ಬ್ರೇಕಿಂಗ್ ನ್ಯೂಸ್
21-09-22 10:06 pm HK News Desk ದೇಶ - ವಿದೇಶ
ನವದೆಹಲಿ, ಸೆ.21: ಹಿಜಾಬ್ ಕುರಿತ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟಿನಲ್ಲಿ 9ನೇ ದಿನಕ್ಕೆ ಕಾಲಿಟ್ಟಿದ್ದು, ಕರ್ನಾಟಕ ಸರಕಾರದ ಪರವಾಗಿ ರಾಜ್ಯದ ಅಡ್ವಕೇಟ್ ಜನರಲ್ ಪ್ರಭುಲಿಂಗ ನಾವದಗಿ ಬುಧವಾರ ವಾದ ಮಂಡಿಸಿದ್ದಾರೆ. ಹಿಜಾಬ್ ಧಾರಣೆ ಎನ್ನುವುದು ಮೂಲಭೂತ ಹಕ್ಕಿನ ವ್ಯಾಪ್ತಿಯಲ್ಲಿ ಬರುವುದಿಲ್ಲ. ಹಾಗಾಗಿ ಸಂವಿಧಾನದ ಕಲಂ 25ರ ಧಾರ್ಮಿಕ ಸ್ವಾತಂತ್ರ್ಯದಡಿ ಹಿಜಾಬ್ ಧಾರಣೆ ಬರುವುದಿಲ್ಲ ಎಂದು ವಾದಿಸಿದ್ದಾರೆ.
ಸಂವಿಧಾನದ ಆರ್ಟಿಕಲ್ 25ರಡಿ ಎಲ್ಲ ಧಾರ್ಮಿಕ ಆಚರಣೆಗಳನ್ನು ಮೂಲಭೂತ ಹಕ್ಕೆಂದು ಹೇಳಿಲ್ಲ. ಎಲ್ಲ ರೀತಿಯ ಧಾರ್ಮಿಕ ಆಚರಣೆಯನ್ನು ಧಾರ್ಮಿಕ ಹಕ್ಕೆಂದು ಪರಿಗಣಿಸಲಾಗಿಲ್ಲ ಎಂದು ಹೇಳಿದ ನಾವದಗಿ, ಸುಪ್ರೀಂ ಕೋರ್ಟ್ ಈ ಹಿಂದೆ ನೀಡಿದ್ದ ತೀರ್ಪುಗಳನ್ನು ಉಲ್ಲೇಖಿಸಿದರು. ತ್ರಿವಳಿ ತಲಾಖ್ ಮತ್ತು ಗೋಹತ್ಯೆ ವಿಚಾರವನ್ನು ಇಸ್ಲಾಮಿನ ಧಾರ್ಮಿಕ ಆಚರಣೆಯೆಂದು ಪರಿಗಣಿಸಿಲ್ಲ. ಇದೀಗ ಹಿಜಾಬ್ ಧಾರಣೆಯು ಅತ್ಯಗತ್ಯ ಧಾರ್ಮಿಕ ಆಚರಣೆಯೆಂದು ಸಾಬೀತು ಮಾಡಬೇಕಿದೆ. ಆಗಮಾತ್ರ ಸಂವಿಧಾನದ ಧಾರ್ಮಿಕ ಸ್ವಾತಂತ್ರ್ಯದಡಿ ರಕ್ಷಣೆ ಲಭ್ಯವಾಗುತ್ತದೆ ಎಂದು ಹೇಳಿದರು.
ಹಿಜಾಬ್ ಧಾರಣೆಯು ಮೂಲಭೂತ ಹಕ್ಕಿನಡಿ ಬರುವುದಿಲ್ಲವಾದ್ದರಿಂದ ಶಿಕ್ಷಣ ಸಂಸ್ಥೆಗಳಲ್ಲಿ ತರಗತಿಯೊಳಗೆ ಹಿಜಾಬ್ ನಿಷೇಧ ಮಾಡಿದ್ದು ಸರಿಯಾಗಿಯೇ ಇದೆ. ಶಾಲೆ, ಕಾಲೇಜುಗಳಲ್ಲಿ ಸರಕಾರ ಹಿಜಾಬ್ ನಿಷೇಧಿಸಿರುವುದನ್ನು ಉಲ್ಲಂಘಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಕರ್ನಾಟಕ ಸರಕಾರವು ಶಿಕ್ಷಣ ಸಂಸ್ಥೆಗಳಲ್ಲಿ ಶಿಸ್ತು ಮೂಡಿಸುವ ಉದ್ದೇಶದಿಂದ ಸಮವಸ್ತ್ರ ನೀತಿ ಜಾರಿಗೆ ತಂದಿದ್ದು ತರಗತಿಯೊಳಗೆ ಮಾತ್ರ ಹಿಜಾಬ್ ನಿಷೇಧ ಮಾಡಿದೆ. ಶಾಲೆ ಆವರಣ ಅಥವಾ ಕಾಲೇಜು ಆವರಣಕ್ಕೆ ಹಿಜಾಬ್ ಧರಿಸಿ ಬರಬಹುದು. ಕೇವಲ ತರಗತಿಯ ಒಳಗೆ ಮಾತ್ರ ಹಿಜಾಬ್ ಧರಿಸುವಂತಿಲ್ಲ ಎಂದು ಹೇಳಿರುವುದು. ಇದರಲ್ಲಿ ತಪ್ಪೆಂದು ಕಂಡುಬರುವುದಿಲ್ಲ. ಎಲ್ಲರೂ ಸಮಾನರು ಅನ್ನುವ ದೃಷ್ಟಿಯಿಂದ ವಸ್ತ್ರ ಸಂಹಿತೆ ಜಾರಿಗೆ ತರಲಾಗಿದೆ ಎಂದು ಹೇಳಿದ್ದಾರೆ.
The Supreme Court on Wednesday asked the counsel appearing for the petitioners in the Karnataka hijab ban controversy to wrap up their rebuttal arguments within an hour tomorrow, saying “we are losing our patience". The apex court, which heard submissions in the matter for the ninth day, said it would give just one hour to the lawyers for the petitioners to conclude their arguments on Thursday. “We will give one hour time to all of you. You finish that. Now, it is an overdose of hearing," a bench of Justices Hemant Gupta and Sudhanshu Dhulia told senior advocate Huzefa Ahmadi.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm