಒಬ್ಬರಾಗಿದ್ದರು. ಜೊತೆಗೆ ಅವರು ಉತ್ತರ ಪ್ರದೇಶ ಚಲನಚಿತ್ರ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿದ್ದರು.
Raju Srivastava passed away today after being in the ICU for 41 days. The comedian-actor had suffered a heart attack while working out in the gym last month. The 58-year-old artiste is survived by his wife and two children.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm