ಬ್ರೇಕಿಂಗ್ ನ್ಯೂಸ್
08-10-20 07:31 pm Headline Karnataka News Network ದೇಶ - ವಿದೇಶ
ಮುಂಬೈ, ಅಕ್ಟೋಬರ್ 8: ಸುಶಾಂತ್ ಸಿಂಗ್ ಸಾವಿನ ಬಗ್ಗೆ ಆತ್ಮಹತ್ಯೆಯಲ್ಲ, ಕೊಲೆಯೆಂದು ಸುದ್ದಿ ಮಾಡಿ ಮುಖಭಂಗಕ್ಕೀಡಾಗಿರುವ ರಿಪಬ್ಲಿಕ್ ಟಿವಿ ವಿರುದ್ಧ ಮುಂಬೈ ಪೊಲೀಸರೇ ತಿರುಗಿ ಬಿದ್ದಿದ್ದಾರೆ. ರಿಪಬ್ಲಿಕ್ ಸೇರಿದಂತೆ ಮೂರು ಟಿವಿ ವಾಹಿನಿಗಳು ಟಿಆರ್ ಪಿ ಹೆಚ್ಚಿಸಿಕೊಂಡು ಆದಾಯ ಪಡೆದುಕೊಳ್ಳುವುದಕ್ಕಾಗಿ ತಂತ್ರ ಹೂಡಿದ್ದರು. ಮೋಸದ ಜಾಲದ ಮೂಲಕ ಮನೆ, ಮನೆಗೆ ತಮ್ಮ ಎಕ್ಸಿಕ್ಯೂಟಿವ್ ಗಳನ್ನು ಕಳಿಸಿ ಬಡವರಿಗೆ ಹಣಕೊಟ್ಟು ಟಿಆರ್ ಪಿ ಹೆಚ್ಚಿಸಿಕೊಳ್ಳುತ್ತಿದ್ದರು ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಮುಂಬೈ ಪೊಲೀಸ್ ಕಮಿಷನರ್ ಪರಮ್ ವೀರ್ ಸಿಂಗ್, ಅರ್ನಾಬ್ ಗೋಸ್ವಾಮಿ ಒಡೆತನದ ರಿಪಬ್ಲಿಕ್ ಟಿವಿ, ಮರಾಠಿ ಭಾಷೆಯ ಫ್ಯಾಕ್ಟ್ ಮರಾಠಿ ಮತ್ತು ಬಾಕ್ಸ್ ಸಿನಿಮಾ ವಾಹಿನಿಗಳ ವಿರುದ್ಧ ತನಿಖೆ ನಡೆಸಲಾಗುತ್ತಿದೆ. ಮರಾಠಿ ಟಿವಿ ವಾಹಿನಿಗಳ ಇಬ್ಬರು ಮಾಲೀಕರನ್ನು ಬಂಧಿಸಲಾಗಿದೆ. ರಿಪಬ್ಲಿಕ್ ಟಿವಿ ಡೈರೆಕ್ಟರ್ ಒಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಸುಳ್ಳು ಸುದ್ದಿಗಳನ್ನು ಪ್ರಚಾರ ನೀಡುವುದಕ್ಕಾಗಿ ಮತ್ತು ತಮ್ಮದೇ ಚಾನೆಲ್ ಹಾಕುವಂತೆ ಬಡ ಮನೆಗಳ ಮಂದಿಗೆ ಹಣ ಕೊಟ್ಟು ಪ್ರೇರಿಸುತ್ತಿದ್ದರು. ಈ ಮೂಲಕ ಟಿಆರ್ ಪಿ ಹೆಚ್ಚಿರುವುದಾಗಿ ತೋರಿಸಿಕೊಂಡು ಹೆಚ್ಚು ಆದಾಯ ಬರುವ ಜಾಹೀರಾತು ಪಡೆಯುತ್ತಿದ್ದರು. ಈ ಮೂಲಕ ಹೆಚ್ಚು ಪಡೆದಿದ್ದು ತನಿಖೆಯಲ್ಲಿ ದೃಢ ಪಟ್ಟರೆ ವಾಹಿನಿಗಳ ಖಾತೆಯನ್ನು ಸೀಝ್ ಮಾಡುವುದಾಗಿ ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ರಿಪಬ್ಲಿಕ್ ಟಿವಿಯ ಅರ್ನಾಬ್ ಗೋಸ್ವಾಮಿ, ಮುಂಬೈ ಪೊಲೀಸ್ ಕಮಿಷನರ್ ಸುಳ್ಳು ಮಾಹಿತಿಗಳನ್ನು ಹೇಳುತ್ತಿದ್ದಾರೆ. ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದಾರೆ.
Fake TRP racket busted! Names republic TV as one of the 3 channels under scanner. People paid off to manipulate viewership numbers. 2 Accused arrested
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm