ಬ್ರೇಕಿಂಗ್ ನ್ಯೂಸ್
08-10-20 06:54 pm Headline Karnataka News Network ದೇಶ - ವಿದೇಶ
ನವ ದೆಹಲಿ, ಅಕ್ಟೋಬರ್ .08 : ಲಾಕ್ಡೌನ್ ನಿಂದಾಗಿ ಹೋಟೆಲ್ ಉದ್ಯಮಕ್ಕೆ ಭಾರೀ ಪೆಟ್ಟುಬಿದ್ದಿದ್ದು, ಚಿಕ್ಕಪುಟ್ಟ ಡಾಬಾಗಳ ಮುಖಾಂತರ ಸಾವಿರಾರು ಜನರಿಗೆ ಆಹಾರ ಪೂರೈಕೆ ಮಾಡುತ್ತಿದ್ದ ಹೋಟೆಲ್ ಗಳು ಅಕ್ಷರಶಃ ನಲುಗಿಹೋಗಿದೆ.
ಇಂಥದ್ದೇ ಸಮಸ್ಯೆ ಎದುರಿಸುತ್ತಿದ್ದ ಕುಟುಂಬವೊಂದಕ್ಕೆ ಇದೀಗ ಸಾಮಾಜಿಕ ಜಾಲತಾಣದ ಮುಖಾಂತರ ನೆರವಿನ ಹಸ್ತ ಸಿಕ್ಕಿದೆ.
ಹೌದು. 80 ವರ್ಷದ ವೃದ್ಧ ದಂಪತಿ ದಕ್ಷಿಣ ದಿಲ್ಲಿಯ ಮಾಲವೀಯಾ ನಗರ್ ಪ್ರದೇಶದ ರಸ್ತೆ ಬದಿಯಲ್ಲಿ ಬಾಬಾ ಕಾ ಡಾಬಾ ಹೆಸರಿನಲ್ಲಿ ಹೊಟೇಲ್ ನಡೆಸುತ್ತಿದ್ದರು. ಆದರೆ ಕೊರೊನಾ ನಂತರದಲ್ಲಿ ಡಾಬಾಕ್ಕೆ ಜನರು ಬರದೇ ಇದ್ದುದ್ದನ್ನು ಕಂಡ ದಂಪತಿಗೆ ದಿಕ್ಕೇ ತೋಚದಂತಾಗಿತ್ತು. ಡಾಬಾ ಬಂದ್ ಆಗಿದ್ದರಿಂದ ತುತ್ತು ಅನ್ನಕ್ಕೂ ಪರದಾಡುವ ಪರಿಸ್ಥಿತಿ ಉಂಟಾಗಿತ್ತು. ದೆಹಲಿಯಲ್ಲಿ ಇನ್ನೂ ಪರಿಸ್ಥಿತಿ ಸಂಪೂರ್ಣ ಸಹಜ ಸ್ಥಿತಿಗೆ ಬರದ ಹಿನ್ನೆಲೆಯಲ್ಲಿ ಇವರ ಗೋಳು ಕೇಳುವವರೇ ಇರಲಿಲ್ಲ.

ಇದರಿಂದ ತೀವ್ರ ತೊಂದರೆಗೊಳಗಾದ ವೃದ್ಧ, ಕ್ಯಾಮರಾ ಮುಂದೆ ಕಣ್ಣೀರಿಟ್ಟಿದ್ದರು. ಈ ವಿಡಿಯೋವನ್ನು ವಸುಂಧರಾ ಶರ್ಮ ಎನ್ನುವವರು ತಮ್ಮ ಟ್ವಿಟರ್ನಲ್ಲಿ ಹಂಚಿಕೊಂಡಿದ್ದರು. ಬದುಕು ಹೇಗೆ ಮೂರಾಬಟ್ಟೆಯಾಗಿದೆ ಎನ್ನುವುದನ್ನು ಎಳೆಎಳೆಯಾಗಿ ಬಿಚ್ಚಿಟ್ಟ ದಂಪತಿಯ ವಿಡಿಯೋ, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಅನೇಕರು ಅಜ್ಜನ ಡಾಬಾಕ್ಕೆ ಹೋಗಿ ಊಟ ಮಾಡುತ್ತಿದ್ದಾರೆ.
ಬಾಬಾ ಕಾ ಡಾಬಾ ಎಂಬ ಹೆಸರಿನ ಈ ಟ್ವಿಟರ್ ಅದೆಷ್ಟು ಮನಕ್ಕೆ ನಾಟಿದೆ ಎಂದರೆ ಬಾಲಿವುಡ್ ಸೆಲೆಬ್ರಿಟಿಗಳು, ರಾಜಕಾರಣಿಗಳು ಸೇರಿದಂತೆ ಸಾರ್ವಜನಿಕರಿಂದ ಸಹಾಯದ ನೆರವೇ ಹರಿದುಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಟಾಪ್ ಟ್ರೆಂಡ್ ಆಗಿರುವ ಈ ಟ್ವಿಟರ್ ಸಾವಿರಾರು ಮನಸ್ಸನ್ನು ಗೆದ್ದುಬಿಟ್ಟಿದೆ.
ಬಾಲಿವುಡ್ ತಾರೆಯರಾದ ರವೀನಾ ಟಂಡನ್, ರಣದೀಪ್ ಹೂಡಾ, ಸ್ವರಾ ಭಾಸ್ಕರ್, ಗೌರವ್ ವಾಸನ್, ರವಿಚಂದ್ರ ಅಶ್ವಿನ್, ಸೋನಂ ಕಪೂರ್ ಸೇರಿದಂತೆ ಹಲವಾರು ಮಂದಿ ನೆರವಿಗೆ ಧಾವಿಸಿದ್ದಾರೆ. ಆಮ್ ಆದ್ಮಿ ಪಕ್ಷದ ಶಾಸಕ ಸೋಮನಾಥ ಭಾರತಿ ಅವರೂ ಖುದ್ದು ಡಾಬಾಕ್ಕೆ ಭೇಟಿಕೊಟ್ಟು ಸಹಾಯದ ಭರವಸೆ ನೀಡಿದ್ದಾರೆ.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm