ಬ್ರೇಕಿಂಗ್ ನ್ಯೂಸ್
21-09-22 10:06 pm HK News Desk ದೇಶ - ವಿದೇಶ
ನವದೆಹಲಿ, ಸೆ.21: ಹಿಜಾಬ್ ಕುರಿತ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟಿನಲ್ಲಿ 9ನೇ ದಿನಕ್ಕೆ ಕಾಲಿಟ್ಟಿದ್ದು, ಕರ್ನಾಟಕ ಸರಕಾರದ ಪರವಾಗಿ ರಾಜ್ಯದ ಅಡ್ವಕೇಟ್ ಜನರಲ್ ಪ್ರಭುಲಿಂಗ ನಾವದಗಿ ಬುಧವಾರ ವಾದ ಮಂಡಿಸಿದ್ದಾರೆ. ಹಿಜಾಬ್ ಧಾರಣೆ ಎನ್ನುವುದು ಮೂಲಭೂತ ಹಕ್ಕಿನ ವ್ಯಾಪ್ತಿಯಲ್ಲಿ ಬರುವುದಿಲ್ಲ. ಹಾಗಾಗಿ ಸಂವಿಧಾನದ ಕಲಂ 25ರ ಧಾರ್ಮಿಕ ಸ್ವಾತಂತ್ರ್ಯದಡಿ ಹಿಜಾಬ್ ಧಾರಣೆ ಬರುವುದಿಲ್ಲ ಎಂದು ವಾದಿಸಿದ್ದಾರೆ.
ಸಂವಿಧಾನದ ಆರ್ಟಿಕಲ್ 25ರಡಿ ಎಲ್ಲ ಧಾರ್ಮಿಕ ಆಚರಣೆಗಳನ್ನು ಮೂಲಭೂತ ಹಕ್ಕೆಂದು ಹೇಳಿಲ್ಲ. ಎಲ್ಲ ರೀತಿಯ ಧಾರ್ಮಿಕ ಆಚರಣೆಯನ್ನು ಧಾರ್ಮಿಕ ಹಕ್ಕೆಂದು ಪರಿಗಣಿಸಲಾಗಿಲ್ಲ ಎಂದು ಹೇಳಿದ ನಾವದಗಿ, ಸುಪ್ರೀಂ ಕೋರ್ಟ್ ಈ ಹಿಂದೆ ನೀಡಿದ್ದ ತೀರ್ಪುಗಳನ್ನು ಉಲ್ಲೇಖಿಸಿದರು. ತ್ರಿವಳಿ ತಲಾಖ್ ಮತ್ತು ಗೋಹತ್ಯೆ ವಿಚಾರವನ್ನು ಇಸ್ಲಾಮಿನ ಧಾರ್ಮಿಕ ಆಚರಣೆಯೆಂದು ಪರಿಗಣಿಸಿಲ್ಲ. ಇದೀಗ ಹಿಜಾಬ್ ಧಾರಣೆಯು ಅತ್ಯಗತ್ಯ ಧಾರ್ಮಿಕ ಆಚರಣೆಯೆಂದು ಸಾಬೀತು ಮಾಡಬೇಕಿದೆ. ಆಗಮಾತ್ರ ಸಂವಿಧಾನದ ಧಾರ್ಮಿಕ ಸ್ವಾತಂತ್ರ್ಯದಡಿ ರಕ್ಷಣೆ ಲಭ್ಯವಾಗುತ್ತದೆ ಎಂದು ಹೇಳಿದರು.

ಹಿಜಾಬ್ ಧಾರಣೆಯು ಮೂಲಭೂತ ಹಕ್ಕಿನಡಿ ಬರುವುದಿಲ್ಲವಾದ್ದರಿಂದ ಶಿಕ್ಷಣ ಸಂಸ್ಥೆಗಳಲ್ಲಿ ತರಗತಿಯೊಳಗೆ ಹಿಜಾಬ್ ನಿಷೇಧ ಮಾಡಿದ್ದು ಸರಿಯಾಗಿಯೇ ಇದೆ. ಶಾಲೆ, ಕಾಲೇಜುಗಳಲ್ಲಿ ಸರಕಾರ ಹಿಜಾಬ್ ನಿಷೇಧಿಸಿರುವುದನ್ನು ಉಲ್ಲಂಘಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಕರ್ನಾಟಕ ಸರಕಾರವು ಶಿಕ್ಷಣ ಸಂಸ್ಥೆಗಳಲ್ಲಿ ಶಿಸ್ತು ಮೂಡಿಸುವ ಉದ್ದೇಶದಿಂದ ಸಮವಸ್ತ್ರ ನೀತಿ ಜಾರಿಗೆ ತಂದಿದ್ದು ತರಗತಿಯೊಳಗೆ ಮಾತ್ರ ಹಿಜಾಬ್ ನಿಷೇಧ ಮಾಡಿದೆ. ಶಾಲೆ ಆವರಣ ಅಥವಾ ಕಾಲೇಜು ಆವರಣಕ್ಕೆ ಹಿಜಾಬ್ ಧರಿಸಿ ಬರಬಹುದು. ಕೇವಲ ತರಗತಿಯ ಒಳಗೆ ಮಾತ್ರ ಹಿಜಾಬ್ ಧರಿಸುವಂತಿಲ್ಲ ಎಂದು ಹೇಳಿರುವುದು. ಇದರಲ್ಲಿ ತಪ್ಪೆಂದು ಕಂಡುಬರುವುದಿಲ್ಲ. ಎಲ್ಲರೂ ಸಮಾನರು ಅನ್ನುವ ದೃಷ್ಟಿಯಿಂದ ವಸ್ತ್ರ ಸಂಹಿತೆ ಜಾರಿಗೆ ತರಲಾಗಿದೆ ಎಂದು ಹೇಳಿದ್ದಾರೆ.
The Supreme Court on Wednesday asked the counsel appearing for the petitioners in the Karnataka hijab ban controversy to wrap up their rebuttal arguments within an hour tomorrow, saying “we are losing our patience". The apex court, which heard submissions in the matter for the ninth day, said it would give just one hour to the lawyers for the petitioners to conclude their arguments on Thursday. “We will give one hour time to all of you. You finish that. Now, it is an overdose of hearing," a bench of Justices Hemant Gupta and Sudhanshu Dhulia told senior advocate Huzefa Ahmadi.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm